ಇಸ್ರೇಲಿ ಸ್ಪೈವೇರ್ ಪೆಗಾಸಸ್: ಎನ್ಎಸ್ಒ ಗ್ರೂಪ್ ಸಿಇಒ ರಾಜೀನಾಮೆ
ಜೆರುಸಲೆಂ, ಆಗಸ್ಟ್ 22: ಪೆಗಾಸಸ್ ಸ್ಪೈವೇರ್ ತಯಾರಕ ಸಂಸ್ಥೆ ಎನ್ಎಸ್ಒ ಗ್ರೂಪ್ನ ಸಿಇಒ ಶಾಲೆವ್ ಹುಲಿಯೋ ಕೆಳಗಿಳಿದಿದ್ದಾರೆ. ಮುಂದಿನ ಸಿಇಒ ನೇಮಕ ಆಗುವವರೆಗೂ ಸಂಸ್ಥೆಯ ಸಿಒಒ ಯಾರೋನ್ ಶೋಹತ್ ಅವರೇ ಮುಂದಾಳತ್ವ ವಹಿಸಲಿದ್ದಾರೆ.
ಯಾರೋನ್ ಶೋಹತ್ ಎನ್ಎಸ್ಒ ಗ್ರೂಪ್ನ ಮರುರಚನೆ ಕಾರ್ಯವನ್ನು ನೋಡಿಕೊಳ್ಳುತ್ತಿದ್ದು ಅದರ ಭಾಗವಾಗಿ ಸುಮಾರು ನೂರು ಉದ್ಯೋಗಿಗಳನ್ನು ಕೆಲಸದಿಂದ ಹೊರಕಳುಹಿಸಲಾಗಿದೆ.
ಪೆಗಾಸಸ್ ಸಾಫ್ಟ್ವೇರ್ ಅನ್ನು ವಿವಿಧ ದೇಶಗಳ ಸರಕಾರಗಳು ನಿರ್ದಿಷ್ಟ ಮಂದಿಯ ಮೊಬೈಲ್ ಫೋನ್ಗಳನ್ನು ಹ್ಯಾಕ್ ಮಾಡಲು ದುರ್ಬಳಕೆ ಮಾಡಿಕೊಂಡಿರುವ ಆರೋಪಗಳು ಬಹಳ ಇವೆ. ಈ ಹಿನ್ನೆಲೆಯಲ್ಲಿ ಎನ್ಎಸ್ಒ ಗ್ರೂಪ್ ಕಾನೂನು ವಿಚಾರಣೆ ಎದುರಿಸುತ್ತಿದೆ.

ಆದರೆ, ಭಯೋತ್ಪಾದಕರು, ಶಿಶುಕಾಮಿಗಳು, ದೊಡ್ಡ ಕ್ರಿಮಿನಲ್ಗಳನ್ನು ಹಿಡಿಯಲು ಪೆಗಾಸಸ್ ತಂತ್ರಾಂಶ ತಯಾರಿಸಿದ್ದೇವೆ. ಅದನ್ನು ವಿಶ್ವಾಸಾರ್ಹ ಸರಕಾರಗಳಿಗೆ ಮಾತ್ರ ಮಾರಾಟ ಮಾಡಿದ್ದೇವೆ ಎಂಬುದು ಎನ್ಎಸ್ಒ ಗ್ರೂಪ್ನ ಸ್ಪಷ್ಟನೆ.
ಕಂಪನಿಯ ಉತ್ಪನ್ನಗಳಿಗೆ ಅದರ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅಪರಾಧ ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದರ ಸಾಬೀತಾದ ಸಾಮರ್ಥ್ಯದಿಂದಾಗಿ ಗ್ರಾಹಕರಿಗೆ ಸಹಾಯ ಮಾಡಲು ಸಾಧ್ಯವಿರುವುದರಿಂದ ಸರ್ಕಾರಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಎನ್ಎಸ್ಒ ಕಂಪನಿಯ ಅದ್ಭುತ ತಂತ್ರಜ್ಞಾನಗಳನ್ನು ಸರಿಯಾದ ಮತ್ತು ಯೋಗ್ಯ ಉದ್ದೇಶಗಳಿಗಾಗಿ ಬಳಸಲಾಗುತ್ತದೆ ಎಂದು ಶೋಹತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೆಗಾಸಸ್ ಸ್ಪೈ ವೇರ್ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತದ ರಾಜಕಾರಣಿಗಳು, ಗಣ್ಯರು ಹಾಗೂ ಪತ್ರಕರ್ತರ ಮೇಲೆ ಬೇಹುಗಾರಿಕೆ ಮಾಡಲಾಗುತ್ತಿದೆ ಎಂದು ದೇಶದಲ್ಲಿ ಭಾರಿ ರಾದ್ಧಾಂತ ಸೃಷ್ಟಿಯಾಗಿತ್ತು. ಅಲ್ಲದೆ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲನ್ನು ಏರಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications