ಹೊಸೂರಿನಲ್ಲಿ ಐಫೋನ್ ಅತಿ ದೊಡ್ಡ ಘಟಕ, 60,000 ಹೆಚ್ಚು ನೇಮಕಾತಿ
ಬೆಂಗಳೂರು, ನವೆಂಬರ್ 16: ಜನಪ್ರಿಯ ಮೊಬೈಲ್ ಆಪಲ್ ಕಂಪೆನಿಯ ಐಪೋನ್ ಘಟಕ ಬೆಂಗಳೂರು ಸಮೀಪದ ಹೊಸೂರಿನಲ್ಲಿ ಘಟಕ ತೆರೆಯಲಿದೆ. ಇದು ಸುಮಾರು 60,000 ಜನರಿಗೆ ಉದ್ಯೋಗ ನೀಡಲಿದೆ ಎಂದು ಕೇಂದ್ರ ಟೆಲಿಕಾಂ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಜಂಜಾಟಿಯಾ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಸಚಿವ ಅಶ್ವಿನಿ ವೈಷ್ಣವ್ ರಾಂಚಿ ಹಾಗೂ ಹಜಾರಿಬಾಗ್ ಬಳಿ ವಾಸಿಸುವ ಆರು ಸಾವಿರ ಬುಡಕಟ್ಟು ಮಹಿಳೆಯರಿಗೆ ಐಫೋನ್ ತಯಾರಿಸಲು ತರಬೇತಿ ನೀಡಲಾಗಿದೆ ಎಂದು ಹೇಳಿದ್ದಾರೆ.
''ಆಪಲ್ ಐಫೋನ್ ಈಗ ಭಾರತದಲ್ಲೇ ತಯಾರಾಗುತ್ತಿದೆ. ಹಾಗಾಗಿ ಬೆಂಗಳೂರು ಸಮೀಪವಿರುವ ತಮಿಳುನಾಡಿಗೆ ಸೇರಿದ ಹೊಸೂರಿನಲ್ಲಿ ಭಾರತದ ಅತಿದೊಡ್ಡ ಸ್ಥಾವರವನ್ನು ಪ್ರಾರಂಭಿಸಲಾಗುತ್ತಿದೆ. ಒಂದೇ ಕಾರ್ಖಾನೆಯಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ. ಈ 60,000 ಉದ್ಯೋಗಿಗಳಲ್ಲಿ ಮೊದಲ 6,000 ಉದ್ಯೋಗಿಗಳು ರಾಂಚಿ ಮತ್ತು ಹತ್ತಿರದ ಸ್ಥಳಗಳ ನಮ್ಮದೆ ಹಜಾರಿಬಾಗ್ನ ಬುಡಕಟ್ಟು ಸಹೋದರಿಯರು. ಆದ್ದರಿಂದಲೇ ಈ ಹಜಾರಿಬಾಗ್ ಸಹೋದರಿಯರಿಗೆ ಆಪಲ್ ಐಫೋನ್ ತಯಾರಿಕೆಯ ತರಬೇತಿ ನೀಡಲಾಗುತ್ತಿದೆ'' ಎಂದು ಅವರು ಹೇಳಿದರು.

ಹೊಸೂರಿನಲ್ಲಿ ಘಟಕ ಹೊಂದಿರುವ ಟಾಟಾ ಎಲೆಕ್ಟ್ರಾನಿಕ್ಸ್ಗೆ ಐಫೋನ್ ತಯಾರಿಕೆಗೆ ಆಪಲ್ ಕಂಪೆನಿಗೆ ಹೊರಗುತ್ತಿಗೆ ಆಧಾರದ ಮೇಲೆ ಆವರಣವನ್ನು ನೀಡಲಾಗುತ್ತಿದೆ. ಭಾರತದಲ್ಲಿ ಎಲೆಕ್ಟ್ರಾನಿಕ್ಸ್ನ ಅತಿ ದೊಡ್ಡ ಕಂಪೆನಿಗಳಾದ ಫಾಕ್ಸ್ಕಾನ್ ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ತಯಾರಿಸಿದ ಐಪೋನ್ಗಳನ್ನು ಕಂಪೆನಿಯು ಪಡೆಯುತ್ತದೆ.

ಭಾರತದಲ್ಲಿ ತನ್ನ ಘಟಕಗಳಲ್ಲಿ ಉದ್ಯೋಗಿಗಳ ಕಾರ್ಯಾಪಡೆಯನ್ನು ವಿಸ್ತರಿಸುವ ಫಾಕ್ಸ್ಕಾನ್ ಯೋಜನೆಯು ಕೋವಿಡ್ 19ರೊಂದಿಗಿನ ಅಡೆತಡೆ ಹಾಗೂ ಚೀನಾದಲ್ಲಿನ ವ್ಯವಹಾರ ಕುಸಿತದ ಪರಿಣಾಮವಾಗಿ ಕುಸಿತ ಕಂಡ ವ್ಯಾಪಾರವನ್ನು ಮತ್ತೆ ಪುಟಿದೇಳಿಸಲು ಕೈಗೊಂಡ ಕ್ರಮದ ಭಾಗವಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications