ಗುಜರಾತ್ಗೆ ಹೋಗಿ 50,100 ಕೋಟಿ ರು. ತಂದ ಕರ್ನಾಟಕ ಸರ್ಕಾರ!
ಬೆಂಗಳೂರು, ಜ. 13: ನರೇಂದ್ರ ಮೋದಿ ಅವರನ್ನು ತೆಗಳುವ ಭರದಲ್ಲಿ ಗುಜರಾತ್ ಮಾದರಿ ಎಂದರೇ ಕಾಂಗ್ರೆಸ್ಸಿಗರು ಹಾವು ಮೆಟ್ಟಿದಂತೆ ಆಡುತ್ತಾರೆ. ಗುಜರಾತ್ನಲ್ಲಿ ಆದ ಅಭಿವೃದ್ಧಿ ಕೇವಲ ಮಾಧ್ಯಮ ನಿರ್ಮಿತ ಎಂದೂ ಟೀಕಿಸಿದವರಿದ್ದಾರೆ. ಆದರೆ, ಈಗ ಅವನ್ನೆಲ್ಲ ಮರೆತು ಅಭಿವೃದ್ಧಿಗೆ ಅವರು ರೂಪಿಸಿಕೊಟ್ಟ ಮಾದರಿಯ ಲಾಭ ಪಡೆಯಲು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಮುಂದಾಗಿದೆ.
ಹೌದು, 'ವೈಬ್ರಂಟ್ ಗುಜರಾತ್ ಸಮಿತ್ 2015' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ ಅಧಿಕಾರಿಗಳ ತಂಡ ವಿವಿಧ ಕೈಗಾರಿಕೋದ್ಯಮಿಗಳ ಜೊತೆ ಒಟ್ಟು 50,100 ಕೋಟಿ ರು. ಮೊತ್ತದ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕುವಲ್ಲಿ ಯಶಸ್ವಿಯಾಗಿದೆ. ಮೋದಿಯವರನ್ನು ಟೀಕಿಸಿದ್ದವರೇ ಈಗ ಗುಜರಾತ್ಗೆ ಹೋಗಿ ಹತ್ತಾರು ಸಾವಿರ ಕೋಟಿ ರೂ. ಬಂಡವಾಳ ಕೂಡಿಸಿಕೊಂಡು ಬಂದಿದ್ದಾರೆ! [ವೈಬ್ರಂಟ್ ಗುಜರಾತ್ : ಮೋದಿ ಭಾಷಣದ ಮುಖ್ಯಾಂಶ]

ಈ ಕುರಿತು ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ರತ್ನ ಪ್ರಭಾ ಹಾಗೂ ಕೈಗಾರಿಕಾ ಅಭಿವೃದ್ಧಿ ಆಯುಕ್ತ ಗೌರವ್ ಗುಪ್ತಾ ನೇತೃತ್ವದ ಉನ್ನತ ಮಟ್ಟದ ನಿಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ತಂಡವು ಹಲವು ಬಂಡವಾಳಶಾಹಿಗಳ ಜೊತೆ ನಡೆಸಿದ ಸಭೆ ಯಶಸ್ವಿಯಾಗಿದ್ದು, 50,100 ಕೋಟಿ ರೂ. ಬಂಡವಾಳ ಹೂಡಿಕೆ ಕುರಿತು ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದೆ. ಕೈಗಾರಿಕೋದ್ಯಮಿಗಳು ಕರ್ನಾಟಕದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆಂದು ತಿಳಿಸಿದ್ದಾರೆ. [ಪ್ರವಾಸಿ ದಿವಸ್ ದಿಂದ ಕರ್ನಾಟಕಕ್ಕೂ ಬರುತ್ತಾ ಬಂಡವಾಳ?]
ವಿದೇಶಿ ನಿಯೋಗ ಭೇಟಿ : ಅಲ್ಲದೆ, ಕರ್ನಾಟಕ ತಂಡವು ಈ ಸಂದರ್ಭದಲ್ಲಿ ವಿದೇಶಿ ನಿಯೋಗಗಳನ್ನೂ ಭೇಟಿ ಮಾಡಿದೆ. ಭಾರತ-ಚೀನಾ ಆರ್ಥಿಕ ಸಹಕಾರ ಸಮಿತಿ, ಸಿಂಗಪುರ ಬಿಸಿನೆಸ್ ಫೆಡರೇಶನ್ ಮತ್ತು ಇಸ್ರೇಲ್ ನಿಯೋಗವನ್ನು ಭೇಟಿ ಮಾಡಿದೆ.
ಕರ್ನಾಟಕದಲ್ಲಿ ವಿಶೇಷವಾಗಿ ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಪ್ರವಾಸೋದ್ಯಮ ಮೂಲಸೌಲಭ್ಯ, ಸೌರ ಶಕ್ತಿ, ಅಂತರಿಕ್ಷಯಾನ ಇನ್ನಿತರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications