ಮುಂದುವರಿದ ಚಿನ್ನಾಭರಣ ಅಂಗಡಿ ಮಾಲೀಕರ ಧರಣಿ
ನವದೆಹಲಿ, ಮಾರ್ಚ್, 14: ನಿಮ್ಮ ಮನೆಯಲ್ಲಿ ಮದುವೆ, ಮುಂಜಿ ಮತ್ತಿತರ ಯಾವುದಾದರೂ ಮಂಗಳ ಕಾರ್ಯ ಇಟ್ಟುಕೊಂಡಿದ್ದೀರಾ? ಹೌದಾ... ಹಾಗಾದರೆ ಈ ಸುದ್ದಿಯನ್ನು ಗಮನವಿಟ್ಟು ಓದಿ.
ದೇಶಾದ್ಯಂತ ಚಿನ್ನಾಭರಣ ಅಂಗಡಿಗಳು ಬಾಗಿಲು ಹಾಕಿದ್ದು ಆಭರಣ ಖರೀದಿ ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದೆಡೆ ದರ ಏರಿಕೆ ಬರೆ ಎಳೆದಿದ್ದರೆ ಇತ್ತ ಆಭರಣಗಳೇ ಸಿಗದೆ ಪರದಾಡುವಂತಾಗಿದೆ.[ಚಿನ್ನಾಭರಣ ಅಂಗಡಿ ಮಾಲೀಕರ ಮುಷ್ಕರ ಯಾಕೆ?]

ಚಿನ್ನಾಭರಣ ಅಂಗಡಿ ಮಾಲೀಕರ ಮುಷ್ಕರ 13 ದಿನ ಪೂರೈಸಿದೆ. ಮದುವೆ ಮತ್ತು ಮಂಗಳ ಕಾರ್ಯಕ್ಕೆ ಆಭರಣಗಳು ದೊರೆಯದೇ ಗ್ರಾಹಕರು ಪರಿತಪಿಸುವಂಥ ಸ್ಥಿತಿ ನಿರ್ಮಾಣವಾಗಿದೆ.[ಗೋಲ್ಡ್ ಮಾನಿಟೈಸೇಶನ್ ಯೋಜನೆ ಏಕೆ ಮತ್ತು ಏತಕ್ಕೆ?]
ಎರಡು ಲಕ್ಷಕ್ಕಿಂತ ಹೆಚ್ಚಿನ ವಹಿವಾಟಿಗೆ ಪಾನ್ ಕಾರ್ಡ್ ಕಡ್ಡಾಯ ಮತ್ತು ಆಭರಗಳ ವಹಿವಾಟಿನ ಮೇಲೆ ಶೇ. 1ರಷ್ಟು ಹೆಚ್ಚುವರಿ ಅಬಕಾರಿ ಸುಂಕ ವಿಧಿಸಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಚಿನ್ನಾಭರಣ ವರ್ತಕರು ಮುಷ್ಕರ ನಡೆಸುತ್ತಿದ್ದಾರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮಾರ್ಚ್ 17ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಸರಾಫ ಸಂಘದ ಉಪಾಧ್ಯಕ್ಷ ಸುರೀಂದರ್ ಕುಮಾರ್ ಜೈನ್ ತಿಳಿಸಿದ್ದಾರೆ.[ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]
ಬೆಂಗಳೂರಿನಲ್ಲಿ ಬೈಕ್ ಜಾಥಾ: ಬೆಂಗಳೂರಿನಲಿ ಬೈಕ್ ಜಾಥಾ ನಡೆಸಿದ ಚಿನ್ನಾಭರಣ ಅಂಗಡಿ ಮಾಲೀಕರು. ಕೇಂದ್ರ ಸರ್ಕಾರ ನೀತಿಯನ್ನು ಹಿಂದಕ್ಕೆ ಪಡೆಯುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದರು. ಬೆಂಗಳೂರು, ಮುಂಬೈ, ಚೆನ್ನೈ, ಹೈದರಾಬಾದ್, ದೆಹಲಿ, ಕೋಲ್ಕತ್ತ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನಾಭರಣ ವರ್ತಕರು ಮಳಿಗೆಗಳನ್ನು ಮುಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ.
-
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Bengaluru Mumbai Vande Bharat: ಬೆಂಗಳೂರು ಹೊಸ ವಂದೇ ಭಾರತ್ ಸ್ಲೀಪರ್ ರೈಲು: ನನ್ನ ಮನವಿಗೆ ಸ್ಪಂದನೆ: ಪ್ರಹ್ಲಾದ ಜೋಶಿ -
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications