ಕರ್ನಾಟಕ ಬ್ಯಾಂಕ್ಗೆ 4 ಕಂಪನಿಗಳಿಂದ 285 ಕೋಟಿ ರುಪಾಯಿ ವಂಚನೆ
ನವದೆಹಲಿ, ಜೂನ್ 6: ಖಾಸಗಿ ವಲಯದ ಕರ್ನಾಟಕ ಬ್ಯಾಂಕ್ಗೆ, ಡಿಎಚ್ಎಫ್ಎಲ್ ಸೇರಿದಂತೆ ನಾಲ್ಕು ಕಂಪನಿಗಳು ಸಾಲ ಪಡೆದು ಮರುಪಾವತಿಸದೇ ಬರೋಬ್ಬರಿ 285 ಕೋಟಿ ರುಪಾಯಿ ವಂಚಿಸಿರುವುದಾಗಿ ವರದಿ ಮಾಡಿದೆ.
Recommended Video
ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಶನ್ ಲಿಮಿಟೆಡ್ (ಡಿಎಚ್ಎಫ್ಎಲ್), ರಿಲಿಗೇರ್ ಫಿನ್ವೆಸ್ಟ್, ಫೆಡರ್ಸ್ ಎಲೆಕ್ಟ್ರಿಕ್ ಮತ್ತು ಎಂಜಿನಿಯರಿಂಗ್ ಲಿಮಿಟೆಡ್ ಮತ್ತು ಲೀಲ್ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಿಂದ 2009 ರಿಂದ 2014 ರ ಅವಧಿಯಲ್ಲಿ ಒಟ್ಟು 285.52 ಕೋಟಿ ರುಪಾಯಿ ವಂಚಿಸಲಾಗಿದೆ ಎಂದು ಕರ್ನಾಟಕ ಬ್ಯಾಂಕ್ ತಿಳಿಸಿದೆ.
ಈ ನಾಲ್ಕು ಕಂಪನಿಗಳ ಪೈಕಿ ಡಿಎಚ್ಎಫ್ಎಲ್ ಅತಿ ಹೆಚ್ಚು ಅಂದರೆ 180.13 ಕೋಟಿ ರುಪಾಯಿ ವಂಚಿಸಿದೆ.

''2014 ರಿಂದ ನಮ್ಮೊಂದಿಗೆ ವ್ಯವಹರಿಸುವ ಡಿಎಚ್ಎಫ್ಎಲ್ ಒಕ್ಕೂಟದ ವ್ಯವಸ್ಥೆಯಲ್ಲಿ ವಿವಿಧ ಸಾಲ ಸೌಲಭ್ಯಗಳನ್ನು ಪಡೆದುಕೊಂಡಿದೆ, ಅದರ ಸದಸ್ಯ ಬ್ಯಾಂಕುಗಳಲ್ಲಿ ನಾವು ಒಬ್ಬರಾಗಿದ್ದೇವೆ. ಖಾತೆಯ ನಡವಳಿಕೆ ಮತ್ತು ಇತರ ಬೆಳವಣಿಗೆಗಳಲ್ಲಿ ಆರಂಭಿಕ ಎಚ್ಚರಿಕೆ ಸಂಕೇತಗಳ(ಇಡಬ್ಲ್ಯೂಎಸ್) ಗಮನಿಸಿ, ಅದರ ಖಾತೆಯನ್ನು ನವೆಂಬರ್ 11, 2019 ರಂದು ಕೆಂಪು ಪಟ್ಟಿಗೆ ಸೇರಿಸಲಾಗಿದೆ'' ಎಂದು ತಿಳಿಸಿದೆ.
ಡಿಎಚ್ಎಫ್ಎಲ್ ರೀತಿಯಲ್ಲಿ 2014 ರಿಂದ ವ್ಯವಹರಿಸುತ್ತಿದ್ದ ರಿಲಿಗೇರ್ ಫಿನ್ವೆಸ್ಟ್ 43.44 ಕೋಟಿ ರುಪಾಯಿ, ಫೆಡರ್ಸ್ ಎಲೆಕ್ಟ್ರಿಕ್ 41.30 ಕೋಟಿ ಮತ್ತು ಲೀಲ್ ಎಲೆಕ್ಟ್ರಿಕಲ್ಸ್ 20.65 ಕೋಟಿ ರುಪಾಯಿ ವಂಚಿಸಿದೆ ಎಂದು ಬ್ಯಾಂಕ್ ತಿಳಿಸಿದೆ.
ಈ ಕಂಪನಿಗಳ ಸಾಲ ಖಾತೆಗಳನ್ನು ಅಕ್ಟೋಬರ್ 30, 2019 ರಂದು ಅನುತ್ಪಾದಕ ಆಸ್ತಿ(NPA) ಎಂದು ವರ್ಗೀಕರಿಸಲಾಗಿದೆ. ಈ ನಾಲ್ಕು ಕಂಪನಿಗಳಿಂದ ಒಟ್ಟಾರೆ 285.52 ಕೋಟಿ ವಂಚನೆಯಾಗಿದೆ ಎಂದು ಕರ್ನಾಟಕ ಬ್ಯಾಂಕ್ ಆರ್ಬಿಐಗೆ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications