ಕಾಗ್ನಿಜೆಂಟ್ ಸಂಸ್ಥೆ ಉದ್ಯೋಗಿಗಳಿಗೆ ಬೋನಸ್, ಬಡ್ತಿ ಘೋಷಣೆ
ಬೆಂಗಳೂರು, ಮಾರ್ಚ್ 5: ಪ್ರಮುಖ ಐಟಿ ಸಂಸ್ಥೆ ಕಾಗ್ನಿಜೆಂಟ್ ತನ್ನ ಉದ್ಯೋಗಿಗಳಿಗೆ ಬೋನಸ್, ಬಡ್ತಿ ಘೋಷಿಸಿದೆ. ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಿ ಸುಮಾರು 24000ಕ್ಕೂ ಅಧಿಕ ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ.
2019ರಲ್ಲಿ ಸಿಕ್ಕ ಬೋನಸ್ ಮೀರಿಸುವ ಕೊಡುಗೆ ಉದ್ಯೋಗಿಗಳಿಗೆ ಸಿಗಲಿದೆ ಎಂದು ಕಾಗ್ನಿಜೆಂಟ್ ಹೇಳಿದೆ. ತ್ರೈಮಾಸಿಕ ಅವಧಿ ಬಡ್ತಿ ಮಾದರಿಯನ್ನು ಕಾಗ್ನಿಜೆಂಟ್ ಅಳವಡಿಸಿಕೊಳ್ಳಲು ಮುಂದಾಗಿದ್ದು, ಉದ್ಯೋಗಿಗಳ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ. ಆದರೆ, ಈ ಪ್ರಕ್ರಿಯೆ ಸೀಮಿತ ವರ್ಗಕ್ಕೆ ಮಾತ್ರ ಜಾರಿಯಲ್ಲಿರಲಿದೆ. ಆದರೆ, ವಾರ್ಷಿಕ ಬೋನಸ್ ಹಲವು ಸ್ತರದ ಉದ್ಯೋಗಿಗಳಿಗೆ ಸಿಗಲಿದೆ ಎಂಬ ಮಾಹಿತಿ ಸಿಕ್ಕಿದೆ.
2020ರಲ್ಲಿ ಕಠಿಣ ಪರಿಸ್ಥಿತಿಯಲ್ಲೂ ನಮ್ಮ ಉದ್ಯೋಗಿಗಳ ಶ್ರಮವಹಿಸಿ ಕಾರ್ಯ ನಿರ್ವಹಿಸಿದ್ದಾರೆ. ಸಂಸ್ಥೆಯ ಪ್ರಗತಿಗೆ ಕಾರಣರಾದ ಉದ್ಯೋಗಿಗಳಿಗೆ ಬೋನಸ್ ನೀಡಲಾಗುತ್ತಿದೆ ಎಂದು ಕಾಗ್ನಿಜೆಂಟ್ ಇಂಡಿಯಾ ಚೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ನಂಬಿಯಾರ್ ಪ್ರತಿಕ್ರಿಯಿಸಿದ್ದಾರೆ. ಜಾಗತಿಕವಾಗಿ 1,60,000 ಉದ್ಯೋಗಿಗಳಿಗೆ ಕೌಶಲ್ಯ ಆಧಾರದ ಮೇಲೆ ಬೋನಸ್ ಸಿಗಲಿದ್ದು, 24000ಕ್ಕೂ ಅಧಿಕ ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ.

ಯುಎಸ್ ಮೂಲದ ಕಂಪನಿಯಲ್ಲಿ ಡಿಸೆಂಬರ್ 2020ರ ಎಣಿಕೆಯಂತೆ ಭಾರತದಲ್ಲಿ 2.9 ಲಕ್ಷ ಉದ್ಯೋಗಿಗಳಿದ್ದು, ಆಟ್ರಿಷನ್ ದರ ಶೇ 19ರಷ್ಟಿದ್ದು, ಕೊವಿಡ್ 19 ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಕಾಯ್ದಿಟ್ಟುಕೊಳ್ಳಲು ಬೋನಸ್, ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications