ಬ್ರಿಕ್ಸ್ ಬ್ಯಾಂಕ್ ಮುಖ್ಯಸ್ಥರಾಗಿ ಕನ್ನಡಿಗ ಕಾಮತ್
ಬೆಂಗಳೂರು, ಮೇ.11: ಸುಮಾರು 50 ಬಿಲಿಯನ್ ಯುಎಸ್ ಡಾಲರ್ ವಹಿವಾಟು ನಿರೀಕ್ಷೆ ಹೊಂದಿರುವ ಅಭಿವೃದ್ಧಿಶೀಲ 'ಬ್ರಿಕ್ಸ್ ಬ್ಯಾಂಕ್' ಮುಖ್ಯಸ್ಥರಾಗಿ ಕನ್ನಡಿಗ ಪ್ರತಿಷ್ಠಿತ ಬ್ಯಾಂಕರ್ ಕೆವಿ ಕಾಮತ್ ಸೋಮವಾರ ಆಯ್ಕೆಯಾಗಿದ್ದಾರೆ.
ಕೆವಿ ಕಾಮತ್ ಅವರ ಅಧಿಕಾರ ಅವಧಿ ಐದು ವರ್ಷಗಳಾಗಿತ್ತು ಎಂದು ಆರ್ಥಿಕ ಇಲಾಖೆ ಕಾರ್ಯದರ್ಶಿ ರಾಜೀವ್ ಮಹರ್ಷಿ ಹೇಳಿದ್ದಾರೆ. [ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿ]
ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾ (BRICS) 2014 ರಲ್ಲಿ ತೆಗೆದುಕೊಂಡ ನಿರ್ಣಯದಂತೆ ಹೊಸ ಅಭಿವೃದ್ಧಿ ಸಮೂಹ ಬ್ಯಾಂಕ್ ಸ್ಥಾಪನೆಯಾಗಿದೆ.
ಶಾಂಘೈನಲ್ಲಿ ಇದರ ಕೇಂದ್ರ ಕಚೇರಿ ಇರಲಿದೆ. ವಿಶ್ವಕಪ್ ಫುಟ್ಬಾಲ್ 2014ರ ಸಂದರ್ಭದಲ್ಲಿ ಜಾರಿಗೆ ಬಂದ ಈ ಹೊಸ ಮೈತ್ರಿ ಕೂಟಕ್ಕೆ ಆರ್ಥಿಕ ಬಲ ತರಲು ಪ್ರಧಾನಿ ಮೋದಿ ಅವರನ್ನು ಬ್ರೆಜಿಲ್ ನ ಅಧ್ಯಕ್ಷೆ ದಿಲ್ಮಾ ಕೇಳಿ ಕೊಂಡಿದ್ದರು.

ಅದರಂತೆ ಬ್ರಿಕ್ಸ್ ಬ್ಯಾಂಕ್ ಗೆ ಮೊದಲ ಅಧ್ಯಕ್ಷರನ್ನು ಆಯ್ಕೆ ಮಾಡುವ ಜವಾಬ್ದಾರಿ ಭಾರತ ಸರ್ಕಾರಕ್ಕೆ ನೀಡಲಾಗಿತ್ತು.ಕೆವಿ ಕಾಮತ್ ಅವರನ್ನು ಬ್ಯಾಂಕ್ ಮುಖ್ಯಸ್ಥರಾಗಿ ನೇಮಿಸಲಾಗಿದೆ. ವಿಶ್ವದ ಶೇ 40ರಷ್ಟು ಜನಸಂಖ್ಯೆ ಹೊಂದಿಕೊಂಡಂತೆ ಬ್ರಿಕ್ಸ್ ರಾಷ್ಟ್ರಗಳ ಈ ಬ್ಯಾಂಕ್ 16 ಟ್ರಿಲಿಯನ್ ಜಿಡಿಪಿ ಹೊಂದಲಿದೆ.
ಕುಂದಾಪುರ ವಾಮನ ಕಾಮತ್ (ಕೆವಿ ಕಾಮತ್) : ಮಂಗಳೂರಿನ ಸೈಂಟ್ ಅಲೋಷಿಯನ್ ಕಾಲೇಜು, ಸುರತ್ಕಲ್ ನಿಟ್ಟೆ (ಕೆಆರ್ಇಸಿ)ಯಿಂದ ಮೆಕ್ಯಾನಿಕಲ್ ಇಂಜಿನಿಯರ್ ಆಗಿ ಪದವಿ ಪಡೆದವರು, ಐಐಎಂ ಅಹಮದಾಬಾದಿನಲ್ಲಿ ಸ್ನಾತಕೋತ್ತರ ಪದವಿ ಪಡೆದ ಮೇಲೆ ಬಹುಕಾಲ ಐಸಿಐಸಿಐನಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದರು.
* ಐಸಿಐಸಿಐ ಬ್ಯಾಂಕ್ ನ ನಾನ್ ಎಕ್ಸಿಕ್ಯುಟೀವ್ ಡೈರೆಕ್ಟರ್, ಮ್ಯಾನೇಜಿಂಗ್ ಡೈರೆಕ್ಟರ್, ಸಿಇಒ ಆಗಿದ್ದರು.
* ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
* ಇನ್ಫೋಸಿಸ್ ಸಂಸ್ಥೆ ಚೇರ್ಮನ್ ಆಗಿ 2014ರಲ್ಲಿ ನೇಮಕಗೊಂಡರು.
* ಐಐಎಂ ಅಹಮದಾಬಾದ್, ಐಐಎಂ ಇಂದೋರ್, ಮಣಿಪಾಲ್ ಸಂಸ್ಥೆಯ MAHE, ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಆಫ್ ಬ್ಯಾಂಕ್ ಮ್ಯಾನೇಜ್ಮೆಂಟ್ ಸೇರಿದಂತೆ ಹಲವು ಸಂಸ್ಥೆಗಳ ಸಮಿತಿಯ ಸಕ್ರಿಯ ಸದಸ್ಯರಾಗಿದ್ದಾರೆ,
* ಇದಲ್ಲದೆ ಸಿಐಐ, ಜರ್ಮನಿ, ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳ ಉದ್ಯಮ ಹಾಗೂ ವಿದ್ಯಾಸಂಸ್ಥೆಗಳ ಸಮಿಸಿ ಸದಸ್ಯರು.
ಭಾರತ ಸರ್ಕಾರದ ಪದ್ಮಭೂಷಣ ಸೇರಿದಂತೆ ಉದ್ಯಮ ವಲಯದಲಿ ಅನೇಕ ಶ್ರೇಷ್ಠ ಪ್ರಶಸ್ತಿಗಳು ಕಾಮತ್ ಅವರಿಗೆ ಸಂದಿದೆ.(ಒನ್ ಇಂಡಿಯಾ ಸುದ್ದಿ)
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications