ಬಯೋಕಾನ್ ಕಿರಣ್ ಷಾ ಇನ್ಫಿ ಕ್ಷಮೆ ಕೋರಿದ್ದು ಏಕೆ?
ಬೆಂಗಳೂರು, ಏ.24: ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಸಮಿತಿಯ ನಾಮಾಂಕಿತ ಸದಸ್ಯೆಯಾಗಿರುವ ಬಯೋಕಾನ್ ಅಧ್ಯಕ್ಷೆ ಕಿರಣ್ ಮುಜುಂದಾರ್ ಶಾ ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚೆಗೆ ನಡೆದ ಬೋರ್ಡ್ ಮೀಟಿಂಗ್ ನ ಬಗ್ಗೆ ಕಿರಣ್ ಟ್ವೀಟ್ ಮಾಡಿ ಇನ್ಫಿ ಮೂರ್ತಿ ಮಗ ರೋಹನ್ ಅವರನ್ನು ಹೊಗಳಿದ್ದರು.
ಇನ್ಫೋಸಿಸ್ ಆಡಳಿತ ಮಂಡಳಿ ಸಭೆಯಲ್ಲಿ ಕಾರ್ಯಕಾರಿ ಅಧ್ಯಕ್ಷ ಎನ್.ಆರ್. ನಾರಾಯಣಮೂರ್ತಿ ಪುತ್ರ ರೋಹನ್ ಮೂರ್ತಿ ನಡೆಸಿಕೊಟ್ಟ 'ಪ್ರೆಸೆಂಟೇಷನ್(ಪ್ರಸ್ತುತಿ)' ಕುರಿತು ಸಭೆಯಲ್ಲೇ ಹಾಜರಿದ್ದ ಆಡಳಿತ ಮಂಡಳಿ ಸದಸ್ಯೆ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶನಿವಾರ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಡಿದ್ದ ಶ್ಲಾಘನೆಗೆ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷಮೆ ಯಾಚಿಸಿದ್ದಾರೆ.
ಕಿರಣ್ ಮಜುಂದಾರ್ ಅವರ ಟ್ವೀಟ್ ಗೆ ಉದ್ಯಮ ರಂಗದ ತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಆಡಳಿತ ಮಂಡಳಿ ಸಭೆಯ ಕಾರ್ಯ ಕಲಾಪಗಳ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಳಿಸುವುದು ತಪ್ಪು ಎಂದು ತಜ್ಞರು ಹೇಳಿದ್ದರು. ಇತ್ತೀಚಿನ ಇನ್ಫಿ ಆಡಳಿತ ಮಂಡಳಿ ಸಭೆಯಲ್ಲಿ ರೋಹನ್ ಮೂರ್ತಿ ಅವರ ತಾಂತ್ರಿಕ ನಿಪುಣತೆಯ ಪ್ರಸ್ತುತಿಯಿಂದ ನಾನು ಪ್ರಭಾವಿತಳಾದೆ. ರೋಹನ್ ಅವರ ಐಡಿಯಾಗಳು ಇನ್ಫಿಗೆ ಪ್ರಯೋಜನ ಒದಗಿಸಲಿವೆ ಎಂದು ಕಿರಣ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು. ಕೊನೆಗೆ ಸಂಸ್ಥೆ ಸದಸ್ಯರ ಪ್ರತಿಕ್ರಿಯೆಯನ್ನು ಮನ್ನಿಸಿ ಟ್ವೀಟ್ ಮಾಡಿ ಕ್ಷಮೆ ಕೋರಿದ್ದಾರೆ.

ರೋಹನ್ ಅವರನ್ನು ಹೊಗಳಿದ್ದ ಟ್ವೀಟ್ ಕಿರಿಕಿರಿ
ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಸಮಿತಿಯ ನಾಮಾಂಕಿತ ಸದಸ್ಯೆಯಾಗಿರುವ ಬಯೋಕಾನ್ ಅಧ್ಯಕ್ಷೆ ಕಿರಣ್ ಮುಜುಂದಾರ್ ಶಾ ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಸಂಸ್ಥೆ ಮುನ್ನಡೆಸಲು ರೋಹನ್ ಸಮರ್ಥ
ಮೊಬೈಲ್ ಕಂಪ್ಯೂಟಿಂಗ್, ನಿಸ್ತಂತು ಸೇವೆ ಬಗ್ಗೆ ರೋಹನ್ ಸಂಶೋಧನೆ ನಡೆಸಿದ್ದಾರೆ. ಇವರಿಗೂ ಕೂಡಾ ಬೋರ್ಡ್ ವರ್ಷಕ್ಕೆ 1 ರು ನಂತೆ ಟೋಕನ್ ಪರಿಹಾರ ಧನ ನೀಡುತ್ತಿದೆ. 31ರ ಹರೆಯದ Rohan Murty (ಮೂರ್ತಿ ಸೀನಿಯರ್ ನಂತೆ murthy ಎಂದು ರೋಹನ್ ಬಳಸುವುದಿಲ್ಲ) ಅವರು ಕಂಪನಿಯ ಹಿರಿಯ ಮ್ಯಾನೇಜ್ಮೆಂಟ್ ತಂಡದ ಭಾಗವಾಗಿದ್ದಾರೆ.
|
ಮೊದಲು ಟ್ವೀಟ್ ಅಮೇಲೆ ಕ್ಷಮೆ, ಪ್ರತಿಕ್ರಿಯೆ
ಮೊದಲು ಟ್ವೀಟ್ ಅಮೇಲೆ ಕ್ಷಮೆ ಕೋರಿದ ಕಿರಣ್ ಸಾರ್ವಜನಿಕರಿಗೂ ಪ್ರತಿಕ್ರಿಯಿಸಿದ್ದಾರೆ.
|
ಕ್ಷಮೆ ಕೋರಿದ ಬಯೋಕಾನ್ ಕಿರಣ್ ಶಾ
ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಸಮಿತಿಯ ನಾಮಾಂಕಿತ ಸದಸ್ಯೆಯಾಗಿರುವ ಬಯೋಕಾನ್ ಅಧ್ಯಕ್ಷೆ ಕಿರಣ್ ಮುಜುಂದಾರ್ ಶಾ ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
|
ಮೋದಿ ಆಡಳಿತವನ್ನು ಮೆಚ್ಚುವ ಕಿರಣ್
ಮೋದಿ ಆಡಳಿತವನ್ನು ಮೆಚ್ಚುವ ಕಿರಣ್ ಅವರು ಆಗಾಗ ಗುಜರಾತ್ ಅಭಿವೃದ್ಧಿ ಬಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ.

ಐಟಿ ಸಂಸ್ಥೆ ಕುಟುಂಬ ರಾಜಕೀಯ
ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಸೇರಿದಂತೆ ಸಹ ಸ್ಥಾಪಕರು ತಮ್ಮ ಮಕ್ಕಳು ಕಂಪನಿ ಸೇರದಂತೆ ನೋಡಿಕೊಂಡಿದ್ದರು. ಕುಟುಂಬ ರಾಜಕೀಯದ ಛಾಯೆ ಬೀಳದಂತೆ ಇಲ್ಲಿವರೆಗೂ ನಿಗಾವಹಿಸಿದ್ದರು. ಈ ಬಗ್ಗೆ ಸಂಸ್ಥೆ ಪ್ರಮುಖರು ಅನೇಕ ಬಾರಿ ಹೇಳಿಕೆಯನ್ನು ನೀಡಿದ್ದರು. ಅದರೆ, ಈಗ ಇನ್ಫಿ ಮೂರ್ತಿ ಅವರ ಮಗ ರೋಹನ್ ಅವರನ್ನು ಉನ್ನತ ಸ್ಥಾನದಲ್ಲಿ ಕೂರಿಸಲಾಗಿದೆ. ಇದಕ್ಕೆ ಬೋರ್ಡ್ ಒಪ್ಪಿಗೆ ಇದೆ ಎನ್ನುವುದು ಗಮನಾರ್ಹ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications