18,000 ಟೆಕ್ಕಿಗಳಿಗೆ ಪಿಂಕ್ ಸ್ಲಿಪ್, ಕರ್ನಾಟಕ ಐಟಿ ಯೂನಿಯನ್ ಗರಂ
ಬೆಂಗಳೂರು, ಜುಲೈ 6: ಭಾರತದ ಪ್ರಮುಖ ಐಟಿ ಸಂಸ್ಥೆ ಕಾಗ್ನಿಜಂಟ್ ತನ್ನ 18,000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಮುಂದಾಗಿದೆ. ಈ ಸುದ್ದಿ ಬಗ್ಗೆ ಕರ್ನಾಟಕ ರಾಜ್ಯ ಐಟಿ/ ಐಟಿಯೇತರ ಉದ್ಯೋಗಿಗಳ ಯೂನಿಯನ್(KITU) ಗರಂ ಆಗಿದ್ದು, ಕಾನೂನು ಸಮರ ಆರಂಭಿಸಿದೆ.
ಕೊರೊನಾ ಮಹಾಮಾರಿಯಿಂದಾಗಿ ಐಟಿ ಕಂಪನಿಗಳಿಗೆ ತಕ್ಕಮಟ್ಟಿನ ಆರ್ಥಿಕ ಹೊಡೆತ ಬಿದ್ದಿದೆ. ಆದರೆ, ಯಾವುದೇ ಕಾರಣಕ್ಕೂ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಬೇಡಿ ಎಂದು ಪ್ರಧಾನಿ ಮೋದಿಯಿಂದ ಸ್ಥಳೀಯ ಐಟಿ ಬಿಟಿ ಸಚಿವ ಡಾ. ಅಶ್ವಥ್ ನಾರಾಯಣ ತನಕ ಎಲ್ಲರೂ ಐಟಿ ಸಂಸ್ಥೆಗೆ ಕೇಳಿಕೊಂಡರೂ ಬೆಲೆ ಇಲ್ಲದ್ದಂತಾಗಿದೆ.
ಅಮೆರಿಕ ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ತನ್ನದೇ ಕಾನೂನು ಪಾಲಿಸುವಂತಿದೆ. 18 ಸಾವಿರಕ್ಕೂ ಅಧಿಕ ಮಂದಿಗೆ ಯಾವುದೇ ಪ್ರಾಜೆಕ್ಟ್ ನೀಡದೆ ಬೆಂಚ್ ನಲ್ಲಿರಿಸಲಾಗಿತ್ತು.

ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ
ಭಾರತದೆಲ್ಲೆಡೆ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಕಂಪನಿ ಆಡಳಿತ ಮಂಡಳಿ ಒತ್ತಡ ಹೇರಿದೆ. ಈ ಬಗ್ಗೆ ಆತಂಕ ವ್ಯಕ್ತ ಪಡಿಸಿ ಉದ್ಯೋಗಿಗಳು ಕೆಐಟಿಯು ಮೊರೆ ಹೊಕ್ಕಿದ್ದಾರೆ. ಯಾರೂ ಗಾಬರಿಯಾಗಬೇಡಿ, ನಿಮ್ಮ ಮೇಲೆ ಉದ್ಯೋಗ ಸಂಸ್ಥೆ ಒತ್ತಡ ಹೇರಿದರೆ, ಕಾಮಿಕ ಇಲಾಖೆಗೆ ಸೂಚಿಸಿ, ಸಹಾಯವಾಣಿ ನೆರವು ಪಡೆದುಕೊಳ್ಳಿ ಎಂದು ಐಟಿ ಯೂನಿಯನ್ ಧೈರ್ಯ ತುಂಬಿದೆ.

ಕಾಗ್ನಿಜಂಟ್ ಕ್ರಮವನ್ನು ಖಂಡಿಸಿರುವ ಕೆಐಟಿಯು
ಕಾಗ್ನಿಜಂಟ್ ಕ್ರಮವನ್ನು ಖಂಡಿಸಿರುವ ಕೆಐಟಿಯು, ಇದು ಅಮಾನವೀಯ ಕ್ರಮ, ಕಾರ್ಮಿಕ ಕಾಯ್ದೆ ಪ್ರಕಾರ 100 ಅಧಿಕ ಉದ್ಯೋಗಳ ನೇಮಕ, ಉದ್ಯೋಗ ಕಡಿತ ಕುರಿತ ಮೊದಲಿಗೆ ಕಾರ್ಮಿಕ ಇಲಾಖೆಗೆ ತಿಳಿಸಬೇಕಾಗುತ್ತದೆ. ಆದರೆ, ಇಲ್ಲಿ ಯಾವುದೇ ಕಾನೂನು ಅನುಸರಿಸಿಲ್ಲ, ಬದಲಿಗೆ ಬಲವಂತವಾಗಿ ರಾಜೀನಾಮೆ ಪಡೆದುಕೊಳ್ಳಲಾಗಿದೆ ಎಂದು ಕೆಐಟಿಯು ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಸಿ ಹೇಳಿದ್ದಾರೆ.

ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು
ಕಾಗ್ನಿಜಂಟ್ ವಿರುದ್ಧ ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ಸಲ್ಲಿಸಲು ಉದ್ಯೋಗಿಗಳು ಮುಂದಾಗಿದ್ದಾರೆ. ಸಂಸ್ಥೆಗೆ ಲೀಗಲ್ ನೋಟಿಸ್ ಕಳಿಸಲಾಗಿದ್ದು, ಸಮರ್ಪಕ ಪ್ರತಿಕ್ರಿಯೆ ಬರದಿದ್ದರೆ, ಕಾನೂನು ಇಲಾಖೆ ಮೂಲಕ ಕ್ರಮಕ್ಕೆ ಮುಂದಾಗಲಾಗುವುದು, ಬೆಂಗಳೂರು, ಪುಣೆ, ಚೆನ್ನೈ ಇತರೆಡೆಗಳಲ್ಲಿರುವ ಯೂನಿಯನ್ ಕೂಡಾ ಇದೇ ರೀತಿ ಕ್ರಮ ಅನುಸರಿಸಲಿವೆ ಎಂದರು.
|
18,000 ಟೆಕ್ಕಿಗಳಿಗೆ ಪಿಂಕ್ ಸ್ಲಿಪ್,ಐಟಿ ಯೂನಿಯನ್ ಗರಂ
ಆದರೆ, ಈ ಎಲ್ಲಾ ಸುದ್ದಿಯನ್ನು ಅಲ್ಲಗೆಳೆದಿರುವ ಕಾಗ್ನಿಜಂಟ್ ವಕ್ತಾರರು, ಇದು ವಾರ್ಷಿಕವಾಗಿ ನಡೆಯುವ ಸಹಜ ಪ್ರಕ್ರಿಯೆ, ಕಾರ್ಯಕ್ಷಮತೆ ಆಧಾರದ ಮೇಲೆ ಉದ್ಯೋಗಿಗಳ ಸಂಖ್ಯೆ ಕಡಿತಗೊಳಿಸಲಾಗುತ್ತದೆ ಎಂದಿದ್ದಾರೆ. ಉದ್ಯೋಗ ಕಡಿತ, ಮಾರಾಟಕ್ಕಾಗಿ ಹೂಡಿಕೆ ಮತ್ತು ಡಿಜಿಟಲ್ ಪ್ರಗತಿ ಬಗ್ಗೆ ಹೆಚ್ಚಿನ ಗಮನ ಕೇಂದ್ರೀಕರಿಸುವುದು ಕಂಪೆನಿಯ ಉದ್ದೇಶಗಳಲ್ಲಿ ಸೇರಿದೆ. ಮಧ್ಯಮ ಹಂತದಿಂದ ಉನ್ನತ ಹುದ್ದೆಯ ತನಕ ಜವಾಬ್ದಾರಿ ನಿರ್ವಹಿಸುತ್ತಿರುವ ಹತ್ತರಿಂದ ಹನ್ನೆರಡು ಸಾವಿರ ಮಂದಿ ತಮ್ಮ ಹುದ್ದೆಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಕಳೆದ ವರ್ಷವೇ ಸಂಸ್ಥೆ ಪ್ರಕಟಿಸಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications