ಲಕ್ಷಾಂತರ ಸಿಬ್ಬಂದಿಗೆ ಸಂಬಳ ಏರಿಕೆ, ಬಡ್ತಿ ಘೋಷಿಸಿದ ಇನ್ಫೋಸಿಸ್
ಬೆಂಗಳೂರು, ಅ.14: ಕೊವಿಡ್19 ಸಂಕಷ್ಟದ ನಡುವೆ ಆರ್ಥಿಕ ಸಂಕಷ್ಟದಿಂದ ಲಕ್ಷಾಂತರ ಸಿಬ್ಬಂದಿಗಳಿಗೆ ಬಡ್ತಿ, ಸಂಬಳ ಏರಿಕೆ ತಡೆ ಹಿಡಿಯಲಾಗಿತ್ತು. ಈಗ ಜನವರಿ ತಿಂಗಳಿಂದ ಅನ್ವಯವಾಗುವಂತೆ ಸುಮಾರು 2.4 ಲಕ್ಷ ಉದ್ಯೋಗಿಗಳಿಗೆ ಸಂಬಳ ಏರಿಕೆ, ಬಡ್ತಿ ನೀಡುತ್ತಿರುವುದಾಗಿ ಇನ್ಫೋಸಿಸ್ ಪ್ರಕಟಿಸಿದೆ. ಎಲ್ಲಾ ಸ್ತರದ ಸಿಬ್ಬಂದಿಗಳಿಗೆ ಸಂಬಳ ಏರಿಕೆ, ಬಡ್ತಿ ಜೊತೆಗೆ 100% ವೇರಿಯಬಲ್ ಪೇ, ವಿಶೇಷ ಭತ್ಯೆ ಕೂಡಾ ಸಿಗಲಿದೆ.
10 ವರ್ಷಗಳಿಗಿಂತ ಕಡಿಮೆ ಕೆಲಸದ ಅನುಭವ ಹೊಂದಿರುವವರು, ಜ್ಯೂನಿಯರ್ ಹಾಗೂ ಮಧ್ಯಮ ಸ್ತರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಬಡ್ತಿಯನ್ನು ನೀಡಲಾಗುತ್ತದೆ ಎಂದು ಇನ್ಫೋಸಿಸ್ ನ ಮಾನವ ಸಂಪನ್ಮೂಲ ಗುಂಪಿನ ಮುಖ್ಯಸ್ಥ ಕೃಷ್ಣ ಶಂಕರ್ ಆಗಸ್ಟ್ ತಿಂಗಳಿನಲ್ಲಿ ಘೋಷಿಸಿದ್ದರು.
ಆದರೆ, ಸೆಪ್ಟೆಂಬರ್ ಅಂತ್ಯಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಐಟಿ ಸೇವೆ ವಿಭಾಗದಲ್ಲಿ ಅಟ್ರಿಷನ್ ಪ್ರಮಾಣ 7.8%ಕ್ಕೆ ಕುಸಿದಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ಆತಂಕಕಾರಿ 18.3%ರಷ್ಟಿತ್ತು, ತ್ರೈಮಾಸಿಕ ವರದಿ ಪ್ರಕಟಿಸಿದ ಬಳಿಕ ಮಧ್ಯಂತರ ಡಿವಿಡೆಂಟ್ 12 ರು ಪ್ರತಿ ಈಕ್ವಟಿ ಷೇರುಗಳಂತೆ ಘೋಷಿಸಲಾಗಿದೆ ಎಂದು ಸಿಒಒ ಪ್ರವೀಣ್ ರಾವ್ ಹೇಳಿದ್ದಾರೆ.

ಇನ್ಫೋಸಿಸ್ ಪ್ರತಿಸ್ಪರ್ಧಿ ಟಿಸಿಎಸ್ ಕಳೆದ ವಾರ ತನ್ನ ಉದ್ಯೋಗಿಗಳಿಗೆ ಅಕ್ಟೋಬರ್ ರಿಂಅ ಅನ್ವಯವಾಗುವಂತೆ ಸಂಬಳ ಏರಿಕೆ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಬೆಂಗಳೂರು ಮೂಲದ ಇನ್ಫೋಸಿಸ್ ಸಂಸ್ಥೆಯ ನಿವ್ವಳ ಲಾಭ ಈ ತ್ರೈಮಾಸಿಕದಲ್ಲಿ 4,845 ಕೋಟಿ ರು ಬಂದಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 4,019 ಕೋಟಿ ರು ನಷ್ಟಿತ್ತು. ಆದಾಯ 24, 570 ಕೋಟಿರು ಗಳಿಕೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 22,629 ಕೋಟಿ ರು ನಷ್ಟಿತ್ತು. ವರ್ಷದಿಂದ ವರ್ಷಕ್ಕೆ ಲೆಕ್ಕದಲ್ಲಿ ಒಟ್ಟಾರೆ ಆದಾಯ ಶೇ 2.2ರಷ್ಟು ಏರಿಕೆ ಕಂಡಿದೆ ಡಿಜಿಟಲ್ ಹಾಗೂ ಕ್ಲೌಡ್ ಸಾಮರ್ಥ್ಯ ಸುಧಾರಣೆಯಾಗಿದೆ ಎಂದು ಸಿಇಒ, ಎಂಡಿ ಸಲೀಲ್ ಪರೇಖ್ ಹೇಳಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications