ಹೊಸ ಸರಣಿಯ 1,2,5,10, 20 ರು ನಾಣ್ಯ ಬಿಡುಗಡೆ ಮಾಡಿದ ಮೋದಿ
Recommended Video

ನವದೆಹಲಿ, ಮಾರ್ಚ್ 07: ಅಂಧರು ಕೂಡಾ ನಾಣ್ಯ ಗುರುತಿಸಿ ಚಲಾವಣೆ ಮಾಡಲು ಅನುಕೂಲವಾಗುವಂಥ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುವ ಹೊಸ ಸರಣಿಯ ರೂ 1, ರೂ 2,ರೂ 5, ರೂ 10 ಹಾಗೂ 20 ರೂಪಾಯಿ ಮುಖಬೆಲೆಯ ನಾಣ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಗುರುವಾರದಂದು ಬಿಡುಗಡೆಗೊಳಿಸಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಟ್ವಿಟ್ಟರ್ ನಲ್ಲಿ ಪ್ರಕಟಿಸಿದ್ದಾರೆ.
10 ನಾಣ್ಯದಂತೆ ಎರಡು ವಲಯಗಳನ್ನು ಹೊಂದಿರುವ 20 ರು ಮುಖಬೆಲೆಯ ನಾಣ್ಯದ ವ್ಯಾಸವು 27 ಮಿ.ಮೀ ನಷ್ಟಿದೆ. 12 ಕೋನದ ಪಾಲಿಗಾನ್ ಆಕೃತಿಯುಳ್ಳ ಹೊಚ್ಚ ಹೊಸ 20 ರು ನಾಣ್ಯ ಉತ್ಪಾದನೆ ಕುರಿತಂತೆ ವಿತ್ತ ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ನಾಣ್ಯದ ಹೊರ ಸುತ್ತು 65% ತಾಮ್ರ, 15% ಸತು ಮತ್ತು 20 % ನಿಕ್ಕಲ್ ಹೊಂದಿದೆ. ಒಳ ಸುತ್ತು ಅಥವಾ ನಾಣ್ಯದ ಕೇಂದ್ರಭಾಗವು 75% ತಾಮ್ರ, 20% ಸತು ಮತ್ತು 5% ನಿಕ್ಕಲ್ ನಿಂದ ಮಾಡಲ್ಪಟ್ಟಿದೆ.

ಇತರೆ ನಾಣ್ಯಗಳಂತೆ ಹೊಸ ರೂ 20 ನಾಣ್ಯವು ಯಾವುದೇ ಸರಣಿಯನ್ನು ಹೊಂದಿರುವುದಿಲ್ಲ. ಒಂದು ನಾಣ್ಯದ ತೂಕ 8.54 ನಷ್ಟಿರಲಿದೆ. 2009ರ ಮಾರ್ಚ್ ತಿಂಗಳಿನಲ್ಲಿ ಹೊಚ್ಚ ಹೊಸ 10 ರು ನಾಣ್ಯವನ್ನು ಹೊರ ತರಲಾಗಿತ್ತು. ಈಗ 10 ವರ್ಷಗಳ ಬಳಿಕ 20 ರು ನಾಣ್ಯವನ್ನು ಘೋಷಿಸಲಾಗಿದೆ. 2009ರಿಂದ ಇಲ್ಲಿ ತನಕ 10 ನಾಣ್ಯಗಳ 13 ಹೊಸ ಆವೃತ್ತಿಗಳು ಬಂದಿವೆ. 10 ರು ನಾಣ್ಯದ ಬಳಕೆ ಬಗ್ಗೆ ಗೊಂದಲ ಮುಂದುವರೆದಿದ್ದರೂ ಎಲ್ಲವೂ ಮಾನ್ಯತೆ ಹೊಂದಿದೆ ಎಂದು ಅರ್ ಬಿಐ ಸ್ಪಷ್ಟಪಡಿಸಿದೆ.
The Prime Minister, Shri Narendra Modi, today, released the new series Rs.1, Rs.2, Rs.5, Rs.10 and Rs.20 coins. These coins contain design features which will be of great assistance to visually impaired persons.
— Arun Jaitley (@arunjaitley) March 7, 2019
ನಾಣ್ಯದ ಮುಂಭಾಗದಲ್ಲಿ ನಾಲ್ಕು ಸಿಂಹಗಳ ಲಾಂಛನ ಹಾಗೂ ಅಶೋಕನ ಸಾರಾನಾಥ ಶಾಸನ ವಾಕ್ಯ "ಸತ್ಯಮೇವ ಜಯತೆ"(ದೇವನಾಗರಿ ಲಿಪಿ) ಎಂದಿರಲಿದೆ. ಅಲ್ಲದೆ ಇದರ ಎಡಬಾಗದಲ್ಲಿ 'ಭಾರತ್' ಎನ್ನುವ ದೇವನಾಗರಿ ಲಿಪಿಯಲ್ಲಿ ಪದವಿದ್ದರೆ ಬಲಭಾಗದಲ್ಲಿ "ಇಂಡಿಯಾ' ಎಂದು ಇಂಗ್ಲೀಷ್ ನಲ್ಲಿ ಬರೆದಿರುವುದನ್ನು ಕಾಣಬಹುದು.
The Government, in 2015, had released a new series of banknotes which incorporated Braille like signs for the benefit of visually impaired persons.
— Arun Jaitley (@arunjaitley) March 7, 2019
ನಾಣ್ಯದ ಹಿಂಭಾಗದಲ್ಲಿ, ರೂಪಾಯಿ ಚಿಹ್ನೆಯ ಕೆಳಗಿನ ಭಾಗದಲ್ಲಿ ಕರೆನ್ಸಿ ಮೌಲ್ಯ ಬರೆಯಲ್ಪಡಲಿದೆ. ಅಲ್ಲದೆ ಕೃಷಿ ಪ್ರಾಬಲ್ಯವನ್ನು ಸಾರುವುದಕ್ಕಾಗಿ ಎಡಭಾಗದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ಧಾನ್ಯಗಳ ಚಿತ್ರವಿರಲಿದೆ. ಇನ್ನು ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ 20 ರೂಪಾಯಿಗಳು ಎಂದು ಅಕ್ಷರಗಳಲ್ಲಿ ಕೆತ್ತಲಾಗಿರುತ್ತದೆ. ಅಲ್ಲದೆ ಇದರ ನಡುವೆ ನಾಣ್ಯ ಬಿಡುಗಡೆಯಾಗಿರುವ ವರ್ಷವನ್ನು ಕೆತ್ತಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications