ಇನ್ಫೋಸಿಸ್ ಉದ್ಯೋಗಿಗಳಿಗೆ ಬಡ್ತಿ, ಸಂಬಳ ಏರಿಕೆ ಗಿಫ್ಟ್
ಬೆಂಗಳೂರು, ಅ.14: ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ತನ್ನ ಉದ್ಯೋಗಿಗಳ ಸಂಬಳ ಏರಿಕೆ ಮಾಡಿದೆ. ಪ್ರಸಕ್ತ ಅರ್ಥಿಕ ವರ್ಷದಲ್ಲಿ 20 ಸಾವಿರಕ್ಕೂ ಅಧಿಕ ನೇಮಕಾತಿ ಘೋಷಿಸಿದ ಬೆನ್ನಲ್ಲೇ ಹಾಲಿ ಉದ್ಯೋಗಿಗಳ ಸಂಬಳ, ವೇರಿಯಬಲ್ ಪೇ ಹೆಚ್ಚಿಸಲಾಗಿದೆ.
ಉತ್ತಮ ಕಾರ್ಯ ನಿರ್ವಹಣೆ ತೋರಿದ 2,000ಕ್ಕೂ ಅಧಿಕ ಉದ್ಯೋಗಿಗಳಿಗೆ ಬಡ್ತಿ ನೀಡಲಾಗಿದೆ. ಹಲವರಿಗೆ ವೇರಿಯಬಲ್ ಪೇ ಅಧಿಕಗೊಂಡಿದೆ. ಒಟ್ಟಾರೆ, 2,067 ಉದ್ಯೋಗಿಗಳಿಗೆ ಬಡ್ತಿ ಸಿಕ್ಕಿದೆ. ಎರಡನೇ ತ್ರೈಮಾಸಿಕ ವರದಿ ನಿರೀಕ್ಷೆಗೂ ಮೀರಿದ ಫಲಿತಾಂಶ ನೀಡಿದ್ದಲ್ಲದೆ ಪ್ರತಿಸ್ಪರ್ಧಿ ಟಾಟಾ ಕನ್ಸಲ್ಟೆನ್ಸಿ ಗಿಂತ ಉತ್ತಮ ಫಲಿತಾಂಶ ಪಡೆದುಕೊಂಡಿದೆ. [ಇನ್ಫೋಸಿಸ್ ನಿಂದ 20 ಸಾವಿರ ನೇಮಕಾತಿ ಘೋಷಣೆ!]

ಹೀಗಾಗಿ ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಅವಧಿಗೆ ಶೇ 80 ರಿಂದ ಶೇ 100ರಷ್ಟು ವೇರಿಯಬಲ್ ಪೇಔಟ್ ಸಿಕ್ಕಿದೆ. ಕಳೆದ ಡಿಸೆಂಬರ್ ತಿಂಗಳ ನಂತರ ಇದೇ ಮೊದಲ ಬಾರಿಗೆ ಶೇ 100ರಷ್ಟು ವೇರಿಯಬಲ್ ಪೇ ಸಿಗುತ್ತಿದೆ.[Q2: ಇನ್ಫಿಗೆ ನಿರೀಕ್ಷೆಗೂ ಮೀರಿದ ಲಾಭ, ಭರ್ಜರಿ ಆದಾಯ]
ಒಟ್ಟಾರೆ ಏಪ್ರಿಲ್ ತಿಂಗಳಿನಿಂದ ಇಲ್ಲಿ ತನಕ 4,711 ಉದ್ಯೋಗಿಗಳಿಗೆ ಬಡ್ತಿ ಸಿಕ್ಕಿದೆ. ಜೂನ್ ತ್ರೈಮಾಸಿಕದ ನಂತರ 2,600 ಕ್ಕೂ ಅಧಿಕ ಜನರಿಗೆ ಬಡ್ತಿ ಸಿಕ್ಕಿರುವುದು ವಿಶೇಷ. ಸತತವಾಗಿ ತ್ರೈಮಾಸಿಕದಲ್ಲಿ ಉತ್ತಮ ಫಲಿತಾಂಶ, ಉದ್ಯೋಗಿಗಳಿಗೆ ಬಡ್ತಿ ನೀಡುತ್ತಿರುವುದರಿಂದ ಆಟ್ರಿಷನ್ ಪ್ರಮಾಣ ಕಳೆದ ತ್ರೈಮಾಸಿಕದಲ್ಲಿ ಶೇ 14 ಹಾಗೂ ಒಟ್ಟಾರೆ ಶೇ 19.9ಕ್ಕೆ ಇಳಿದಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications