ಮಹಿಳಾ ಸುರಕ್ಷತೆಗಾಗಿ 'Panic button' ಉಳ್ಳ ಭಾರತದ ಮೊದಲ ಸ್ಮಾರ್ಟ್ ಫೋನ್ ಬಿಡುಗಡೆ
ಮಹಿಳೆಯರ ಸುರಕ್ಷೆ ಹಿನ್ನೆಲೆಯಲ್ಲಿ ಮೊಬೈಲ್ ಗಳಲ್ಲಿ ಪ್ಯಾನಿಕ್ ಬಟನ್ ಅಥವಾ 112 ಸಂಖ್ಯೆಯ ಒಂದೇ ಬಟನ್ ಇಡುವ ಬಗ್ಗೆ ಟ್ರಾಯ್ ಇತ್ತೀಚೆಗೆ ಎಲ್ಲಾ ಮೊಬೈಲ್ ತಯಾರಿಕಾ ಸಂಸ್ಥೆಗಳಿಗೆ ಸೂಚಿಸಿತ್ತು.
ಮುಂಬೈ, ಫೆಬ್ರವರಿ 22: ಪ್ರಖ್ಯಾತ ಇಲೆಕ್ಟ್ರಾನಿಕ್ ಸಂಸ್ಥೆಯಾದ ಎಲ್.ಜಿ. ತನ್ನ ಕೆ 10 ಸ್ಮಾರ್ಟ್ ಫೋನ್ ಸರಣಿಯಲ್ಲಿ ಪ್ಯಾನಿಕ್ ಬಟನ್ ಇರುವ ಹೊಸ ಮಾದರಿಯ ಫೋನ್ ಗಳನ್ನು ಬುಧವಾರ ಬಿಡುಗಡೆಗೊಳಿಸಿದ್ದು, ಈ ಮಾದರಿಯ ಮೊಟ್ಟ ಮೊದಲ ಫೋನ್ ಇದಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.
ಮಂಗಳವಾರ ನಡೆದ ಸಮಾರಂಭದಲ್ಲಿ, ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಈ ಹೊಸ ಮಾದರಿಯ ಮೊಬೈಲ್ ಗಳನ್ನು ಬಿಡುಗಡೆಗೊಳಿಸಿದರು.
ಫೋನ್ ಬಿಡುಗಡೆ ನಂತರ ಮಾತನಾಡಿದ ರವಿಶಂಕರ್ ಪ್ರಸಾದ್, ''ಪ್ಯಾನಿಕ್ ಬಟನ್ ಸೌಲಭ್ಯವು ದೇಶದ ಭದ್ರತಾ ವ್ಯವಸ್ಥೆಗೆ ಹೊಸ ತಿರುವು ತರಲಿದೆ'' ಎಂಬ ಆಶಯ ವ್ಯಕ್ತಪಡಿಸಿದರು.

ಇದೇ ವರ್ಷ ಮಾರ್ಚ್ ತಿಂಗಳ ನಂತರ ಭಾರತದಲ್ಲಿ ಬಿಡುಗಡೆಯಾಗುವ ಎಲ್ಲಾ ಮೊಬೈಲ್ ಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಸುವಂತೆ ಕೇಂದ್ರ ಸರ್ಕಾರವು ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಮೂಲಕ ಎಲ್ಲಾ ಸ್ಮಾರ್ಟ್ ಫೋನ್ ತಯಾರಿಕಾ ಕಂಪನಿಗಳಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಈ ಸೌಲಭ್ಯವನ್ನು ತನ್ನ ಗ್ರಾಹಕರಿಗೆ ನೀಡಿದ ಮೊದಲ ಕಂಪನಿಯಾಗಿ ಎಲ್ ಜಿ ಹೊರಹೊಮ್ಮಿದೆ.
ಈ ಮೊಬೈಲ್ ನಲ್ಲಿ ತುರ್ತು ದೂರವಾಣಿ ಕರೆಯನ್ನಾಗಿ ಬಳಸುವ 112 ಸಂಖ್ಯೆಯ ಒಂದೇ ಬಟನ್ ಅನ್ನು ನೀಡಲಾಗಿರುತ್ತದೆ. ಅನಿವಾರ್ಯ ಸಂದರ್ಭಗಳಲ್ಲಿ ಬಳಕೆದಾರರು, ಅದರಲ್ಲೂ ಪ್ರಮುಖವಾಗಿ ಮಹಿಳೆಯರು ಆ ಬಟನ್ ಒತ್ತಿದಲ್ಲಿ ಆ ವ್ಯಕ್ತಿಯು ಇರುವ ಸ್ಥಳದ ಮಾಹಿತಿಯು ಹತ್ತಿರದ ಪೊಲೀಸ್ ಠಾಣೆಗೆ ಹೋಗುತ್ತದೆ.
ಅಂದಹಾಗೆ, ಈ ಹೊಸ ಎಲ್ ಜಿ ಕೆ 10 - 2017 ಶ್ರೇಣಿಯ ಮೊಬೈಲ್ ಗಳು 4G LTE ತಂತ್ರಜ್ಞಾನದೊಂದಿಗೆ 5 ಎಂಪಿ ಮುಂಭಾಗದ ಕ್ಯಾಮೆರಾ, 13 ಮೆಗಾ ಪಿಕ್ಸೆಲ್ ನ ಹಿಂಭಾಗದ ಕ್ಯಾಮೆರಾ, 5.3 ಇಂಚು ಟಚ್ ಸ್ಕ್ರೀನ್ ಇದ್ದು, ಆ್ಯಂಡ್ರಾಯ್ಡ್ ನೌಗಟ್ ಆಪರೇಟಿಂಗ್ ಸಿಸ್ಟಂ ಹೊಂದಿದೆ. ಬ್ಯಾಟರಿಯು 2800 ಎಂಎಎಚ್ ಸಾಮರ್ಥ್ಯವುಳ್ಳದ್ದಾಗಿದೆ. 2 ಜಿಬಿ ರ್ಯಾಮ್ ಜತೆಗೆ 16 ಆಂತರಿಕ ಸಂಗ್ರಹ ಸಾಮರ್ಥ್ಯವಿದ್ದು, ಇದರ ಬೆಲೆ ಸುಮಾರು 13, 500 ಎಂದು ಹೇಳಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications