ಕೇಂದ್ರ ಬಜೆಟ್ ಮಂಡನೆ ನಂತರ ಸಂಪುಟದಲ್ಲಿ ಭಾರಿ ಬದಲಾವಣೆ
ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಕೆಲ ನಿಯಮಗಳನ್ನು ರೂಪಿಸಿದ್ದಾರೆ. ಈ ಪೈಕಿ ಕೇಂದ್ರ ಬಜೆಟ್ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಆರ್ಥಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ದಿಗ್ಗಜರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಎಂಬ ಮಾಹಿತಿ ಬಂದಿದೆ.
ಐಎಎನ್ಎಸ್ ವರದಿಯಂತೆ ಬ್ರಿಕ್ಸ್ ಬ್ಯಾಂಕ್ ಅಧ್ಯಕ್ಷ, ಕನ್ನಡಿಗ ಕೆ.ವಿ.ಕಾಮತ್ ಶೀಘ್ರದಲ್ಲೇ ಹಣಕಾಸು ಸಚಿವಾಲಯದ ರಾಜ್ಯ ಸಚಿವರಾಗಿ ಸೇರ್ಪಡೆಗೊಳ್ಳುವ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಇವರೆಲ್ಲರ ಜೊತೆಗೆ ಸುರೇಶ್ ಪ್ರಭು ಅವರು ಮತ್ತೊಮ್ಮೆ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸುದ್ದಿಯಿದೆ.

ಬ್ರಿಕ್ಸ್ ಬ್ಯಾಕ್ ಅಧ್ಯಕ್ಷರಾಗುವುದಕ್ಕೂ ಮೊದಲು ಕೆ.ವಿ. ಕಾಮತ್ ಇನ್ಪೋಸಿಸ್ ಅಧ್ಯಕ್ಷರಾಗಿ ಮತ್ತು ಐಸಿಐಸಿಐ ಬ್ಯಾಂಕ್ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. 72 ವರ್ಷ ವಯಸ್ಸಿನ ಕಾಮತ್ ಅವರಿಗೆ ವಿತ್ತ ಸಚಿವಾಲಯದ ರಾಜ್ಯ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. 64ವರ್ಷ ವಯಸ್ಸಿನ ದಾಸ್ ಗುಪ್ತಾ ಅವರಿಗೆ ಮಾನವ ಸಂಪನ್ಮೂಲ ಖಾತೆಯ ರಾಜ್ಯ ಸಚಿವ ಸಿಗಲಿದೆ.
ಮೋದಿ 2.0 ಸರ್ಕಾರ 8 ತಿಂಗಳ ಆಡಳಿತ ಅವಧಿ ಮುಕ್ತಾಯಗೊಳಿಸಿದ್ದು, ಬಜೆಟ್ ನಂತರ ಜಿಡಿಪಿ ಪ್ರಗತಿ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಜುಲೈ- ಸೆಪ್ಟೆಂಬರ್ ಅವಧಿಯಲ್ಲಿ ಜಿಡಿಪಿ ಪ್ರಮಾಣ 4.5%ಕ್ಕೆ ಕುಸಿದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications