ಎಚ್ಸಿಎಲ್ ಉದ್ಯೋಗಿಗಳಿಗೆ ಬಂಪರ್, ಬೆಂಜ್ ಕಾರು ಗಿಫ್ಟ್
ಬೆಂಗಳೂರು, ಜುಲೈ 21: ಪ್ರಮುಖ ಐಟಿ ಸಂಸ್ಥೆ ಎಚ್ ಸಿ ಎಲ್ ತನ್ನ ಉದ್ಯೋಗಿಗಳಿಗೆ ಪ್ರೋತ್ಸಾಹ ನೀಡಲು ಈ ಹಿಂದೆ ನೀಡುತ್ತಿದ್ದಂತೆ ಮತ್ತೊಮ್ಮೆ ಬೆಂಜ್ ಕಾರು ಗಿಫ್ಟ್ ಮಾಡಲು ಮುಂದಾಗಿದೆ.
ಕೋವಿಡ್ 19 ಸಾಂಕ್ರಾಮಿಕದ ಎರಡೂ ಅಲೆಗಳಲ್ಲೂ ಉದ್ಯೋಗಿಗಳನ್ನು ಉಳಿಸಿಕೊಳ್ಳುವಲ್ಲಿ ಎಚ್ ಸಿ ಎಲ್ ಸಂಸ್ಥೆ ಹೆಚ್ಚಿನ ಕಾಳಜಿ ವಹಿಸಿತ್ತು. ಹೊಸ ನೇಮಕಾತಿಗೆ ತಗುಲುವ ವೆಚ್ಚ ಶೇ 20% ಅಧಿಕವಾಗಲಿದೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಎಚ್ ಸಿ ಎಲ್ ಜನಪ್ರಿಯ ಯೋಜನೆಯನ್ನು ಪುನಃ ಆರಂಭಿಸಿದೆ.
''2013ರಲ್ಲಿ ಸಂಸ್ಥೆಯ ಉತ್ತಮ ಕಾರ್ಯನಿರ್ವಹಣೆ ತೋರಿದ ಉದ್ಯೋಗಿಗಳಿಗೆ 50 ಮರ್ಸಿಡಿಸ್ ಬೆಂಜ್ ಕಾರುಗಳನ್ನು ಉಡುಗೊರೆಯನ್ನು ನೀಡಲಾಗಿತ್ತು. ಆದರೆ, ನಂತರ ಈ ಬೋನಸ್ ವಿಧಾನ ಸ್ಥಗಿತಗೊಳಿಸಲಾಗಿತ್ತು. ಆದರೆ, ಮತ್ತೊಮ್ಮೆ ಈ ರೀತಿ ಬೋನಸ್ ನೀಡಲು ಸಂಸ್ಥೆ ಮುಂದಾಗಿದೆ,'' ಎಂದು ಮಾನವ ಸಂಪನ್ಮೂಲ ಅಧಿಕಾರಿ ಅಪ್ಪಾರಾವ್ ವಿವಿ ಹೇಳಿದ್ದಾರೆ.

ಸಿಟಿಸಿ (Cost-to-company)ಗೆ ಅನುಗುಣವಾಗಿ ಶೇ 25 ರಿಂದ 30 ರಷ್ಟು ಕೌಶಲ್ಯ ಆಧಾರಿತ ಭತ್ಯೆ ನೀಡಲಾಗುತ್ತದೆ. ವರ್ಷದಿಂದ ವರ್ಷಕ್ಕೆ ಈ ರೀತಿ ಭತ್ಯೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಮಾನವ ಸಂಪನ್ಮೂಲ ಅಧಿಕಾರಿ ಅಪ್ಪಾರಾವ್ ವಿವಿ ಹೇಳಿದ್ದಾರೆ.
ಬದಲಿ ನೇಮಕಾತಿ ವೆಚ್ಚ ಶೇ 15-20 ರಷ್ಟು ಅಧಿಕವಾಗಿದೆ. ಕೌಶಲ್ಯಕ್ಕೆ ತಕ್ಕಂತೆ ನೇಮಕಾತಿ ನಡೆದಿದೆ. ಜಾವಾ ಡೆವಲಪರ್ ನೇಮಕಕ್ಕೆ ತಗುಲುವ ವೆಚ್ಚಕ್ಕೆ ಕ್ಲೌಡ್ ವೃತ್ತಿಪರರನ್ನು ನೇಮಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 22,000 ಫ್ರೆಶರ್ಸ್ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಕಳೆದ ವರ್ಷ 15,600 ನೇಮಕ ಮಾಡಿಕೊಳ್ಳಲಾಗಿತ್ತು.
ಮೂರು ವರ್ಷಗಳ ಕ್ಯಾಶ್ ಬೋನಸ್ ಯೋಜನೆ ಜಾರಿಗೊಳಿಸಲಾಗಿದೆ. ಉದ್ಯೋಗಿಗಳನ್ನು ಉಳಿಸಿಕೊಳ್ಳಲು ಕೋವಿಡ್ ಕಾಲದಲ್ಲೂ ಬೋನಸ್ ನೀಡಲಾಗುತ್ತಿದೆ. ಶೇ 11.8ರಷ್ಟು ಆಟ್ರಿಷನ್ ದರ ಉಳಿಸಿಕೊಂಡಿದೆ. ಎಚ್ಸಿಎಲ್ ಒಟ್ಟಾರೆ 1,68, 977 ಉದ್ಯೋಗಿಗಳನ್ನು ಹೊಂದಿದ್ದು, ಆಟ್ರಿಷನ್ ದರ ಶೇ 16 ರಿಂದ ಶೇ 11.8ಕ್ಕೆ ಇಳಿಕೆಯಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಟಾಪ್ 3 ಕಂಪನಿಗಳಲ್ಲದೆ ಎಚ್ಸಿಎಲ್ ಟೆಕ್ ಸೇರಿದಂತೆ ಸುಮಾರು 1 ಲಕ್ಷ ಫ್ರೆಶರ್ಸ್ ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿವೆ.
ಇನ್ಫೋಸಿಸ್ ಶೇ 13.9 ರಷ್ಟು ಆಟ್ರಿಷನ್ ಹೊಂದಿದೆ. ಆನ್ ಸೈಟ್ ಆಟ್ರಿಷನ್ ದರ ಶೇ 24.3 ರಷ್ಟಿದೆ. ವಿಪ್ರೋ ಆಟ್ರಿಷನ್ ದರ ಶೇ 15.5 ಕ್ಕೇರಿದೆ. 10,000 ಉದ್ಯೋಗಿಗಳಿಗೆ ಬಡ್ತಿ ನೀಡಿದೆ. 12,000 ಫ್ರೆಶರ್ಸ್, 30,000 ಕ್ಯಾಂಪಸ್ ಆಫರ್ಸ್ ಮುಂದಿನ ಪ್ರಸಕ್ತ ವರ್ಷಕ್ಕೆ ನೇಮಕಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
-
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ''












Click it and Unblock the Notifications