Ravi Kumar S resigns : ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ಎಸ್ ರಾಜೀನಾಮೆ
ಬೆಂಗಳೂರು, ಅ.11: ಐಟಿ ಸೇವೆಗಳ ಪ್ರಮುಖ ಸಂಸ್ಥೆ ಇನ್ಫೋಸಿಸ್ ತನ್ನ ಅಧ್ಯಕ್ಷ ರವಿ ಕುಮಾರ್ ಎಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಂಗಳವಾರ ತಿಳಿಸಿದೆ.
ರವಿಕುಮಾರ್ ಅವರು ಕಂಪನಿಗೆ ನೀಡಿದ ಕೊಡುಗೆಗಳಿಗಾಗಿ, ಅವರು ಸಲ್ಲಿಸಿದ ಸೇವೆಗಳಿಗೆ ನಿರ್ದೇಶಕರ ಮಂಡಳಿಯು ತಮ್ಮ ಮೆಚ್ಚುಗೆಯನ್ನು ತಿಳಿಸಿದೆ ಎಂದು ಇನ್ಫೋಸಿಸ್ ಹೇಳಿದೆ.
ಕಂಪನಿಯ ಎರಡನೇ ತ್ರೈಮಾಸಿಕ ಫಲಿತಾಂಶ ಪ್ರಕಟಣೆಗೆ ಕೇವಲ 2 ದಿನಗಳ ಮುಂಚಿತವಾಗಿ ಈ ಕ್ರಮವು ಬಂದಿದೆ. ಕಂಪನಿ ಷೇರು ವಿನಿಮಯ ಕೇಂದ್ರಕ್ಕೆ ನೀಡಿದ ಮಾಹಿತಿಯಲ್ಲಿ ಈ ವಿಷಯ ತಿಳಿದು ಬಂದಿದೆ.

ರವಿ ಕುಮಾರ್ ಎಸ್ ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಅ.11 ರ ಮಂಗಳವಾರವೇ ಅವರ ಅಧಿಕಾರದ ಕಡೆಯ ದಿನವಾಗಿದೆ ಎಂದು ಇನ್ಫೋಸಿಸ್ ತಿಳಿಸಿದೆ. ಆದರೆ, ರಾಜೀನಾಮೆಗೆ ಯಾವುದೇ ಕಾರಣವನ್ನು ನೀಡಿಲ್ಲ.
ಅಧ್ಯಕ್ಷರಾಗಿ ತಮ್ಮ ಪಾತ್ರದಲ್ಲಿ, ರವಿಕುಮಾರ್ ಅವರು ಎಲ್ಲಾ ಉದ್ಯಮ ವಿಭಾಗಗಳಲ್ಲಿ ಇನ್ಫೋಸಿಸ್ ಗ್ಲೋಬಲ್ ಸರ್ವಿಸಸ್ ಆರ್ಗನೈಸೇಶನ್ ಅನ್ನು ಮುನ್ನಡೆಸಿದರು.
ಕನ್ಸಲ್ಟಿಂಗ್, ತಂತ್ರಜ್ಞಾನ, ಮೂಲಸೌಕರ್ಯ, ಇಂಜಿನಿಯರಿಂಗ್ ಮತ್ತು ಪ್ರೊಸೆಸ್ ವರ್ಟಿಕಲ್ ಸೇವೆಗಳಿ ಸೇರಿದಂತೆ ವಿಶೇಷ ಡಿಜಿಟಲ್ ಮಾರಾಟಗಳನ್ನು ಮುನ್ನಡೆಸಿದ್ದರು.
ಬಾಬಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ ಪರಮಾಣು ವಿಜ್ಞಾನಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿ, ಅವರು 2002 ರಲ್ಲಿ ಇನ್ಫೋಸಿಸ್ಗೆ ಸೇರಿದ್ದರು. 2016 ರಲ್ಲಿ ಅದರ ಅಧ್ಯಕ್ಷರಾಗಿ ನೇಮಕಗೊಂಡರು.
2017 ರಲ್ಲಿ, ಅವರನ್ನು ಡೆಪ್ಯೂಟಿ ಸಿಒಒ ಎಂದು ಕರೆಯಲಾಗಿತ್ತು. ಕಳೆದ ವರ್ಷಯುಬಿ ಪ್ರವೀಣ್ ರಾವ್ ಅವರ ನಿವೃತ್ತಿಯ ನಂತರ ಇನ್ಫೋಸಿಸ್ ಅಧ್ಯಕ್ಷರಾಗಿದ್ದರು.
ಇನ್ಫೋಸಿಸ್ನ 2021-22ರ ವಾರ್ಷಿಕ ವರದಿಯ ಪ್ರಕಾರ, ಸಿಇಒ ಸಲೀಲ್ ಪರೇಖ್ ಮತ್ತು ಮಾಜಿ ಸಿಒಒ ಯುಬಿ ಪ್ರವೀಣ್ ರಾವ್ ನಂತರ ಕುಮಾರ್ ಅವರು ಕಂಪನಿಯ ಮೂರನೇ ಅತಿ ಹೆಚ್ಚು ಸಂಭಾವನೆ ಪಡೆಯುವ ಹಿರಿಯ ಅಧಿಕಾರಿಯಾಗಿದ್ದಾರೆ.
ಅಕ್ಟೋಬರ್ 13 ರಂದು ತನ್ನ ಎರಡನೇ ತ್ರೈಮಾಸಿಕ ಗಳಿಕೆಯನ್ನು ಪ್ರಕಟಿಸಲಿರುವ ಇನ್ಫೋಸಿಸ್ ಷೇರುಗಳು ಬಿಎಸ್ಇಯಲ್ಲಿ 2.65 ಶೇಕಡಾ ಕಡಿಮೆಯಾಗಿ 1,423.90 ರೂಪಾಯಿಗೆ ಕೊನೆಗೊಂಡಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications