ಇಸ್ರೇಲಿ ಸ್ಪೈವೇರ್ ಪೆಗಾಸಸ್: ಎನ್ಎಸ್ಒ ಗ್ರೂಪ್ ಸಿಇಒ ರಾಜೀನಾಮೆ
ಜೆರುಸಲೆಂ, ಆಗಸ್ಟ್ 22: ಪೆಗಾಸಸ್ ಸ್ಪೈವೇರ್ ತಯಾರಕ ಸಂಸ್ಥೆ ಎನ್ಎಸ್ಒ ಗ್ರೂಪ್ನ ಸಿಇಒ ಶಾಲೆವ್ ಹುಲಿಯೋ ಕೆಳಗಿಳಿದಿದ್ದಾರೆ. ಮುಂದಿನ ಸಿಇಒ ನೇಮಕ ಆಗುವವರೆಗೂ ಸಂಸ್ಥೆಯ ಸಿಒಒ ಯಾರೋನ್ ಶೋಹತ್ ಅವರೇ ಮುಂದಾಳತ್ವ ವಹಿಸಲಿದ್ದಾರೆ.
ಯಾರೋನ್ ಶೋಹತ್ ಎನ್ಎಸ್ಒ ಗ್ರೂಪ್ನ ಮರುರಚನೆ ಕಾರ್ಯವನ್ನು ನೋಡಿಕೊಳ್ಳುತ್ತಿದ್ದು ಅದರ ಭಾಗವಾಗಿ ಸುಮಾರು ನೂರು ಉದ್ಯೋಗಿಗಳನ್ನು ಕೆಲಸದಿಂದ ಹೊರಕಳುಹಿಸಲಾಗಿದೆ.
ಪೆಗಾಸಸ್ ಸಾಫ್ಟ್ವೇರ್ ಅನ್ನು ವಿವಿಧ ದೇಶಗಳ ಸರಕಾರಗಳು ನಿರ್ದಿಷ್ಟ ಮಂದಿಯ ಮೊಬೈಲ್ ಫೋನ್ಗಳನ್ನು ಹ್ಯಾಕ್ ಮಾಡಲು ದುರ್ಬಳಕೆ ಮಾಡಿಕೊಂಡಿರುವ ಆರೋಪಗಳು ಬಹಳ ಇವೆ. ಈ ಹಿನ್ನೆಲೆಯಲ್ಲಿ ಎನ್ಎಸ್ಒ ಗ್ರೂಪ್ ಕಾನೂನು ವಿಚಾರಣೆ ಎದುರಿಸುತ್ತಿದೆ.

ಆದರೆ, ಭಯೋತ್ಪಾದಕರು, ಶಿಶುಕಾಮಿಗಳು, ದೊಡ್ಡ ಕ್ರಿಮಿನಲ್ಗಳನ್ನು ಹಿಡಿಯಲು ಪೆಗಾಸಸ್ ತಂತ್ರಾಂಶ ತಯಾರಿಸಿದ್ದೇವೆ. ಅದನ್ನು ವಿಶ್ವಾಸಾರ್ಹ ಸರಕಾರಗಳಿಗೆ ಮಾತ್ರ ಮಾರಾಟ ಮಾಡಿದ್ದೇವೆ ಎಂಬುದು ಎನ್ಎಸ್ಒ ಗ್ರೂಪ್ನ ಸ್ಪಷ್ಟನೆ.
ಕಂಪನಿಯ ಉತ್ಪನ್ನಗಳಿಗೆ ಅದರ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅಪರಾಧ ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದರ ಸಾಬೀತಾದ ಸಾಮರ್ಥ್ಯದಿಂದಾಗಿ ಗ್ರಾಹಕರಿಗೆ ಸಹಾಯ ಮಾಡಲು ಸಾಧ್ಯವಿರುವುದರಿಂದ ಸರ್ಕಾರಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಎನ್ಎಸ್ಒ ಕಂಪನಿಯ ಅದ್ಭುತ ತಂತ್ರಜ್ಞಾನಗಳನ್ನು ಸರಿಯಾದ ಮತ್ತು ಯೋಗ್ಯ ಉದ್ದೇಶಗಳಿಗಾಗಿ ಬಳಸಲಾಗುತ್ತದೆ ಎಂದು ಶೋಹತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೆಗಾಸಸ್ ಸ್ಪೈ ವೇರ್ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತದ ರಾಜಕಾರಣಿಗಳು, ಗಣ್ಯರು ಹಾಗೂ ಪತ್ರಕರ್ತರ ಮೇಲೆ ಬೇಹುಗಾರಿಕೆ ಮಾಡಲಾಗುತ್ತಿದೆ ಎಂದು ದೇಶದಲ್ಲಿ ಭಾರಿ ರಾದ್ಧಾಂತ ಸೃಷ್ಟಿಯಾಗಿತ್ತು. ಅಲ್ಲದೆ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲನ್ನು ಏರಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications