ಗ್ಲೋಬಲ್ ಸ್ಟಾರ್ಟ್ಅಪ್ ಚಾಲೆಂಜ್- 'ವೆಂಚುರೈಸ್'ಗೆ ಚಾಲನೆ
ಬೆಂಗಳೂರು, ಸೆಪ್ಟೆಂಬರ್ 02: ಉತ್ಪಾದನೆ ಮತ್ತು ಸುಸ್ಥಿರತೆ-ಸಂಬಂಧಿತ ವಲಯಗಳಲ್ಲಿ ಸ್ಟಾರ್ಟ್ಅಪ್ಗಳನ್ನು ಗುರುತಿಸಿ, ಬೆಂಬಲಿಸುವ 'ವೆಂಚುರೈಸ್' ಸ್ಪರ್ಧೆಗೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ. 2022ರ ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಸ್ಪರ್ಧೆಯ ವಿಜೇತರಿಗೆ 100,000 ಡಾಲರ್ ನಗದು ಬಹುಮಾನ ಘೋಷಿಸಲಾಗಿದೆ.
'ವೆಂಚುರೈಸ್' ಲೋಗೊ ಬಿಡುಗಡೆ ಮಾಡಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ ಆರ್. ನಿರಾಣಿ, "ಉತ್ಪಾದನೆ ಮತ್ತು ಸಂಬಂಧಿತ ವಲಯಗಳಲ್ಲಿನ ಸ್ಟಾರ್ಟ್ಅಪ್ಗಳಿಗೆ ರಾಜ್ಯವನ್ನು ಆದ್ಯತೆಯ ತಾಣವಾಗಿ ರೂಪಿಸುವುದು ನಮ್ಮ ಆದ್ಯತೆ. ಉದ್ಯಮಿಗಳಿಗೆ ಪೂರಕ ವಾತಾವರಣ ಕಲ್ಪಿಸಲು ಅತ್ಯುತ್ತಮ ಮೂಲಸೌಕರ್ಯ ನಿರ್ಮಿಸಲು ನಮ್ಮ ಸರ್ಕಾರ ಬದ್ಧ,"ಎಂದು ತಿಳಿಸಿದರು.
"ಬೆಂಗಳೂರಿನಲ್ಲಿ ನವೆಂಬರ್ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ 'ವೆಂಚುರೈಸ್- ಗ್ಲೋಬಲ್ ಸ್ಟಾರ್ಟ್ಅಪ್ ಪಿಚ್ ಚಾಲೆಂಜ್' ಆಯೋಜಿಸಲಾಗಿದೆ. ಸ್ಟಾರ್ಟ್ಅಪ್ಗಳ ಬೆಳವಣಿಗೆಯನ್ನು ಬೆಂಬಲಿಸಿ, ಅವರಿಗೆ ಹೂಡಿಕೆದಾರರು ಮತ್ತು ಉದ್ಯಮ ಪಾಲುದಾರರ ಜತೆ ಸಂಪರ್ಕ ಕಲ್ಪಿಸುವ ಪ್ರಯತ್ನವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ," ಎಂದು ಮುರುಗೇಶ್ ನಿರಾಣಿ ಹೇಳಿದರು.

ಅಮೆಜಾನ್ ಪ್ರಾಯೋಜಿತ ಈ 'ಸ್ಟಾರ್ಟ್ಅಪ್ ಪಿಚ್ ಚಾಲೆಂಜ್'ನ ಸುಗಮ ನಿರ್ವಹಣೆಗಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜತೆ ಟಿಐಇ ಕೈ ಜೋಡಿಸಿದೆ.
ಏನಿದು ಚಾಲೆಂಜ್?
ಮುಂದಿನ 2 ತಿಂಗಳ ಅವಧಿಯಲ್ಲಿ ನಡೆಯಲಿರುವ ಈ ಸ್ಪರ್ಧೆಯ ಮೊದಲ ಹಂತ ಆನ್ಲೈನ್ ಅರ್ಜಿ ಸಲ್ಲಿಕೆ. ಆನ್ಲೈನ್ ಪಿಚಿಂಗ್ ಎರಡನೇ ಭಾಗವಾದರೆ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ. ಪ್ರಪಂಚದಾದ್ಯಂತ 2000ಕ್ಕೂ ಹೆಚ್ಚು ಅರ್ಜಿಗಳನ್ನು ನಿರೀಕ್ಷಿಸಲಾಗಿದೆ. 2022ರ ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆನ್ಲೈನ್ ಅರ್ಜಿ ಸಲ್ಲಿಸುವ ವಿಳಾಸ.
ಬಹುಮಾನ
ಸ್ಪರ್ಧೆಯ ವಿಜೇತರಿಗೆ 100,000 ಡಾಲರ್ ನಗದು ಬಹುಮಾನ ಘೋಷಿಸಲಾಗಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವ ಅವಕಾಶದ ಜತೆಗೆ, ಹೂಡಿಕೆದಾರರು ಹಾಗೂ ಮಾರ್ಗದರ್ಶಕರ ಜತೆ ಮಾತುಕತೆಗೆ ಅವಕಾಶ ಕಲ್ಪಿಸಲಾಗುತ್ತದೆ.

ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಇನ್ವೆಸ್ಟ್ ಕರ್ನಾಟಕ ಫೋರಂನ ಸಿಓಓ ಬಿ.ಕೆ. ಶಿವಕುಮಾರ್, ಟಿಐಇ ಗ್ಲೋಬಲ್ ಮುಖ್ಯಸ್ಥ ಬಿಜೆ ಅರುಣ್, ಟಿಐಇ ಬೆಂಗಳೂರಿನ ಅಧ್ಯಕ್ಷ ಮದನ್ ಫಡ್ಕಿ, ಅಮೇಜಾನ್ ಇಂಡಿಯಾದ ಪಬ್ಲಿಕ್ ಪಾಲಿಸಿ ವಿಭಾಗದ ಮುಖ್ಯಸ್ಥ ಚೇತನ್ ಕೃಷ್ಣಸ್ವಾಮಿ ಕಾರ್ಯಕ್ರಮದಲ್ಲಿ ಉಪಸ್ಥಿತಿತರಿದ್ದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications