ಹೂಡಿಕೆ ದಿಗ್ಗಜ ಜುಂಜುನ್ವಾಲ ಬೆಂಬಲಿತ ವಿಮಾನಯಾನ ಸಂಸ್ಥೆ ಆರಂಭ ವಿಳಂಬ ಸಾಧ್ಯತೆ
ಮುಂಬೈ, ಮೇ 19: ಹೂಡಿಕೆದಾರ ರಾಕೇಶ್ ಜುಂಜುನ್ವಾಲಾ ಬೆಂಬಲದಲ್ಲಿ ಆರಂಭಗೊಳ್ಳಬೇಕಿದ್ದ ಆಕಾಶ್ ವಿಮಾನಯಾನ ಸೇವೆಗಳ ಪ್ರಾರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಏರ್ಲೈನ್ ತನ್ನ ಮೊದಲ ವಿಮಾನವನ್ನು ಜೂನ್ ಅಥವಾ ಜುಲೈನಲ್ಲಿ ಪಡೆಯುವ ನಿರೀಕ್ಷೆಯಿದೆ ಎಂದು ಹಿರಿಯ ಡಿಜಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಷೇರು ಮಾರುಕಟ್ಟೆಯ ದಿಗ್ಗಜ ರಾಕೇಶ್ ಜುಂಜುನ್ವಾಲಾ ಜೂನ್ ನಲ್ಲಿ ಈ ವಿಮಾನಯಾನ ಕಾರ್ಯಾಚರಣೆಯನ್ನು ಆರಂಭಿಸುವ ಆಲೋಚನೆಯಲ್ಲಿದ್ದರು. ಆದರೆ ಇದು ಜುಲೈಗೆ ಮುಂದೂಡಲಾಗಿದೆ. ಸಂಸ್ಥೆ ಜುಲೈನಲ್ಲಿ ಸೇವೆಗಳನ್ನು ಪ್ರಾರಂಭಿಸಲು ಉದ್ದೇಶಿಸಿದೆ
ಮುಂಬೈ ಮೂಲದ ವಿಮಾನ ಸಂಸ್ಥೆ ಕಳೆದ ಅಕ್ಟೋಬರ್ನಲ್ಲಿ, ವಿಮಾನಯಾನ ಸಂಸ್ಥೆ ಆರಂಭಿಸಲು ಅಗತ್ಯವಾಗಿರುವ ನಿರಪೇಕ್ಷಣಾ ಪತ್ರ (ಎನ್ಒಸಿ)ವನ್ನು ನಾಗರಿಕ ವಿಮಾನಯಾನ ಸಚಿವಾಲಯದಿಂದ ಪಡೆದುಕೊಂಡಿದೆ. " ಆಕಾಸ ಏರ್ ಅವರ ವಿಮಾನ ವಿತರಣೆಯು ವಿಳಂಬವಾಗಿದೆ , ಹಾಗಾಗಿ ಜೂನ್ / ಜುಲೈನಲ್ಲಿ ಬರುವ ನಿರೀಕ್ಷೆಯಿದೆ. ಇತರ ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ, ಅವೆಲ್ಲವೂ ಟ್ರ್ಯಾಕ್ನಲ್ಲಿವೆ ಎಂದು ಡಿಜಿಸಿಎ ಉನ್ನತ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಜೂನ್ ಮಧ್ಯದಲ್ಲಿ ಮೊದಲ ವಿಮಾನ
ವಿಮಾನಯಾನ ಸಂಸ್ಥೆ ಆರಂಭಿಸಲು ತಡವಾಗುತ್ತಿರುವ ಬಗ್ಗೆ ಆಕಾಶ್ ಏರ್ ಸಂಸ್ಥೆಯನ್ನು ಸಂಪರ್ಕಿಸಿದ್ದಕ್ಕೆ, ಮೊದಲ ವಿಮಾನ ಜೂನ್ ಮಧ್ಯಂತರದಲ್ಲಿ ಬರುವ ನಿರೀಕ್ಷೆಯಿದೆ. ಜುಲೈನಲ್ಲಿ ಕಾರ್ಯಾಚರಣೆ ಆರಂಭಿಸುತ್ತೇವೆ ತಿಳಿಸಿದೆ. ಈ ಕುರಿತು ಮಾತನಾಡಿರುವ ಮ್ಯಾನೇಜಿಂಗ್ ಡೈರೆಕ್ಟರ್ ವಿನಯ್ ದುಬೆ," ನಾವು ನಮ್ಮ ಮೊದಲ ವಿಮಾನವನ್ನು 2022ರ ಜೂನ್ ಮಧ್ಯೆ ಪಡೆಯುವ ನಿರೀಕ್ಷೆಯಲ್ಲಿದ್ದೇವೆ. ಮೊದಲ ವಿಮಾನವು ಆಪರೇಟಿಂಗ್ ಪರ್ಮಿಟ್ನೊಂದಿಗೆ ನಮಗೆ ಸಹಾಯ ಮಾಡುತ್ತದೆ" ಎಂದು ತಿಳಿಸಿದ್ದಾರೆ.

ವಿಮಾನಯಾನವು ಜುಲೈ 2022 ರಲ್ಲಿ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಉದ್ದೇಶವನ್ನು ಹೊಂದಿದೆ. ಮಾರ್ಚ್ 2023ರ ಅಂತ್ಯದ ವೇಳೆಗೆ 18 ವಿಮಾನಗಳನ್ನು ಹಾರಿಸುವ ಗುರಿಯಿದೆ ಎಂದು ತಿಳಿಸಿದ್ದಾರೆ

260 ಕೋಟಿ ರೂ ಹೂಡಿಕೆ ಮಾಡಲಿರುವ ರಾಕೇಶ
ಆಕಾಶ್ ಏರ್ಸ್ ಮುಂದಿನ 4 ವರ್ಷಗಳಲ್ಲಿ 70 ವಿಮಾನಗಳನ್ನು ಹೊಂದಲು ಉದ್ದೇಶಿಸಿದೆ. ಈ ಸಂಸ್ಥೆಯಲ್ಲಿ ಭಾರತದ ವಾರೆನ್ ಬಫೆಟ್ ಎಂದೂ ಕರೆಯಲ್ಪಡುವ ಜುಂಜುನ್ವಾಲಾ 35 ಮಿಲಿಯನ್ ಡಾಲರ್(260 ಕೋಟಿ ರೂ) ಹೂಡಿಕೆ ಮಾಡುವುದಕ್ಕೆ ಸಿದ್ಧರಿದ್ದಾರೆ. ಈ ಸಂಸ್ಥೆಯ ಶೇ. 40 ರಷ್ಟು ಷೇರುಗಳನ್ನು ಹೊಂದುವ ಗುರಿಯನ್ನು ಹೊಂದಿದ್ದಾರೆ. ಈ ಸಂಸ್ಥೆ ಸುಮಾರು 180 ಪ್ರಯಾಣಿಕರನ್ನು ಕರೆದೊಯ್ಯುವ ವಿಮಾನಗಳನ್ನು ಹೊಂದಲಿದೆ ಎಂದು ತಿಳಿದುಬಂದಿದೆ.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications