ಐಟಿ ಕಂಪನಿಗಳಿಂದ 40 ಸಾವಿರ ಉದ್ಯೋಗ ಕಡಿತ ನಿರೀಕ್ಷೆ
ನವದೆಹಲಿ, ನವೆಂಬರ್ 19: ಮಾಹಿತಿ ಮತ್ತು ತಂತ್ರಜ್ಞಾನ ಸೇವಾ ಕ್ಷೇತ್ರದಲ್ಲಿ ಪ್ರಗತಿ ಕುಂಠಿತಗೊಂಡಿದೆ. ಹೀಗಾಗಿ, ಈ ವರ್ಷ 30,000ದಿಂದ 40,0000ದಷ್ಟು ಮಧ್ಯಮ ಸ್ತರದಲ್ಲಿರುವ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಬಹುದು ಎಂದು ಉದ್ಯಮ ತಜ್ಞ, ಇನ್ಫೋಸಿಸ್ ನ ಮಾಜಿ ಎಚ್ ಆರ್ ಮುಖ್ಯಸ್ಥ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟಿದ್ದಾರೆ.
''ಪ್ರತಿ ಕ್ಷೇತ್ರದಲ್ಲೂ ಐದು ವರ್ಷಗಳಿಗೊಮ್ಮೆ ಸಂಭವಿಸುವ ಸಹಜ ವಿದ್ಯಮಾನವಾಗಿದೆ. ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿರುವಂತೆ ಭಾರತದಲ್ಲಿಯೂ ಮಧ್ಯಮ ಸ್ತರದಲ್ಲಿ ತಾವು ಪಡೆಯುವ ವೇತನಕ್ಕೆ ಸರಿಯಾದ ನ್ಯಾಯ ಒದಗಿಸದವರು ಇರುತ್ತಾರೆ" ಎಂದು ಪೈ ಹೇಳಿದ್ದಾರೆ.
ಸಂಸ್ಥೆಗಳು ಪ್ರಗತಿ ಹೊಂದುವಾಗ ಬಡ್ತಿಗಳನ್ನು ನೀಡುವುದು ಸರಿಯಾದ ಕ್ರಮ, ಆದರೆ ಬೆಳವಣಿಗೆ ಕುಂಠಿತಗೊಂಡಾಗ ಹೆಚ್ಚು ವೇತನ ಪಡೆಯುವವರು ಉನ್ನತ ಸ್ತರದಲ್ಲಿರುತ್ತಾರೆ. ಹೀಗಾಗಿ ಕಂಪನಿಗಳಿಗೆ ತಮ್ಮ ಉದ್ಯೋಗ ಸ್ವರೂಪಗಳ ಪರಿಷ್ಕರಣೆ ಮತ್ತು ಉದ್ಯೋಗ ಕಡಿತ ಮಾಡುವುದು ಸಾಮಾನ್ಯ ಸಂಗತಿ ಎಂದು ಇನ್ಫೋಸಿಸ್ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಹಾಗೂ ಅರಿನ್ ಕ್ಯಾಪಿಟಲ್ ಆ್ಯಂಡ್ ಮಣಿಪಾಲ ಗ್ಲೋಬಲ್ ಎಜ್ಯುಕೇಶನ್ ಸರ್ವಿಸಸ್ನ ಅಧ್ಯಕ್ಷ ಪೈ ಹೇಳಿದರು.

ಸಂಸ್ಥೆಯ ಪ್ರಗತಿ ಜೊತೆಗೆ ವಿಶೇಷ ತಜ್ಞರಾದರೆ ತಮ್ಮ ಉದ್ಯೋಗವನ್ನು ಉಳಿಸಿಕೊಳ್ಳುವ ಅವಕಾಶವೂ ಇಂಥವರಿಗೆ ಸಿಗಲಿದೆ ಎಂದು ಪೈ ಅಭಿಪ್ರಾಯಪಟ್ಟರು.
ಭಾರತದ ಪ್ರಮುಖ ಸಾಫ್ಟ್ ವೇರ್ ರಫ್ತು ಸಂಸ್ಥೆ, ಬೆಂಗಳೂರು ಮೂಲದ ಇನ್ಫೋಸಿಸ್ ವಿವಿಧ ಸ್ತರದ ಉದ್ಯೋಗಿಗಳನ್ನು ಮನೆಗೆ ಕಳಿಸಲು ನಿರ್ಧರಿಸಿದೆ. ಸುಮಾರು 10,000 ಉದ್ಯೋಗ ಕಡಿತ ಮುಂದಾಗಿದೆ ಎಂದು ವರದಿ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications