ಹೊಸ ಸಿಇಒಗಾಗಿ ಇನ್ಫೋಸಿಸ್ ಹುಡುಕಾಟ
ಬೆಂಗಳೂರು, ಏ.11: ದೇಶದ ಪ್ರಮುಖ ಐಟಿ ಉದ್ಯಮ ಸಂಸ್ಥೆ ಇನ್ಫೋಸಿಸ್ ನಲ್ಲಿ ಈಗ ಹೊಸ ಸಿಇಒಗಾಗಿ ಹುಡುಕಾಟ ನಡೆದಿದೆ. ಹಾಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಡಿ ಶಿಬುಲಾಲ್ ಅವರ ಅಧಿಕಾರ ಅವಧಿ ಮುಗಿಯುತ್ತಾ ಬಂದಿದ್ದು, ಸದ್ಯದಲ್ಲೇ ಹುದ್ದೆಯನ್ನು ತೊರೆಯುತ್ತಾರೆ ಎಂಬ ಸುದ್ದಿ ಬಂದಿದೆ.
ಈಗಾಗಲೇ ಇನ್ಫೋಸಿಸ್ ನ ಬೋರ್ಡ್ ಸದಸ್ಯರು ತಮ್ಮಮ್ಮ ಅಭ್ಯರ್ಥಿಯ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಸಿಇಒ ಹುಡುಕಾಟದ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ ಎಂದು ತಿಳಿದು ಬಂದಿದೆ. ಶಿಬುಲಾಲ್ ಅವರು ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಮುಂದಿನ ಬೋರ್ಡ್ ಮೀಟಿಂಗ್ ನಂತರ ಅಥವಾ ಜ.9, 2015ರಂದು ತೊರೆಯುವ ನಿರೀಕ್ಷೆಯಿದೆ.
ಇನ್ಫೋಸಿಸ್ ನ ಸಹ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಕಳೆದ ಜೂನ್.1 ರಂದು ಮತ್ತೊಮ್ಮೆ ಇನ್ಫೋಸಿಸ್ ಬೋರ್ಡ್ ಗೆ ಮರಳಿದ್ದರು. ಎನ್ ಆರ್ ನಾರಾಯಣ ಮೂರ್ತಿ ಅವರನ್ನು ಕಾರ್ಯಕಾರಿ ಚೇಮರ್ನ್ ಆಗಿ ನೇಮಕ ಮಾಡಿದ ಮೇಲೆ ಇನ್ಫೋಸಿಸ್ ಉದ್ಯೋಗಿಗಳು ಹಾಗೂ ಷೇರುದಾರರಲ್ಲಿ ಹೊಸ ಉತ್ಸಾಹ, ನಿರೀಕ್ಷೆ ಮೂಡಿತ್ತು. ಇನ್ಫೋಸಿಸ್ 3.0 ಅನುಷ್ಠಾನದ ಭಾಗವಾಗಿ ಉದ್ಯೋಗಿಗಳಿಗೆ ಈಗ ಸಂಬಳ ಏರಿಕೆ ಸಿಹಿ ಸುದ್ದಿ ನೀಡಲಾಗಿತ್ತು. ಆದರೆ, ಇದರ ಬೆನ್ನಲ್ಲೇ ಸಾಲು ಸಾಲು ಹಿರಿಯ ಅಧಿಕಾರಿಗಳು ಸಂಸ್ಥೆ ತೊರೆದಿದ್ದರು. ಇನ್ಫೋಸಿಸ್ ನ ಮಾಜಿ ಉದ್ಯೋಗಿಗಳಲ್ಲಿ ನಂದನ್ ನಿಲೇಕಣಿ ಹಾಗೂ ಬಾಲಕೃಷ್ಣನ್ ಅವರು ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಭಾರತೀಯ ಹೊರ ಗುತ್ತಿಗೆ ಹಾಗೂ ಬಿಸಿಸೆಸ್ ಪ್ರೊಸೆಸಿಸ್ ಔಟ್ ಸೋರ್ಸಿಂಗ್ ಕ್ಷೇತ್ರದಲ್ಲಿ ಶೇ 13-15ರಷ್ಟು ಏರಿಕೆ ಕಾಣಬಹುದು ಎಂದು ನಾಸಾಕಾಂ ಹೇಳಿದ ಮೇಲೆ ನಿರೀಕ್ಷೆಗಳ ಗರಿಗೆದರಿತ್ತು. 2013-14 ರಷ್ಟು ಈ ಪ್ರಮಾಣ ಶೇ 12-14 ರಷ್ಟಿತ್ತು.
ಮುಂದಿನ ಆರ್ಥಿಕ ವರ್ಷದಲ್ಲಿ ಉದ್ಯೋಗಿಗಳ ಸಂಬಳ ಏರಿಕೆ, ಬೋನಸ್ ಅಂಕಿಗಳು ಏರಿಕೆ ಮಾಡುವಲ್ಲಿ ಸಂಸ್ಥೆ ಧಾರಳತನ ತೋರುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಕಳೆದ ಆರ್ಥಿಕ ವರ್ಷ ಶೇ 8 ರಷ್ಟು ಸಂಬಳ ಏರಿಕೆ ಪಡೆದಿದ್ದ ಉದ್ಯೋಗಿಗಳು ಮುಂದಿನ ವರ್ಷ ಶೇ 5-7 ರಷ್ಟು ಮಾತ್ರ ಸಂಬಳ ಏರಿಕೆ ನಿರೀಕ್ಷಿಸಬಹುದು ಎಂದು ಶಿಬುಲಾಲ್ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications