ಮನೆ ಕಟ್ಟುವವರು ಪ್ಲ್ಯಾನ್ ಗಾಗಿ ತಿಂಗಳು ಕಾಯಬೇಕಿಲ್ಲ
ಬೆಂಗಳೂರು, ಸೆಪ್ಟೆಂಬರ್, 19: ಒಂದು ಮನೆ ಕಟ್ಟಬೇಕಾದರೂ ತಿಂಗಳುಗಟ್ಟಲೆ ಬಿಲ್ಡಿಂಗ್ ಪ್ಲ್ಯಾನ್ ಗಾಗಿ ಕಾಯುವ ಕಾಲಕ್ಕೆ ಕೊನೆಗೂ ವಿದಾಯ ಹೇಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಡೀ ಪ್ರಕ್ರಿಯೆಯನ್ನು ಇಂಜಿಯರ್ ಗಳ ತ್ತಿಪರ ಸಮಿತಿಗೆ ಹೊರ ಗುತ್ತಿಗೆ ನೀಡುವ ಮೂಲಕ ವಾರದೊಳಗೆ ಮನೆಗೆ ಬಿಲ್ಡಿಂಗ್ ಪ್ಲ್ಯಾನ್ ಸಿಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ.
ಮನೆ ಸೇರಿದಂತೆ ಕಟ್ಟಡ ನಿರ್ಮಾಣ ಕ್ಷೇತ್ರ ಅದರಲ್ಲೂ ಮಧ್ಯಮ ವರ್ಗದವರು ಬೆಚ್ಚಿಬೀಳುವುದು ಸರ್ಕಾರದ ಕೆಂಪು ಪಟ್ಟಿಯ ವಿಳಂಬ ನೀತಿಯಿಂದ ಎಂದರೆ ಅತಿಶಯೋಕ್ತಿ ಆಗುವುದಿಲ್ಲ. ಈ ಕುರಿತು ಗಂಭೀರ ಚಿಂತನೆಯನ್ನು ಕೊನೆಗೂ ನಡೆಸಿರುವ ರಾಜ್ಯ ಸರ್ಕಾರ ಬಿಲ್ಡಿಂಗ್ ಪ್ಲಾನ್ ಇಡೀ ಪ್ರಕ್ರಿಯೆಯನ್ನು ತಜ್ಞ ಇಂಜಿನಿಯರ್ ಗಳ ಮಾತಿನ ಆಧಾರದಲ್ಲಿ ಹೊರಗುತ್ತಿಗೆ ನೀಡಲು ನಿರ್ಧರಿಸಿದೆ.
ವಿಳಂಬ ಇನ್ನಿಲ್ಲ: ದೊಡ್ಡ ಅಪಾರ್ಟ್ ಮೆಂಟ್ ಸಂಕೀರ್ಣ ಬಿಡಿ 30-40 ನಿವೇಶನದಲ್ಲಿ ಕಟ್ಟಿಕೊಳ್ಳುವ ಮಧ್ಯಮ ವರ್ಗದವರು ಕೂಡ ಬಿಲ್ಡಿಂಗ್ ಪ್ಲಾನ್ ಗಾಗಿ ಅಲೆದಾಡಬೇಕಾಗಿತ್ತು. ಭ್ರಷ್ಟಾಚಾರ, ಅಲೆದಾಟ, ಮಾನಸಿಕ ಕಿರುಕುಳದಿಂದಾಗಿ ಮನೆ ಕಟ್ಟಿಬಿಟ್ಟರೆ ಸಾಕು ಎನ್ನುವ ಪರಿಸ್ಥಿತಿ ಇತ್ತು. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಏಕಗವಾಕ್ಷಿ ವ್ಯವಸ್ಥೆ ಮತ್ತು ಆನ್ ಲೈನ್ ನಲ್ಲೇ ಅನುಮತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.[ಊರ್ಧ್ವಮುಖಿಯಾಗಿರುವ ಬೆಂಗಳೂರು ರಿಯಲ್ ಎಸ್ಟೇಟ್]
ಏಕಗವಾಕ್ಷಿ ವ್ಯವಸ್ಥೆ: ಗಗನಚುಂಬಿ ಮತ್ತು ವಾಣಿಜ್ಯ ಕಟ್ಟಡಗಳಿಗೂ ಸ್ಯಾಂಕ್ಷನ್ ಪ್ಲಾನ್ ಮತ್ತು ಆಕ್ಯುಪೆನ್ಸಿ ಸರ್ಟಿಫೀಕೆಟ್ ನೀಡುವ ಪ್ರಕ್ರಿಯೆಯನ್ನೂ ಸರಳಗೊಳಿಸಲು ನಗರಾಭಿವೃದ್ಧಿ ಇಲಾಖೆ ಚಿಂತನೆ ನಡೆಸಿದೆ. ಏಕಗವಾಕ್ಷಿ ವ್ಯವಸ್ಥೆಯ ಮೂಲಕ ಅಪಾರ್ಟ್ ಮೆಂಟ್ ಸೇರಿದಂತೆ ಎಲ್ಲಾ ಕಟ್ಟಡಗಳ ಸ್ಯಾಂಕ್ಷನ್ ಪ್ಲಾನ್ ಮತ್ತು ಆಕ್ಯುಪೆನ್ಸಿ ಸರ್ಟಿಫೀಕೆಟ್ ನೀಡಲು ಯೋಜನೆ ರೂಪಿಸುತ್ತಿದೆ.

ದೊಡ್ಡ ಕಟ್ಟಡಗಳಿಗೆ ಸ್ಯಾಂಕ್ಷನ್ ಪ್ಲಾನ್ ನೀಡುವುದು ತುಂಬಾ ಸಂಕೀರ್ಣ ವಿಷಯವಾಗಿದ್ದರಿಂದ ಹೆಚ್ಚು ಕಾಲ ಬೇಕಾಗುತ್ತದೆ. ಆರಂಭಿಕವಾಗಿ ಚಿಕ್ಕ ಯೂನಿಟ್ ಗಳಿಗೆ ಈ ರೀತಿ ಏಕಗವಾಕ್ಷಿ ಯೋಜನೆಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ' ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿ ಎ.ವಿ. ರಮೇಶ್ ಹೇಳಿದ್ದಾರೆ.
ಪ್ರಸಕ್ತ ಮನೆ ಕಟ್ಟಲು ಬಯಸುವವರು ಮೊದಲಿಗೆ ಸ್ಯಾಂಕ್ಷನ್ ಪ್ಲಾನ್ ಗಾಗಿ ಸ್ಥಳೀಯ ನಗರಾಡಳಿತ ಮಂಡಳಿಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಇದು ಪ್ಲಾನ್ ಅಪ್ರೂವಲ್ ಕಮಿಟಿ (ಪಿಎಸಿ)ಗೆ ಹೋಗುತ್ತಿತ್ತು. ಅಲ್ಲಿ ದಾಖಲೆಗಳ ಸಮಗ್ರ ಪರಿಶೀಲನೆಯ ಬಳಿಕ ಅನುಮೋದನೆ ಸಿಗುತ್ತಿತ್ತು. ಇದು ಹಲವು ಸಂದರ್ಭದಲ್ಲಿ ವಿಳಂಬ ಮತ್ತು ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು.[ನಿಮ್ಮ ಕನಸಿನ ಮನೆ ಹುಡುಕ್ತಿದ್ದೀರಾ, ಅದೀಗ ಇನ್ನೂ ಸುಲಭ!]
ಈ ಪ್ರಸ್ತಾವನೆಯನ್ನು ರಿಯಾಲ್ಟಿ ಕ್ಷೇತ್ರ ವ್ಯಾಪಕವಾಗಿ ಸ್ವಾಗತಿಸಿದೆ. ರಿಯಾಲ್ಟಿಯ ದೀರ್ಘಕಾಲದ ಬೇಡಿಕೆಯಾದ ಏಕಗವಾಕ್ಷಿ ಯೋಜನೆಯನ್ನು ಸಮಗ್ರವಾಗಿ ಜಾರಿಗೆ ತರುವ ನಿಟ್ಟಿನ ಯಾವುದೇ ಕ್ರಮ ಸ್ವಾಗತಾರ್ಹ. ಎಲ್ಲಾ ರೀತಿಯ ಕಟ್ಟಡಗಳಿಗೂ ಆನ್ಲೈನ್ ದಾಖಲೆ ಸಲ್ಲಿಕೆ ಕಡ್ಡಾಯಗೊಳಿಸಬೇಕು. ದಾಖಲೆ ಪರಿಶೀಲನೆಯೇ ವಿಳಂಬಕ್ಕೆ ಕಾರಣವಾಗುವುದನ್ನು ತಪ್ಪಿಸಬೇಕು. ಇದರಿಂದ ಸಾಲದ ಮೇಲಿನ ಬಡ್ಡಿಯ ಮೊತ್ತದಲ್ಲಿ ಗಣನೀಯ ಇಳಿಕೆಯಾಗಿ ಆ ಮೂಲಕ ನಿರ್ಮಾಣ ವೆಚ್ಚ ಕಡಿಮೆಯಾಗಲಿದೆ' ಎಂದು ಕ್ರೆಡೈ ಬೆಂಗಳೂರು ಕಾರ್ಯದರ್ಶಿ ಸುರೇಶ್ ಹರಿ ಅಭಿಪ್ರಾಯಪಟ್ಟಿದ್ದಾರೆ.
ಅನುಮೋದನೆ ವಿಳಂಬದಿಂದ ಮನೆ ಖರೀದಿ ಅಥವಾ ನಿರ್ಮಾಣ ವೆಚ್ಚ ಹೆಚ್ಚಾಗುತ್ತಿದೆ. ಅನುಮೋದನೆಗಳನ್ನು ಶೀಘ್ರ ನೀಡುವ ನಿಟ್ಟಿನಲ್ಲಿ ಸರ್ಕಾರದ ಈ ತೀರ್ಮಾನ ಖಚಿತವಾಗಿಯೂ ಮಧ್ಯಮ ವರ್ಗದವರಿಗೆ ಪರೋಕ್ಷವಾಗಿ ನೆರವು ನೀಡಲಿದೆ' ಎಂದು ಬ್ರಿಗೇಡ್ ಗ್ರೂಪ್ ಸಿಇಒ ಓಂ ಅಹುಜಾ ಹೇಳಿದ್ದಾರೆ.
ಮಾದರಿ ಬೈಲಾ: ಕೇಂದ್ರ ಸರ್ಕಾರವು ಮಾದರಿ ಬಿಲ್ಡಿಂಗ್ ಬೈಲಾ 2016ನ್ನು ಈಗಾಗಲೇ ಸಿದ್ಧಪಡಿಸಿದೆ. ಇದನ್ನು ಅಳವಡಿಸಿಕೊಂಡು ಬಿಲ್ಡಿಂಗ್ ಪ್ಲಾನ್ ತ್ವರಿತವಾಗಿ ಅನುಮೋದನೆ ದೊರೆಯುವಂತೆ ಮಾಡಲು ರಾಜ್ಯಗಳಿಗೆ ಕೇಂದ್ರ ಈಗಾಗಲೇ ಸಲಹೆ ನೀಡಿದೆ. ಈ ಮಾದರಿ ಬೈಲಾ ಪ್ರಕಾರ, ವೃತ್ತಿಪರರ ಸಮಿತಿಯೊಂದು ಡೀಮ್ಡ್ ಬಿಲ್ಡಿಂಗ್ ಪರ್ಮಿಟ್ ಸಿದ್ಧಪಡಿಸಬೇಕು.
ಸಮಿತಿಯಲ್ಲಿ ಕಟ್ಟಡ ನಿರ್ಮಾಣ ಇಂಜಿನಿಯರ್, ಸರ್ವಿಸ್ ಇಂಜಿನಿಯರ್ ಮತ್ತು ಪ್ರೂಪ್ ಕನ್ಸಲ್ಟೆಂಟ್ಗಳು ಇರಬೇಕಾಗುತ್ತದೆ. ಆ ಬಳಿಕವೇ ಅರ್ಜಿಯನ್ನು ಸ್ಥಳೀಯ ನಗರಾಡಳಿತ ಮಂಡಳಿಗೆ ಅವಶ್ಯಕ ದಾಖಲೆಗಳೊಂದಿಗೆ ಸಲ್ಲಿಸಬೇಕು. 10 ದಿನಗಳ ಒಳಗೆ ನಗರಾಡಳಿತ ಮಂಡಳಿ ಅರ್ಜಿಯನ್ನು ಪರಿಶೀಲಿಸಿ, ಈಗಾಗಲೇ ಪರಿಶೀಲನೆ ನಡೆಸಿದ ವೃತ್ತಿಪರರ ಸಮಿತಿಗೆ ಮಾಹಿತಿ ನೀಡಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟಿನಲ್ಲಿ ಈ ಹೊಸ ಏಕಗವಾಕ್ಷಿ ಯೋಜನೆ ಖಚಿತವಾಗಿಯೂ ಬಿಲ್ಡಿಂಗ್ ಪ್ಲಾನ್ ಪಡೆಯುವ ಪ್ರಕ್ರಿಯೆಯನ್ನು ಸಾಕಷ್ಟು ಸರಳಗೊಳಿಸಲಿದೆ. ಪದೇ ಪದೇ ಕಚೇರಿಗೆ ಅಲೆದಾಡುವ ಪ್ರಯಾಸವನ್ನು ಅರ್ಜಿದಾರರಿಗೆ ತಪ್ಪಿಸಲಿದೆ.
ರಿಯಾಲ್ಟಿಯ ದೀರ್ಘ ಕಾಲದ ಬೇಡಿಕೆಯಾದ ಏಕಗವಾಕ್ಷಿ ಯೋಜನೆಯನ್ನು ಸಮಗ್ರವಾಗಿ ಜಾರಿಗೆ ತರುವ ನಿಟ್ಟಿನ ಯಾವುದೇ ಕ್ರಮ ಸ್ವಾಗತಾರ್ಹ. ಇದರಿಂದ ನಿರ್ಮಾಣ ವೆಚ್ಚ ಕಡಿಮೆಯಾಗುತ್ತದೆ ಎಂದು ಕ್ರೇಡಾಯ್ ಬೆಂಗಳೂರು ಕಾರ್ಯದರ್ಶಿ ಸುರೇಶ್ ಹರಿ ಹೇಳುತ್ತಾರೆ. ಒಟ್ಟಿನಲ್ಲಿ ಹೊಸ ಯೋಜನೆ ಮಧ್ಯಮ ವರ್ಗದ ನಾಗರಿಕರಿಗೆ ನೆರವು ನೀಡುವುದರಲ್ಲಿ ಅನುಮಾನ ಇಲ್ಲ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications