ಹೊಸ ಸಿಇಒಗಾಗಿ ಇನ್ಫೋಸಿಸ್ ಹುಡುಕಾಟ
ಬೆಂಗಳೂರು, ಏ.11: ದೇಶದ ಪ್ರಮುಖ ಐಟಿ ಉದ್ಯಮ ಸಂಸ್ಥೆ ಇನ್ಫೋಸಿಸ್ ನಲ್ಲಿ ಈಗ ಹೊಸ ಸಿಇಒಗಾಗಿ ಹುಡುಕಾಟ ನಡೆದಿದೆ. ಹಾಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಡಿ ಶಿಬುಲಾಲ್ ಅವರ ಅಧಿಕಾರ ಅವಧಿ ಮುಗಿಯುತ್ತಾ ಬಂದಿದ್ದು, ಸದ್ಯದಲ್ಲೇ ಹುದ್ದೆಯನ್ನು ತೊರೆಯುತ್ತಾರೆ ಎಂಬ ಸುದ್ದಿ ಬಂದಿದೆ.
ಈಗಾಗಲೇ ಇನ್ಫೋಸಿಸ್ ನ ಬೋರ್ಡ್ ಸದಸ್ಯರು ತಮ್ಮಮ್ಮ ಅಭ್ಯರ್ಥಿಯ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಸಿಇಒ ಹುಡುಕಾಟದ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ ಎಂದು ತಿಳಿದು ಬಂದಿದೆ. ಶಿಬುಲಾಲ್ ಅವರು ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಮುಂದಿನ ಬೋರ್ಡ್ ಮೀಟಿಂಗ್ ನಂತರ ಅಥವಾ ಜ.9, 2015ರಂದು ತೊರೆಯುವ ನಿರೀಕ್ಷೆಯಿದೆ.
ಇನ್ಫೋಸಿಸ್ ನ ಸಹ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಕಳೆದ ಜೂನ್.1 ರಂದು ಮತ್ತೊಮ್ಮೆ ಇನ್ಫೋಸಿಸ್ ಬೋರ್ಡ್ ಗೆ ಮರಳಿದ್ದರು. ಎನ್ ಆರ್ ನಾರಾಯಣ ಮೂರ್ತಿ ಅವರನ್ನು ಕಾರ್ಯಕಾರಿ ಚೇಮರ್ನ್ ಆಗಿ ನೇಮಕ ಮಾಡಿದ ಮೇಲೆ ಇನ್ಫೋಸಿಸ್ ಉದ್ಯೋಗಿಗಳು ಹಾಗೂ ಷೇರುದಾರರಲ್ಲಿ ಹೊಸ ಉತ್ಸಾಹ, ನಿರೀಕ್ಷೆ ಮೂಡಿತ್ತು. ಇನ್ಫೋಸಿಸ್ 3.0 ಅನುಷ್ಠಾನದ ಭಾಗವಾಗಿ ಉದ್ಯೋಗಿಗಳಿಗೆ ಈಗ ಸಂಬಳ ಏರಿಕೆ ಸಿಹಿ ಸುದ್ದಿ ನೀಡಲಾಗಿತ್ತು. ಆದರೆ, ಇದರ ಬೆನ್ನಲ್ಲೇ ಸಾಲು ಸಾಲು ಹಿರಿಯ ಅಧಿಕಾರಿಗಳು ಸಂಸ್ಥೆ ತೊರೆದಿದ್ದರು. ಇನ್ಫೋಸಿಸ್ ನ ಮಾಜಿ ಉದ್ಯೋಗಿಗಳಲ್ಲಿ ನಂದನ್ ನಿಲೇಕಣಿ ಹಾಗೂ ಬಾಲಕೃಷ್ಣನ್ ಅವರು ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಭಾರತೀಯ ಹೊರ ಗುತ್ತಿಗೆ ಹಾಗೂ ಬಿಸಿಸೆಸ್ ಪ್ರೊಸೆಸಿಸ್ ಔಟ್ ಸೋರ್ಸಿಂಗ್ ಕ್ಷೇತ್ರದಲ್ಲಿ ಶೇ 13-15ರಷ್ಟು ಏರಿಕೆ ಕಾಣಬಹುದು ಎಂದು ನಾಸಾಕಾಂ ಹೇಳಿದ ಮೇಲೆ ನಿರೀಕ್ಷೆಗಳ ಗರಿಗೆದರಿತ್ತು. 2013-14 ರಷ್ಟು ಈ ಪ್ರಮಾಣ ಶೇ 12-14 ರಷ್ಟಿತ್ತು.
ಮುಂದಿನ ಆರ್ಥಿಕ ವರ್ಷದಲ್ಲಿ ಉದ್ಯೋಗಿಗಳ ಸಂಬಳ ಏರಿಕೆ, ಬೋನಸ್ ಅಂಕಿಗಳು ಏರಿಕೆ ಮಾಡುವಲ್ಲಿ ಸಂಸ್ಥೆ ಧಾರಳತನ ತೋರುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಕಳೆದ ಆರ್ಥಿಕ ವರ್ಷ ಶೇ 8 ರಷ್ಟು ಸಂಬಳ ಏರಿಕೆ ಪಡೆದಿದ್ದ ಉದ್ಯೋಗಿಗಳು ಮುಂದಿನ ವರ್ಷ ಶೇ 5-7 ರಷ್ಟು ಮಾತ್ರ ಸಂಬಳ ಏರಿಕೆ ನಿರೀಕ್ಷಿಸಬಹುದು ಎಂದು ಶಿಬುಲಾಲ್ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications