ಕೆಫೆ ಕಾಫಿ ಡೇ ಅಂಗ ಸಂಸ್ಥೆ ಕೊಳ್ಳಲು ಮುಂದಾದ ಜಿಂದಾಲ್, ಅದಾನಿ
ಬೆಂಗಳೂರು, ಸೆ.10: ಕೆಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ಅಕಾಲಿಕ ಮರಣದ ಬಳಿಕ ಸಂಸ್ಥೆಯು ಸಾಲದ ಹೊರೆಯನ್ನು ತಗ್ಗಿಸಲು ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಬಿಸಿನೆಸ್ ಲೈನ್ ವರದಿ ಮಾಡಿದೆ.
ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್ ಮಾರಾಟಕ್ಕಿಟ್ಟ ಬಳಿಕ ಲಾಜಿಸ್ಟಿಕ್ ಕಂಪನಿ ಸಿಕಾಲ್ ಕೂಡಾ ಮಾರಾಟಕ್ಕಿಡಲಾಗಿದೆ. ಸಿಕಾಲ್ ಲಾಜಿಸ್ಟಿಕ್ ಲಿಮಿಟೆಡ್ ಕೂಡಾ 1,488 ಕೋಟಿ ರು ಸಾಲ ಹೊಂದಿದೆ.
ಜುಲೈ 31, 2019ರ ಪ್ರಕಟಣೆಯಂತೆ ಸಂಸ್ಥೆ 3,472 ಕೋಟಿ ರು ಸಾಲ ಹೊಂದಿತ್ತು. ಕೆಫೆ ಕಾಫಿ ಡೇ ಮಾಲೀಕರಾದ ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ಹೂಡಿಕೆದಾರರು ಒಟ್ಟು 2,437.29 ಕೋಟಿ ರು ಕಳೆದುಕೊಂಡಿದ್ದಾರೆ. ಜುಲೈ 29ರಂದು 4, 067.65 ಕೋಟಿ ರು ಇದ್ದ ಸಂಸ್ಥೆಯ ಮಾರುಕಟ್ಟೆ ಮೌಲ್ಯ 1630. 86 ಕೋಟಿ ರುಗೆ ಕುಸಿದಿದೆ.

ಲಾಜಿಸ್ಟಿಕ್ ಲಿಮಿಟೆಡ್ ಕಂಪನಿ ಸಿಕಾಲ್ ಮೂಲಕ ಕಂಟೇನರ್ ಫ್ರೇಟ್ ಕೇಂದ್ರ, ಪೋರ್ಟ್ ಟರ್ಮಿನಲ್ ಗಳನ್ನು ನಿಭಾಯಿಸಲಾಗುತ್ತಿದೆ. ಸಿಕಾಲ್ ಸಂಸ್ಥೆ ಕೊಳ್ಳಲು ಜೆಎಸ್ ಡಬ್ಲ್ಯೂ ಸಮೂಹ, ಅದಾನಿ ಗ್ರೂಪ್ ಮುಂಚೂಣಿಯಲ್ಲಿವೆ. ಇದಲ್ಲದೆ ದುಬೈ ಸರ್ಕಾರ ಸ್ವಾಮ್ಯದ ಡಿಪಿ ವರ್ಲ್ಡ್ ಕೂಡಾ ಆಸಕ್ತಿ ತೋರಿದೆ.
ತಮಿಳುನಾಡಿನ ಕಾಮರಾಜರ್ ಪೋರ್ಟ್ ನಲ್ಲಿ ಶೇ 74ರಷ್ಟು, ತೂತ್ತುಕುಡಿಯಲ್ಲಿ ಖಾಸಗಿ- ಸರ್ಕಾರಿ ಸಹಭಾಗಿತ್ವದ ವಿಒಸಿ ಬಂದರಿನಲ್ಲಿ ಶೇ49ರಷ್ಟು ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಶೇ 37ರಷ್ಟು ಆದಾಯವನ್ನು ಸಿಕಾಲ್ ಹೊಂದಿದೆ. ಇದಲ್ಲದೆ, ಭಾರತೀಯ ರೈಲ್ವೆಯಿಂದ ಕೆಟಗೆರಿ 1 ಲೈಸನ್ಸ್ ಹೊಂದಿದ್ದು, ಕಂಟೇನರ್ ರೈಲುಗಳನ್ನು ಭಾರತದಾದ್ಯಂತ ಓಡಿಸಲು ಅನುಮತಿ ಪಡೆದುಕೊಂಡಿದೆ. ಇದೆಲ್ಲರ ಜೊತೆಗೆ ಎಲ್ಲಾ ಕಡೆಗಳಿಂದಲೂ ಸಿಕಾಲ್ ಸಾಲ ಹೊಂದಿದೆ.
ಜುಲೈ 29ರಂದು ಮಂಗಳೂರು- ಉಳ್ಳಾಲ ಬಳಿಯ ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದ ಸಿದ್ದಾರ್ಥ, ಜುಲೈ 31ರಂದು ಹೊಯ್ಗೆ ಬಜಾರ್ ಸಮೀಪ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಮಾರ್ಚ್ 2019ರ ಎಣಿಕೆಯಂತೆ ಭಾರತದಲ್ಲಿ ಸುಮಾರು 1,752 ಕೆಫೆಗಳನ್ನು ಹೊಂದಿರುವ ಕೆಫೆ ಕಾಫಿ ಡೇ ಸದ್ಯ ದೇಶದಲ್ಲಿ ಮುಂಚೂಣಿಯಲ್ಲಿರುವ ಕಾಫಿ ಸಂಸ್ಥೆಯಾಗಿದೆ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications