ಐಸಿಐಸಿಐ- ವಿಡಿಯೋಕಾನ್ ಕೇಸ್; ಕೊಚ್ಚಾರ್ ಕುಟುಂಬಕ್ಕೆ 500 ಕೋಟಿ ರು ಕಿಕ್ ಬ್ಯಾಕ್
ಮುಂಬೈ, ಮಾರ್ಚ್ 07: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್ ಹಾಗೂ ಅವರ ಕುಟುಂಬಕ್ಕೆ ಸುಮಾರು 500 ಕೋಟಿ ರು ಕಿಕ್ ಬ್ಯಾಕ್ ಸಿಕ್ಕಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರದಂದು ಹೇಳಿದ್ದಾರೆ.
ಈ ಪ್ರಕರಣದ ಪ್ರಮುಖ ಆರೋಪಿಗಳಾದ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಹಾಗೂ ವಿಡಿಯೋಕಾನ್ ವ್ಯವಸ್ಥಾಪಕ ನಿರ್ದೇಶಕ ವೇಣುಗೋಪಾಲ್ ಧೂತ್ ಅವರ ವಿಚಾರಣೆ ಇನ್ನು ಜಾರಿಯಲ್ಲಿದೆ.
ಬ್ಯಾಂಕ್ ನ ನಿಯಮಗಳನ್ನು ಉಲ್ಲಂಘಿಸಿ ವಿಡಿಯೋಕಾನ್ ಗ್ರೂಪ್ ಗೆ ಸುಮಾರು 3,250 ಕೋಟಿರೂ.ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಅವ್ಯವಹಾರದ ಹಗರಣ ಇದಾಗಿದೆ. ಐಸಿಐಸಿಐನ ಮಾಜಿ ಎಂಡಿ ಚಂದಾ ಕೊಚ್ಚಾರ್ ಹಾಗೂ ಕುಟುಂಬಕ್ಕೆ ಕಿಕ್ ಬ್ಯಾಕ್ ರೂಪದಲ್ಲಿ 500 ಕೋಟಿ ರ್ ರು ಗೂ ಅಧಿಕ ಮೊತ್ತ ಸಿಕ್ಕಿದೆ. ಇದು ಸದ್ಯದ ಲೆಕ್ಕಾಚಾರವಾಗಿದ್ದು, ಕಿಕ್ ಬ್ಯಾಕ್ ಮೊತ್ತ ಇನ್ನು ಅಧಿಕವಾಗಿರುವ ಸಾಧ್ಯತೆಯಿದೆ ಎಂದು ಜಾರಿ ನಿರ್ದೇಶನಾಲಯವು ಹೇಳಿದೆ.

ಕೊಚ್ಚಾರ ಕುಟುಂಬ ಹಾಗೂ ಇನ್ನಿತರ ಆರೋಪಿಗಳ ಮನೆ, ಕಚೇರಿ ಮೇಲೆ ಇತ್ತೀಚೆಗೆ ದಾಳಿ ನಡೆಸಿ, ಅನೇಕ ದಾಖಲೆ ಹಾಗೂ ಆಸ್ತಿ ಪಾಸ್ತಿ ಜಪ್ತಿ ಮಾಡಿರುವ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಇನ್ನೊಂದು ಸುತ್ತಿನ ದಾಳಿ ನಡೆಸುವ ಸುಳಿವು ನೀಡಿದ್ದಾರೆ. ಸದ್ಯ, ಚಂದಾ ಕೊಚ್ಚಾರ್ ಅವಧಿಯಲ್ಲಿ ಅಕ್ರಮವಾಗಿ ಮಂಜೂರು ಮಾಡಿದ ಸಾಲದ ಮೊತ್ತದ ಬಗ್ಗೆ ತನಿಖೆ ಚುರುಕುಗೊಂಡಿದೆ.
ಚಂದಾ ಕೊಚ್ಚಾರ್ ಅಧಿಕಾರದಲ್ಲಿ ಇದ್ದ ಸಮುಯದಲ್ಲಿ ಐಸಿಐಸಿಐ ಬ್ಯಾಂಕ್ ಮೂಲಕ ಅವ್ಯವಹಾರ ನಡೆದಿದೆ ಎಂದು ಕಳೆದ ಮಾರ್ಚ್ ನಲ್ಲಿ ಮೊದಲ ಬಾರಿಗೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಚಂದಾ ಕೊಚ್ಚರ್, 2018 ರ ಅಕ್ಟೋಬರ್ನಲ್ಲಿ ಸಿಇಒ ಹುದ್ದೆಯಿಂದ ಕೆಳಗಿಳಿದಿದ್ದರು.
ಈ ಹಿಂದೆ ವಿಡಿಯೋಕಾನ್ ನ ಮುಂಬೈ ಹಾಗೂ ಔರಂಗಾಬಾದ್ ನ ಕಚೇರಿ ಹಾಗೂ ಐಸಿಐಸಿಐನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚರ್ ಅವರ ನುಪವರ್ ಕಚೇರಿ ಮೇಲೂ ದಾಳಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications