ನಾರಾಯಣಮೂರ್ತಿ ಮನವಿ ತಿರಸ್ಕರಿಸಿದ ಇನ್ಫೋಸಿಸ್ ಆಡಳಿತ ಮಂಡಳಿ
ಇಸ್ರೇಲ್ ಸಂಸ್ಥೆ ಖರೀದಿಯ ವಿಚಾರದಲ್ಲಿನ ತನಿಖಾ ವರದಿಯನ್ನು ಬಹಿರಂಗಗೊಳಿಸಬೇಕು ಎನ್ನುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮನವಿಯನ್ನು ಸಂಸ್ಥೆಯ ಆಡಳಿತ ಮಂಡಳಿ ತಿರಸ್ಕರಿಸಿದೆ.
ಬೆಂಗಳೂರು, ಆ 4: ಇಸ್ರೇಲ್ ಸಂಸ್ಥೆ ಖರೀದಿಯ ವಿಚಾರದಲ್ಲಿನ ತನಿಖಾ ವರದಿಯನ್ನು ಬಹಿರಂಗಗೊಳಿಸಬೇಕು ಎನ್ನುವ ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರ ಮನವಿಯನ್ನು ಸಂಸ್ಥೆಯ ಆಡಳಿತ ಮಂಡಳಿ ತಿರಸ್ಕರಿಸಿದೆ.
ಇಸ್ರೇಲ್ ಮೂಲದ ಪನಯಾ ಸಂಸ್ಥೆಯನ್ನು ಇನ್ಫೋಸಿಸ್ 1,300 ಕೋಟಿ ರೂಪಾಯಿಗೆ ಖರೀದಿಸಿತ್ತು. ಈ ವ್ಯವಹಾರದಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿತ್ತು ಎಂದು ಅನಾಮಧೇಯ ವ್ಯಕ್ತಿಗಳು ಷೇರು ಪೇಟೆ ನಿಯಂತ್ರಣ ಮಂಡಳಿಗೆ ಪತ್ರ ಬರೆದಿದ್ದರು.
ಈ ಪತ್ರ ಬಹಿರಂಗವಾಗುತ್ತಿದ್ದಂತೇ ಇನ್ಫೋಸಿಸ್ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿತ್ತು. ತನಿಖಾ ವರದಿಯಲ್ಲಿ ಇಸ್ರೇಲ್ ಕಂಪೆನಿ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಈ ಡೀಲ್ ಪಾರದರ್ಶಕವಾಗಿದೆ ಎನ್ನುವ ವರದಿ ಬಂದಿತ್ತು.

ವರದಿಯಲ್ಲಿನ ಅಂಶಗಳನ್ನು ಬಹಿರಂಗಗೊಳಿಸಬೇಕೆಂದು ನಾರಾಯಣಮೂರ್ತಿ ಆಡಳಿತ ಮಂಡಳಿಗೆ ಮೂರು ವಾರದ ಹಿಂದೆ ಪತ್ರ ಬರೆದಿದ್ದರು. ಮೂರ್ತಿ ಮನವಿಯನ್ನು ಇನ್ಫೋಸಿಸ್ ತಿರಸ್ಕರಿಸುವ ಮೂಲಕ, ಸಂಸ್ಥೆಯಲ್ಲಿನ ಆಡಳಿತ ಮಂಡಳಿಯ ಕಲಹ ಮತ್ತೆ ಬಹಿರಂಗವಾಗಿದೆ.
ವೈಯಕ್ತಿಕ ಹಾಗೂ ಔದ್ಯೋಗಿಕ ಜೀವನದಲ್ಲೇ ಇನ್ಫೋಸಿಸ್ ಅಧ್ಯಕ್ಷ ಸ್ಥಾನ ತ್ಯಜಿಸಿದ್ದು ತುಂಬ ವಿಷಾದಕರವಾದ ನಿರ್ಧಾರ. ಅಧ್ಯಕ್ಷ ಸ್ಥಾನದಿಂದ 2014ರಲ್ಲಿ ಕೆಳಗೆ ಇಳಿಯುವಾಗ ಸಹ ಸಂಸ್ಥಾಪಕರ ಮಾತು ಕೇಳಬೇಕಾಗಿತ್ತು. ಅದು ನನ್ನ ಜೀವನದಲ್ಲಿನ ಅತಿ ದೊಡ್ಡ ವಿಷಾದದ ನಿರ್ಧಾರ ಎಂದು ಎನ್ ಆರ್ ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದನು ಸ್ಮರಿಸಿಕೊಳ್ಳಬಹುದಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications