ವಿಜಯ್ ಮಲ್ಯ ಮದ್ಯದಂಗಡಿ ಮುಚ್ಚಳಕ್ಕೆ ಆದೇಶ
ಬೆಂಗಳೂರು, ಡಿ. 17: ಉದ್ಯಮಿ ವಿಜಯ ಮಲ್ಯ ಒಡೆತನದ ಯುಬಿ (ಯುನೈಟೆಡ್ ಬ್ರಿವರೀಸ್ ಹೋಲ್ಡಿಂಗ್ ಲಿ) ಸಂಸ್ಥೆಯನ್ನು ಮುಚ್ಚಿಯಾದರೂ ತನ್ನ ಸಾಲ ತೀರಿಸಬೇಕೆಂದು ಕೋರಿ ಬಿಎನ್ ಪಿ ಪಾರಿಬಾಸ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟಿನ ವಿಭಾಗೀಯ ಪೀಠ ಪುರಸ್ಕರಿಸಿದೆ.
ಹೈಕೋರ್ಟಿನ ಏಕ ಸದಸ್ಯ ಪೀಠದ ಕ್ರಮ ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ್ದ ಮೇಲ್ಮನವಿ ಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎನ್. ಕುಮಾರ್ ಮತ್ತು ನ್ಯಾಯಮೂರ್ತಿ ರತ್ನಕಲಾ ಅವರಿದ್ದ ವಿಭಾಗೀಯ ಪೀಠ, ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ನ್ಯಾಯಮೂರ್ತಿ ಎನ್. ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಡಿ.17ರಂದು ಸಂಸ್ಥೆ ಮುಚ್ಚುವ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಬೇಕಿದೆ. ಇದಕ್ಕೆ ತಡೆ ನೀಡುವಂತೆ ಯುಬಿಎಚ್ಎಲ್ ಸಂಸ್ಥೆಯ ಪರ ವಕೀಲರು ಮಾಡಿದ ಮನವಿಯನ್ನೂ ಪೀಠ ಸೋಮವಾರ ತಿರಸ್ಕರಿಸಿತು.

'ಸುಮಾರು 6 ಸಾವಿರ ಕೋಟಿ ರೂ. ಹಣವನ್ನು ಸಾರ್ವಜನಿಕ ವಲಯದ ಬ್ಯಾಂಕುಗಳು ಸಾಲ ನೀಡಿವೆ. ಅದರಲ್ಲಿ ಸಾರ್ವಜನಿಕರ ಹಣವೂ ಸೇರಿದೆ. ಈ ವಿಷಯದಲ್ಲಿ ವಿಳಂಬ ಮಾಡುವುದು ಸರಿಯಲ್ಲ. ಒಂದು ವೇಳೆ ಸಂಸ್ಥೆ ಮುಚ್ಚಬೇಕು ಎನ್ನುವ ಏಕಸದಸ್ಯ ಪೀಠ ನ.19ರಂದು ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದರೆ, ಸಾರ್ವಜನಿಕರ ಹಣ ವಸೂಲಿಗೆ ನ್ಯಾಯಾಲಯಗಳೇ ಅಡ್ಡ ಬರುತ್ತಿವೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಮೂಡುತ್ತದೆ'ಎಂದು ನ್ಯಾಯಪೀಠ ಹೇಳಿದೆ.
ಕಿಂಗ್ ಫಿಷರ್ ಏರ್ ಲೈನ್ಸ್ ಕಂಪೆನಿಗೆ ವಿಮಾನ ಖರೀದಿಸಲು ಫ್ರಾನ್ಸ್ ಮೂಲದ ಬಿಎನ್ ಪಿ ಪಾರಿಬಾಸ್ ಕಂಪೆನಿ 200 ಕೋಟಿ ರೂ. ಸಾಲ ನೀಡಿತ್ತು. ಈ ಸಮಯದಲ್ಲಿ ಸಾಲಕ್ಕೆ ಯುಬಿ ಸಮೂಹ ಸಂಸ್ಥೆಯನ್ನು ಖಾತ್ರಿಯಾಗಿ ನೀಡಿತ್ತು. ಯುಬಿ ಕಂಪೆನಿಯನ್ನು ಮಾರಾಟ ಮಾಡಿ ತನಗೆ ಆ ಮೊತ್ತ ಪಾವತಿಸಬೇಕೆಂದು ಪಾರಿ ಬಾಸ್ ಸಲ್ಲಿಸಿದ್ದ ಅರ್ಜಿಯನ್ನು ಏಕ ಸದಸ್ಯ ಪೀಠ ಇತ್ತೀಚೆಗೆ ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಇದನ್ನು ಪ್ರಶ್ನಿಸಿ ಯುಬಿ ಮೇಲ್ಮನವಿ ಸಲ್ಲಿಸಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications