ಇನ್ಫೋಸಿಸ್ನಿಂದ ಈ ವರ್ಷ 25, 000 ಹೊಸ ನೇಮಕಾತಿ
ಬೆಂಗಳೂರು, ಏಪ್ರಿಲ್ 14: ದೇಶದ ಎರಡನೇ ಅತಿದೊಡ್ಡ ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ತನ್ನ ನಾಲ್ಕನೇ ತ್ರೈಮಾಸಿಕ ವರದಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತ ಹಾಗೂ ಜಾಗತಿಕವಾಗಿ 25, 000 ಹೊಸ ನೇಮಕಾತಿ ಬಗ್ಗೆ ಪ್ರಕಟಿಸಲಾಗಿದೆ. 2021ರ ಆರ್ಥಿಕ ವರ್ಷದಲ್ಲಿ 1,00,000 ಕೋಟಿ ರು ಆದಾಯ ದಾಖಲಿಸಿ ಹೊಸ ಮೈಲಿಗಲ್ಲು ಸಾಧಿಸಿದೆ. ಇದೇ ಖುಷಿಯಲ್ಲಿ ಮುಂದಿನ ಜುಲೈ ತಿಂಗಳಲ್ಲಿ ಸಂಬಳ ಏರಿಕೆ ಬಗ್ಗೆ ಘೋಷಿಸಲಾಗಿದೆ.
ಇನ್ಫೋಸಿಸ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಲೀಲ್ ಪರೇಖ್ ಅವರು ಸಂಬಳ ಏರಿಕೆ ಸುದ್ದಿಯನ್ನು ಖಚಿತಪಡಿಸಿದ್ದು, ಅಟ್ರಿಷನ್ ದರ ಸಮತೋಲನ ಕಾಯ್ದುಕೊಳ್ಳಲಾಗುವುದು ಎಂದಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಸಿಒಒ ಪ್ರವೀಣ್ ರಾವ್, ಅಟ್ರಿಷನ್ ದರ ಹೆಚ್ಚಿರುವ ವಿಭಾಗಗಳನ್ನು ಗುರಿಯಾಗಿಸಿಕೊಂಡು ಸಂಬಳ ಏರಿಕೆ, ಬೋನಸ್ ನೀಡಲಾಗುತ್ತದೆ ಎಂದರು. 3ನೇ ತ್ರೈಮಾಸಿಕದಲ್ಲಿ ಶೇ 10.3ರಷ್ಟಿದ್ದ ಆಟ್ರಿಷನ್ ದರ (https://en.wikipedia.org/wiki/Churn_rate)4ನೇ ತ್ರೈಮಾಸಿಕದಲ್ಲಿ ಶೇ 15.2ರಷ್ಟಾಗಿದೆ. ಮಾರ್ಚ್ 31, 2021ಕ್ಕೆ ಅನ್ವಯವಾಗುವಂತೆ ಇನ್ಫೋಸಿಸ್ 10, 307 ಹೊಸ ನೇಮಕಾತಿ ಮಾಡಿಕೊಂಡಿದ್ದು, ಒಟ್ಟಾರೆ, 2,59,619 ಉದ್ಯೋಗಿಗಳನ್ನು ಹೊಂದಿದೆ. ಶೇ 38.6ರಷ್ಟು ಮಹಿಳಾ ಸಿಬ್ಬಂದಿ ಇದ್ದಾರೆ.

ಕಳೆದ ಆರ್ಥಿಕ ವರ್ಷದಲ್ಲಿ 21,00 ಫ್ರೆಶರ್ಸ್ ನೇಮಕ ಮಾಡಿಕೊಳ್ಳಲಾಗಿದೆ ಎಂದು ಇನ್ಫೋಸಿಸ್ ಪ್ರಕಟಿಸಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 25,000 ಹೊಸ ನೇಮಕಾತಿ ನಡೆಯಲಿದ್ದು, ಈ ಪೈಕಿ 24, 000 ಮಂದಿಯನ್ನು ಭಾರತದಲ್ಲೇ ನೇಮಕ ಮಾಡಲಾಗುತ್ತದೆ, ಕ್ಯಾಂಪಸ್ ಸಂದರ್ಶನ ಮೂಲಕ ಪದವೀಧರರನ್ನು ಆಯ್ಕೆ ಮಾಡಲಾಗುವುದು ಎಂದು ಪ್ರವೀಣ್ ರಾವ್ ಹೇಳಿದರು.
ಯುಎಸ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಪೈಕಿ ಶೇ 69ರಷ್ಟು ಮಂದಿ ಸ್ಥಳೀಯರೇ ಇದ್ದಾರೆ. ಹೀಗಾಗಿ, ವೀಸಾ ನೀತಿ ಬದಲಾವಣೆಗೆ ತಕ್ಕಂತೆ ಕಾರ್ಯ ನಿರ್ವಹಿಸಲಾಗುತ್ತಿದೆ. ಅಟ್ರಿಷನ್ ದರ ಅಧಿಕವಾಗಿದ್ದು, ಇನ್ನು ಒಂದೆರಡು ತ್ರೈಮಾಸಿಕ ಇದೇ ದರ ಮುಂದುವರೆಯುವ ಸಾಧ್ಯತೆಯಿದೆ. ವರ್ಕ್ ಫ್ರಂ ಹೋಂ ಸೌಲಭ್ಯ ಮುಂದುವರೆಯಲಿದೆ ಎಂದು ತಿಳಿಸಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications