ಭವಿಷ್ಯ ನಿಧಿ (EPFO) ಬಡ್ಡಿದರ ಇಳಿಕೆಗೆ ವಿತ್ತ ಸಚಿವಾಲಯ ಸಮ್ಮತಿ
ಉದ್ಯೋಗಿಗಳ ಭವಿಷ್ಯನಿಧಿ(ಇಪಿಎಫ್) ಠೇವಣಿಗಳ ಮೇಲೆ ಶೇ.8.65 ಬಡ್ಡಿದರವನ್ನು ಪ್ರಸಕ್ತ ಹಣಕಾಸು ವರ್ಷಕ್ಕೆ ಸ್ಥಿರೀಕರಿಸಲಿದೆ ಎಂದು ವಿತ್ತ ಸಚಿವಾಲಯ ಹೇಳಿದೆ. ಈ ಬಗ್ಗೆ ಕಾರ್ಮಿಕ ಸಚಿವಾಲಯಗಳ ನಡುವೆ ಭಿನ್ನಾಭಿಪ್ರಾಯಗಳು ಬಗೆಹರಿಸಲಾಗಿದೆ
ನವದೆಹಲಿ, ಫೆಬ್ರವರಿ 15: ಉದ್ಯೋಗಿಗಳ ಭವಿಷ್ಯನಿಧಿ(ಇಪಿಎಫ್) ಠೇವಣಿಗಳ ಮೇಲೆ ಶೇ.8.65 ಬಡ್ಡಿದರವನ್ನು ಪ್ರಸಕ್ತ ಹಣಕಾಸು ವರ್ಷಕ್ಕೆ ಸ್ಥಿರೀಕರಿಸಲಿದೆ ಎಂದು ವಿತ್ತ ಸಚಿವಾಲಯ ಹೇಳಿದೆ. ಈ ಬಗ್ಗೆ ಕಾರ್ಮಿಕ ಸಚಿವಾಲಯಗಳ ನಡುವೆ ಭಿನ್ನಾಭಿಪ್ರಾಯಗಳು ಬಗೆಹರಿಸಲಾಗಿದೆ ಎಂದು ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಬುಧವಾರ ತಿಳಿಸಿದರು.
ದತ್ತಾತ್ರೇಯ ನೇತೃತ್ವದ ಕೇಂದ್ರೀಯ ಭವಿಷ್ಯನಿಧಿ ವಿಶ್ವಸ್ತ ಮಂಡಳಿಯು ಡಿಸೆಂಬರ್ 19ರಂದು ಶೇ.8.65 ಬಡ್ಡಿದರವನ್ನು ಅಂಗೀಕರಿಸಿತ್ತ. ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗೆ ನೀಡಲಾಗುತ್ತಿದ್ದ ಶೇ 8.8ರಷ್ಟು ಬಡ್ಡಿದರವನ್ನು 2015-16ಸಾಲಿನಂತೆ ಶೇ 8.65ಕ್ಕೆ ಇಳಿಕೆ ಮಾಡಲಾಗಿತ್ತು. ಈ ಬದಲಾವಣೆ 4ಕೋಟಿ ಗೂ ಅಧಿಕ ಚಂದಾದಾರರ ಮೇಲೆ ಪರಿಣಾಮ ಬೀರಲಿದೆ.[ನಿಷ್ಕ್ರಿಯ ಪಿಎಫ್ ಖಾತೆಗೆ ಶೇ.8.8 ರಷ್ಟು ಬಡ್ಡಿ!]
2013-14 ಮತ್ತು 2014-15 ನೇ ಸಾಲಿಗೆ ಅನುಕ್ರಮವಾಗಿ ಶೇ.8.75 ಮತ್ತು ಶೇ.8.5 ಬಡ್ಡಿದರ ನೀಡಲಾಗಿತ್ತು. ಪ್ರಸಕ್ತ ಹಣಕಾಸು ವರ್ಷಕ್ಕೆ ಶೇ.8.65 ಬಡ್ಡಿದರ ನೀಡಿದರೆ ಇಪಿಎಫ್ ಸಂಸ್ಥೆಯ ಬಳಿ 269 ಕೋ.ರೂ. ಮಿಗತೆ ಹಣ ಉಳಿಯಲಿದೆ.

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿನ ದರವನ್ನು ಸರ್ಕಾರ ಕೊಂಚ ಇಳಿಕೆ ಮಾಡಿತ್ತು. ಇದರಿಂದ ಪಿಪಿಎಫ್, ಕಿಸಾನ್ ವಿಕಾಸ್ ಪತ್ರ, ಸುಕನ್ಯಾ ಸಮೃದ್ಧಿ ಯೋಜನೆ ಮುಂತಾದ ಉಳಿತಾಯ ಯೋಜನೆಗಳಿಂದ ಕಡಿಮೆ ರಿಟರ್ನ್ಸ್ ಬಂದಿತ್ತು. ಕಾರ್ಮಿಕ ಖಾತೆ ಕೂಡಾ ಶೇ 8.8ರ ಬಡ್ಡಿದರಕ್ಕೆ ಶಿಫಾರಸು ಮಾಡಿತ್ತು.
ಪಿಪಿಎಫ್ ನಂತಹ ಇತರ ಸಣ್ಣ ಉಳಿತಾಯ ಯೋಜನೆಗಳ ಮಟ್ಟಕ್ಕೆ ಭವಿಷ್ಯನಿಧಿ ಬಡ್ಡಿದರವನ್ನು ತಗ್ಗಿಸುವಂತೆ ವಿತ್ತ ಸಚಿವಾಲಯವು ಕಾರ್ಮಿಕ ಸಚಿವಾಲಯಕ್ಕೆ ಸೂಚಿಸುತ್ತಲೇ ಇತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವರ ಇಂದಿನ ಭರವಸೆ ಭವಿಷ್ಯನಿಧಿ ಚಂದಾದಾರರಿಗೆ ನೆಮ್ಮದಿಯನ್ನು ನೀಡಿದೆ.
ಏಪ್ರಿಲ್ 01, 2016ರಿಂದ ಇಪಿಎಫ್ ನ ಅಸಲು ಧನ ತೆರಿಗೆ ಮುಕ್ತವಾಗಿದೆ. ಇಪಿಎಫ್ ಗೆ ನೀಡುವ ಮೊತ್ತದ ಶೇ 60ರಷ್ಟು ಬಡ್ಡಿ ಮೇಲೆ ಮಾತ್ರ ತೆರಿಗೆ ವಿಧಿಸಲಾಗುತ್ತದೆ. ಇಪಿಎಫ್ ಒ ನಲ್ಲಿ 8.5 ಕೋಟಿಗೂ ಅಧಿಕ ಸದಸ್ಯರ 10 ಲಕ್ಷ ಕೋಟಿ ರು ಗೂ ಅಧಿಕ ಮೊತ್ತವಿದೆ. ಎನ್ ಪಿಎಸ್ ನಲ್ಲಿ 1.15 ಕೋಟಿ ಗೂ ಅಧಿಕ ಸದಸ್ಯರ 1.1 ಲಕ್ಷ ಕೋಟಿ ರು ಮೊತ್ತವಿದೆ
ಪಿಎಫ್ ಲೆಕ್ಕಾಚಾರ: ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. (ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications