ಜೆಟ್ ಏರ್ವೇಸ್ ಸ್ಥಾಪಕ ನರೇಶ್ ಮನೆ ಮೇಲೆ ''ಇಡಿ'' ದಾಳಿ
ಮುಂಬೈ, ಮಾರ್ಚ್ 5: ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್ ವೇಸ್ ವಿಮಾನಯಾನ ಸಂಸ್ಥೆ ಸ್ಥಾಪಕ ನರೇಶ್ ಗೊಯೇಲ್ ಮನೆ ಹಾಗೂ ಕಚೇರಿ ಮೇಲೆ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನರೇಶ್ ಗೊಯೆಲ್ ಸೇರಿದಂತೆ ಕೆಲ ಉದ್ಯಮಿಗಳ ವಿರುದ್ಧ ಮನಿಲಾಂಡ್ರಿಂಗ್ ಪ್ರಕರಣ ದಾಖಲಾಗಿದ್ದು, ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಮನಿಲಾಂಡ್ರಿಂಗ್ ನಿಯಂತ್ರಣ ಕಾಯ್ದೆ(ಪಿಎಂಎಲ್ಎ) ಅನ್ವಯ ನರೇಶ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಮುಂಬೈ ಪೊಲೀಸರು ಈ ಮುಂಚೆ ಇದೇ ಪ್ರಕರಣಕ್ಕೆ ಸೇರಿದಂತೆ ಎಫ್ಐಆರ್ ದಾಖಲಿಸಿದ್ದಾರೆ.
ಮುಂಬೈ ಮೂಲದ ಟ್ರಾವೆಲ್ ಸಂಸ್ಥೆಜೊತೆಗಿನ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ಕಾಯ್ದೆ(ಫೆಮಾ) ಉಲ್ಲಂಘನೆ ಆರೋಪದಂತೆ ಪ್ರಕರಣ ದಾಖಲಾಗಿದ್ದು, ಕಳೆದ ಸೆಪ್ಟೆಂಬರ್ ನಲ್ಲಿ ವಿಚಾರಣೆಗೊಳಪಟ್ಟಿದ್ದರು.

2019ರ ಏಪ್ರಿಲ್ ತಿಂಗಳಿನಿಂದ ಜೆಟ್ ಏರ್ ವೇಸ್ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಕಳೆದ ತಿಂಗಳು ಜೆಟ್ ಏರ್ ವೇಸ್ ಚೇರ್ಮನ್ ಸ್ಥಾನದಿಂದ ನರೇಶ್ ಕೆಳಗಿಳಿದಿದ್ದಾರೆ.ನರೇಶ್ ಗೋಯಲ್ ಮತ್ತು ಪತ್ನಿ ಅನಿತಾ ಗೋಯಲ್ ಆಡಳಿತ ಮಂಡಳಿಯಿಂದ ಹೊರ ನಡೆದಿರುವುದರಿಂದ ಹೆಚ್ಚುವರಿಯಾಗಿ ರೂ. 1500 ಕೋಟಿ ಆರ್ಥಿಕ ನೆರವು ಸಿಗುವ ಸಾಧ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೆಟ್ ಏರ್ವೇಸ್ ಈಗಾಗಲೇ 40ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. 2013ರಲ್ಲಿ ಕೂಡ ಜೆಟ್ ಏರ್ವೇಸ್ ಬಿಕ್ಕಟ್ಟಿನಲ್ಲಿ ಸಿಲುಕಿತ್ತು. ಆದರೆ ಅಬುದಾಬಿಯ ಎತಿಹಾದ್ ಸಂಸ್ಥೆ ಮಾಡಿದ ಆರ್ಥಿಕ ನೆರವಿನಿಂದ ಜೀವದಾನ ಪಡೆದಿತ್ತು. ಆದರೆ, ಬಿಕ್ಕಟ್ಟು 20,000 ಉದ್ಯೋಗಗಳನ್ನು ಪಣಕ್ಕಿಟ್ಟಿತ್ತು ಮತ್ತು ಅವರಲ್ಲಿ ಹಲವರು ವೇತನ ಕಡಿತದೊಂದಿಗೆ ಇತರೆ ವಿಮಾನಯಾನ ಸಂಸ್ಥೆಗಳಲ್ಲಿ ಉದ್ಯೋಗ ಅರಸಿಕೊಂಡು ಹೋಗಿದ್ದಾರೆ.
ಯುಎಇಯ ಕೆರೀರ್ ಇಥೆಡ್ ಏರ್ವೇ, ಏರ್ ಕೆನಡಾ, ಏರ್ಲೈನ್ ಸಂಸ್ಥಾಪಕ ನರೇಶ್ ಘೋಯಲ್ ಇನ್ನೂ ಕೆಲವರು ಜೆಟ್ ಏರ್ವೇಸ್ ಅನ್ನು ಕೊಳ್ಳಲು ಮುಂದೆ ಬಂದಿದ್ದು, ಈಗಾಗಲೇ ತಮ್ಮ ಮೊತ್ತವನ್ನು ವಿಮಾನಯಾನ ಸಂಸ್ಥೆಗೆ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications