2ನೇ ತ್ರೈಮಾಸಿಕ: ಕಿಲ್ಲರ್ ಜೀನ್ಸ್ ಶೇಕಡ 24ರಷ್ಟು ಆದಾಯ ಪ್ರಗತಿ
ಬೆಂಗಳೂರು, ನವೆಂಬರ್ 20: ಕೇವಲ್ ಕಿರಣ್ ಕ್ಲೋಥಿಂಗ್ ಲಿಮಿಟೆಡ್ (ಕೆಕೆಸಿಎಲ್) ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇಕಡ 10ರಷ್ಟು ಆದಾಯ ಪ್ರಗತಿ ದಾಖಲಿಸಿದೆ. ಇದು ಬ್ರಾಂಡೆಡ್ ಸಿದ್ಧ ಉಡುಪುಗಳ ಮಾರುಕಟ್ಟೆಯ ಪುನಶ್ಚೇತನದ ಸಂಕೇತವಾಗಿದೆ.
ಕಂಪನಿಯ ಅಗ್ರಗಣ್ಯ ಬ್ರಾಂಡ್ ಎನಿಸಿದ ಕಿಲ್ಲರ್ ಜೀನ್ಸ್, ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ ದ್ವಿತೀಯ ತ್ರೈಮಾಸಿಕದಲ್ಲಿ ಪ್ರಬಲ ಅಂದರೆ 24.2% ಪ್ರಗತಿ ದಾಖಲಿಸಿದೆ. ಅಂತೆಯೇ ಮತ್ತೊಂದು ಪ್ರಮುಖ ಬ್ರಾಂಡ್ ಕಿನ್ನರ್ನ ಈಸೀಸ್ ಶೇಕಡ 11.4ರಷ್ಟು ಪ್ರಗತಿ ದಾಖಲಿಸಿದೆ. ಬ್ರಾಂಡೆಡ್ ಸಿದ್ಧ ಉಡುಪುಗಳ ಕ್ಷೇತ್ರದಲ್ಲಿ ಒಟ್ಟಾರೆ ಬೇಡಿಕೆ ಮಂದ ಗತಿಯಲ್ಲಿ ಹೆಚ್ಚುತ್ತಿದ್ದರೂ, ಕೇವಲ್ ಕಿರಣ್ ಕ್ಲೋಥಿಂಗ್ ಲಿಮಿಟೆಡ್, ಕಿಲ್ಲರ್ ಜೀನ್ಸ್ ಬ್ರಾಂಡ್ನ ಬಲದಿಂದಾಗಿ ಉತ್ತಮ ದರದ ಪ್ರಗತಿ ದಾಖಲಿಸುವಲ್ಲಿ ಯಶಸ್ವಿಯಾಗಿದೆ.
ಈ ಬೆಳವಣಿಗೆ ಬಗ್ಗೆ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಕೇವಲ್ಚಂದ್ ಪಿ.ಜೈನ್ ಅವರು, "ಕಿಲ್ಲರ್ ಬ್ರಾಂಡ್ ಮತ್ತು ಈಸೀಸ್ ಬೈ ಕಿಲ್ಲರ್ ಬ್ರಾಂಡ್ಗಳು ಕ್ರಮವಾಗಿ ಶೇಕಡ 21 ಹಾಗೂ ಶೇಕಡ 10ರ ಆರೋಗ್ಯಕರ ಪ್ರಗತಿ ದಾಖಲಿಸಿವೆ. ಇದರಿಂದಾಗಿ ಕಂಪನಿಯ ಒಟ್ಟಾರೆ ಆದಾಯ ಶೇಕಡ 10ರಷ್ಟು ಪ್ರಗತಿ ಕಾಣಲು ಸಾಧ್ಯವಾಗಿದೆ. ಈ ಎರಡು ಬ್ರಾಂಡ್ಗಳು 2020ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಒಟ್ಟಾರೆ ಮಾರಾಟದ ಪೈಕಿ ಶೇಕಡ 70ರಷ್ಟು ಪಾಲು ಹೊಂದಿವೆ" ಎಂದು ಹೇಳಿದರು.

ಮುಂದಿನ ತ್ರೈಮಾಸಿಕಗಳಲ್ಲಿ ಪ್ರಬಲವಾದ ಬೇಡಿಕೆಯ ವಾತಾವರಣ ರೂಪುಗೊಳ್ಳುವ ಬಗ್ಗೆ ಕಂಪನಿಗೆ ಅತೀವ ವಿಶ್ವಾಸವಿದೆ. ಈ ಮೂಲಕ ಒಟ್ಟಾರೆ ಆರ್ಥಿಕ ಚಟುವಟಿಕೆಗಳು ಧನಾತ್ಮಕ ಸಂಕೇತಗಳನ್ನು ಪ್ರದರ್ಶಿಸುವ ನಿರೀಕ್ಷೆ ಇದೆ. ಕಂಪನಿಯ ಕಿಲ್ಲರ್ ಬ್ರಾಂಡ್ ಮತ್ತು ಈಸೀಸ್ ಬೈ ಕಿಲ್ಲರ್ ಬ್ರಾಂಡ್ನ ಪ್ರಗತಿ ದರ ಆರೋಗ್ಯಕರವಾಗಿ ಮುಂದುವರಿಯುವ ನಿರೀಕ್ಷೆ ಇದ್ದು, ಇದು ಮುಂದಿನ ದಿನಗಳಲ್ಲಿ ಕಂಪನಿಯ ಒಟ್ಟಾರೆ ಆದಾಯ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications