2021ರಲ್ಲೂ ಇನ್ಫೋಸಿಸ್ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ!
ಬೆಂಗಳೂರು, ಡಿಸೆಂಬರ್ 16: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಉಂಟಾಗಿರುವ ಅನಿಶ್ಚಿತತೆಯ ಕಾರಣದಿಂದ ಮುಂದಿನ ವರ್ಷವೂ ಅಂದರೆ 2021ರಲ್ಲೂ, ತನ್ನ ಕಂಪನಿಯ ಉದ್ಯೋಗಿಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ಮನೆ ಅಥವಾ ಕಚೇರಿಯಿಂದ ಕೆಲಸ ಮಾಡಲು ಅವಕಾಶ ನೀಡುತ್ತದೆ ಎಂದು ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಹೇಳಿದೆ.
ಮುಂದಿನ ವರ್ಷದಿಂದ ತನ್ನ ಉದ್ಯೋಗಿಗಳಿಗೆ ಹೊಂದಿಕೊಳ್ಳುವ ಹೈಬ್ರಿಡ್ ಕೆಲಸದ ಮಾದರಿಯನ್ನು ಅನ್ವೇಷಿಸುವುದಾಗಿ ಇನ್ಫೋಸಿಸ್ ಹೇಳಿದೆ. ಈ ಮೂಲಕ ಮುಂದಿನ ಆರು ತಿಂಗಳಿನಲ್ಲಿ ಎಲ್ಲಾ ದಿನಗಳಲ್ಲಿ ನೌಕರರು ಕಚೇರಿಯಲ್ಲಿ ಹಾಜರಾಗಬೇಕಾಗಿಲ್ಲ.
ಸಾಂಕ್ರಾಮಿಕ ರೋಗದ ಪರಿಸ್ಥಿತಿ ಮತ್ತು ವ್ಯಾಕ್ಸಿನೇಷನ್ ಸ್ಥಿತಿಯನ್ನು ಅವಲಂಬಿಸಿ ಹೇಗೆ ಮುಂದುವರಿಯುವುದು ಎಂಬುದರ ಕುರಿತು ಜೂನ್ ನಂತರ ಕಂಪನಿಯು ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ.

ಇನ್ಫೋಸಿಸ್ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಲೀಲ್ ಪರೇಖ್ ಅವರು ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಕಂಪನಿಯು ಮನೆಯಿಂದ ಕೆಲಸಕ್ಕೆ ಸಂಬಂಧಿಸಿದಂತೆ ಹೊಂದಿಕೊಳ್ಳುವ ಮಾದರಿಯನ್ನು ನಿರ್ಮಿಸಿದ್ದರೂ, 'ಸಾಮಾಜಿಕ ಬಂಡವಾಳ' ನಿರ್ಮಾಣದ ಕೆಲಸವನ್ನು ಪ್ರಾರಂಭಿಸುವ ಸಮಯ ಬಂದಿದೆ ಎಂದಿದ್ದಾರೆ.
''ಭವಿಷ್ಯದಲ್ಲಿ ಹೆಚ್ಚಿನ ಕಂಪನಿಗಳು ಹೈಬ್ರಿಡ್ ರೀತಿಯ ಕೆಲಸದ ಮಾದರಿಯೊಂದಿಗೆ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಇದು ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಭಿನ್ನವಾಗಿರುತ್ತದೆ'' ಎಂದು ಕಾರ್ಯನಿರ್ವಾಹಕ ಉಪಾಧ್ಯಕ್ಷ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಯ ಸಮೂಹ ಮುಖ್ಯಸ್ಥ ಕ್ರಿಶ್ ಶಂಕರ್ ಹೇಳಿದ್ದಾರೆ.
ಹೊಸ ಕೆಲಸದ ಮಾದರಿಯು ವಿಶೇಷವಾಗಿ ಮನೆಗಳಲ್ಲಿ ಆರೈಕೆ ಮಾಡುವ ಪಾತ್ರಗಳಲ್ಲಿ ತೊಡಗಿರುವ ಹೆಚ್ಚಿನ ಮಹಿಳೆಯರಿಗೆ ಉದ್ಯೋಗದಲ್ಲಿ ಭಾಗವಾಗಲು ಅವಕಾಶವನ್ನು ನೀಡುತ್ತದೆ ಎಂದು ಶಂಕರ್ ಹೇಳಿದರು.
ಭಾರತದಲ್ಲಿ 2 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಇನ್ಫೋಸಿಸ್ನಲ್ಲಿ, ಪ್ರಸ್ತುತ ಕೇವಲ ಶೇಕಡಾ 2ರಷ್ಟು ಜನರು ಕಚೇರಿಯಿಂದ ಕೆಲಸ ಮಾಡುತ್ತಿದ್ದರೆ, ಉಳಿದ ಶೇಕಡಾ 98ರಷ್ಟು ಜನರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ.
ಅಮೆರಿಕನ್ ಜಾಕ್ಪಾಟ್ನಲ್ಲಿ 520 ಮಿಲಿಯನ್ ಡಾಲರ್ ಗೆಲ್ಲಲು ಅವಕಾಶ
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications