ಇಂಟೆಲ್ : ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ ಕಡಿತ
ಹೋಸ್ಟನ್, ಏಪ್ರಿಲ್ 20: ಮೈಕ್ರೋಪ್ರೊಸೆಸರ್ ವಿನ್ಯಾಸ ಕ್ಷೇತ್ರದಲ್ಲಿ ಜಗತ್ತಿನ ಅತಿ ದೊಡ್ಡ ಸಂಸ್ಥೆ ಎನಿಸಿರುವ ಇಂಟೆಲ್, ಅತಿ ದೊಡ್ಡ ಪಿಂಕ್ ಸ್ಲಿಪ್ ಮೇಳಕ್ಕೆ ಮುಂದಾಗಿದೆ. ವಿಶ್ವದೆಲ್ಲೆಡೆ 12 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ಮನೆಗೆ ಕಳಿಸುವುದಾಗಿ ಘೋಷಿಸಿದೆ.
ಕಳೆದ ವರ್ಷದ ಗಣತಿಯಂತೆ ಇಂಟೆಲ್ ನಲ್ಲಿ 1,07,300 ಉದ್ಯೋಗಿಗಳಿದ್ದಾರೆ. ಈಗ ಸಂಸ್ಥೆಯನ್ನು ಪುನರ್ ನಿರ್ಮಾಣ ಮಾಡಲು ಮುಂದಾಗಿದ್ದು, ಒಟ್ಟು ಉದ್ಯೋಗಿಗಳ ಸಂಖ್ಯೆಯಲ್ಲಿ ಶೇ 11ರಷ್ಟು ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತದೆ.

2017 ರ ಮಧ್ಯಭಾಗದ ಹೊತ್ತಿಗೆ ಉದ್ಯೋಗ ಕಡಿತ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈಗಾಗಲೇ ಹಲವಾರು ಉದ್ಯೋಗಿಗಳಿಗೆ ಮುಂದಿನ 60 ದಿನಗಳಲ್ಲಿ ಕಂಪನಿ ತೊರೆಯುವಂತೆ ಸೂಚನೆ ನೀಡಲಾಗುತ್ತದೆ ಎಂದು ಇಂಟೆಲ್ ಹೇಳಿದೆ.
ಕಳೆದ ಹಲವು ವರ್ಷಗಳಿಂದ ಪರ್ಸನಲ್ ಕಂಪ್ಯೂಟರ್ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಣೆ ತೋರುತ್ತಿತ್ತು. ಇಂಟೆಲ್ ಮೈಕ್ರೋಪ್ರೊಸೆಸರ್ ಗೆ ಬೇಡಿಕೆ ಇತ್ತು. ಆದರೆ. ಸ್ಮಾರ್ಟ್ ಫೋನ್ ಕ್ಷೇತ್ರ ಬಲಗೊಳ್ಳುತ್ತಿದ್ದಂತೆ ಅದೇ ಪ್ರಾಬಲ್ಯವನ್ನು ಮುಂದುವರೆಸಲು ಇಂಟೆಲ್ ಗೆ ಆಗುತ್ತಿಲ್ಲ. ಡೆಸ್ಕ್ ಟಾಪ್, ಲಾಪ್ ಟಾಪ್ ಗಳನ್ನೇ ನೆಚ್ಚಿಕೊಂಡು ಕಂಪನಿ ನಿರ್ವಹಣೆ ಕಷ್ಟವಾಗುತ್ತಿದೆ.
ಇಂಟೆಲ್ ಸಂಸ್ಥೆಗೆ ಮೈಕ್ರೋಪ್ರೊಸೆಸರ್ ಹಾಗೂ ಚಿಪ್ ವ್ಯವಹಾರದಿಂದಲೇ ಶೇ 60 ರಷ್ಟು ಲಾಭ ಬರುತ್ತಿದೆ. ಈಗ ಈ ಉದ್ಯೋಗ ಕಡಿತದಿಂದ ಈ ವರ್ಷ 750 ಮಿಲಿಯನ್ ಯುಎಸ್ ಡಾಲರ್ ಉಳಿಸಲು ಇಂಟೆಲ್ ಯೋಜಿಸಿದೆ ಎಂದು ಮುಖ್ಯ ಕಾರ್ಯಕಾರಿ ಅಧಿಕಾರಿ ಬ್ರಿಯಾನ್ ಕ್ರಾಜಾನಿಕ್ ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications