ಟೆಕ್ಕಿಗಳ ಕೈಯಿಂದ ಸಿಗರೇಟ್ ಕಿತ್ತುಕೊಂಡ ಸರ್ಕಾರ
ಬೆಂಗಳೂರು, ನ.03: ಬೆಂಗಳೂರಿನಲ್ಲಿರುವ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಬಯೋ ಟೆಕ್ನಾಲಜಿ ಕೇಂದ್ರಗಳ ಕ್ಯಾಂಪಸ್ ಗಳಲ್ಲಿ ಧೂಮಪಾನ ನಿಷೇಧಿಸುವಂತೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾನೂನು ಜಾರಿಯಲ್ಲಿದ್ದು, ಈ ನಿಯಮ ಐಟಿ- ಬಿಟಿ ಕಂಪನಿಗಳಿಗೂ ಆನ್ವಯವಾಗಲಿದೆ.
ಐಟಿ, ಬಿಟಿ, ಐಟಿಯೇತರ ಸಂಸ್ಥೆಗಳಲ್ಲಿ ಸ್ಮೋಕಿಂಗ್ ಜೋನ್ ಎಂದು ಪ್ರತ್ಯೇಕ ಸ್ಥಳ ಕಾಯ್ದಿರಿಸಿ, ಟೆಕ್ಕಿಗಳು ಸಮಯ ಸಿಕ್ಕಾಗಲೆಲ್ಲಾ ಸಿಗರೇಟ್ ಸೇದಲು ಸಂಸ್ಥೆಗಳು ನೆರವಾಗುತ್ತಿವೆ. ಧೂಮಪಾನ ವಿಷಯದಲ್ಲಿ ಪುರುಷ ಹಾಗೂ ಮಹಿಳಾ ಉದ್ಯೋಗಿಗಳು ಸಮಾನತೆ ಸಾಧಿಸಿದ್ದು, ಐಟಿ ಬಿಟಿ ಉದ್ಯೋಗಿಗಳ ಆರೋಗ್ಯದ ದೃಷ್ಟಿಯಿಂದ ಈ ನಿಯಮ ಕಟ್ಟುನಿಟ್ಟಾಗಿ ಪಾಲಿಸುವುದು ಅನಿವಾರ್ಯ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆದೇಶಿಸಿದೆ.[ತಂಬಾಕು ತ್ಯಜಿಸಿದರೆ ಯಾರಿಗೆ ಲಾಭ? ಯಾರಿಗೆ ನಷ್ಟ?]

ಐಟಿ ಸಂಸ್ಥೆಗಳಿಗೆ ಈ ಕುರಿತಂತೆ ಸುತ್ತೋಲೆ ಕಳಿಸಲಾಗಿದೆ ಎಂದು ಐಟಿ, ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ ಮಂಜುಳಾ ಅವರು ಹೇಳಿದ್ದಾರೆ. ಇಂಡಿಯಾ ಎಲೆಕ್ಟ್ರಾನಿಕ್ ಅಂಡ್ ಸೆಮಿಕಂಡಕ್ಟರ್ ಅಸೋಸಿಯೇಷನ್, ಅನಿಮೇಷನ್, ವಿಷುಯಲ್ ಎಫೆಕ್ಟ್, ಗೇಮ್ಸ್ ಅಂಡ್ ಕಾಮಿಕ್, ನಾಸ್ಕಾಂ ಸಂಸ್ಥೆಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.[ಹೊಗೆ ಬಿಟ್ಟರೆ 20 ಸಾವಿರ ರೂಪಾಯಿ ದಂಡ!]
Cigarettes and Other Tobacco Products Act 2003 (COTPA) ಕಾಯ್ದೆಯ ಸೆಕ್ಷನ್ 4 ರ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವಂತಿಲ್ಲ. ಒಂದು ವೇಳೆ ಮಾಡಿದರೆ ಶಿಕ್ಷಾರ್ಹ ಅಪರಾಧವಾಗುತ್ತದೆ.[ಧೂಮಪಾನ ಮಾಡುವುದು ಬಿಡುವುದು ನಿಮ್ಮಿಷ್ಟ!]
ಸುತ್ತೋಲೆ ಪ್ರಕಾರ : COTPA ಅನ್ವಯ ಎಲ್ಲಾ ನಿಯಮಗಳನ್ನು ಜಾರಿಗೊಳಿಸಬೇಕು. ಸಂಸ್ಥೆಯ ಪ್ರತಿ ಮಹಡಿ, ಮೆಟ್ಟಿಲು, ಲಿಫ್ಟ್ ದ್ವಾರದ ಮುಂದೆ ಧೂಮಪಾನ ನಿಷೇಧದ ಬೋರ್ಡ್ ಹಾಕಿರಬೇಕು.ತಂಬಾಕು ಸೇವನೆ ಬಗ್ಗೆ ಉದ್ಯೋಗಿಗಳಿಗೆ ತಿಳಿ ಹೇಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ಸ್ವಸಹಾಯ ಸಂಘಗಳನ್ನು ಬಳಸಬಹುದು.ಲಕ್ಷಾಂತರ ಮಂದಿ ಉದ್ಯೋಗಿಗಳು ಈ ಸುತ್ತೋಲೆಯನ್ನು ಹೇಗೆ ಸ್ವೀಕರಿಸುತ್ತಾರೋ ಕಾದು ನೋಡಬೇಕಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications