ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ
ನವದೆಹಲಿ, ನವೆಂಬರ್ 30: ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಶುಕ್ರವಾರ(ನವೆಂಬರ್ 30)ದಂದು ಇಳಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದರಗಳ ಏರಿಳಿತ, ಡಾಲರ್ ಎದುರು ರುಪಾಯಿ ಮೌಲ್ಯ ಚೇತರಿಕೆ ಕಾರಣ ನೀಡಲಾಗಿದೆ. ಸಬ್ಸಿಡಿ ಸಹಿತ ಹಾಗೂ ರಹಿತ ಎಲ್ ಪಿಜಿ ಪ್ರತಿ ಸಿಲಿಂಡರ್ ಮೇಲೆ ಎರಡು ಇಳಿಕೆಯಾಗಿರುವುದು ಗ್ರಾಹಕರಿಗೆ ಶುಭ ಸುದ್ದಿ ಎನ್ನಬಹುದು.
ಸಬ್ಸಿಡಿಯುಳ್ಳ ಅಡುಗೆ ಅನಿಲ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 6.52ರು ನಷ್ಟು ಇಳಿಕೆಯಾಗಿದ್ದರೆ, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 133ರು ತಗ್ಗಿದೆ.
ಜೂನ್ 2018ರಿಂದ ಸತತವಾಗಿ ಏರಿಕೆ ಕಂಡಿದ್ದ ಅಡುಗೆ ಅನಿಲ ದರದಲ್ಲಿ ಈಗ ಇಳಿಕೆ ಕಂಡು ಬಂದಿದೆ. ನವೆಂಬರ್ 30ರ ಮಧ್ಯರಾತ್ರಿಯಿಂದ ನೂತನ ದರಗಳು ಜಾರಿಗೆ ಬರಲಿವೆ.

ದೆಹಲಿಯಲ್ಲಿ ಸಬ್ಸಿಡಿಯುಳ್ಳ 14.2 ಕೆಜಿ ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 500.90ರುಾಗಲಿದೆ. ಈ ಮುಂಚೆ 507.42ರು ನಷ್ಟಿತ್ತು. ಸಬ್ಸಿಡಿರಹಿತ ಅಡುಗೆ ಅನಿಲ ಬೆಲೆಯಲ್ಲಿ 133ರು ತಗ್ಗಿಸಲಾಗಿದ್ದು, 14.2ಕೆಜಿ ತೂಗುವ ಸಿಲಿಂಡರ್ ಬೆಲೆ 809.50ರು ಆಗಲಿದೆ.
ನವೆಂಬರ್ 2018ರಲ್ಲಿ ಗ್ರಾಹಕರ ಬ್ಯಾಂಕ್ ಖಾತೆಗೆ ಸೇರಲಿರುವ ಸಬ್ಸಿಡಿ ವರ್ಗಾವಣೆ ಮೊತ್ತವನ್ನು 433.6 ರು ಪ್ರತಿ ಸಿಲಿಂಡರ್ ಗೆ ಏರಿಕೆ ಮಾಡಲಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ 376.60ರು ನಷ್ಟಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ವ್ಯತ್ಯಯದಿಂದ ಎಲ್ ಪಿಜಿ ಗ್ರಾಹಕರನ್ನು ಈ ಮೂಲಕ ರಕ್ಷಿಸಲಾಗಿದೆ ಎಂದು ಐಒಸಿ ಹೇಳಿದೆ.
ಜೂನ್ ನಿಂದ ಎಲ್ ಪಿಜಿ ಗ್ಯಾಸ್ ಸಿಲೆಂಡರ್ ಬೆಲೆಯಲ್ಲಿ ಪ್ರತಿ ತಿಂಗಳೂ ಏರಿಕೆಯಾಗಿದೆ. ಇದುವರೆಗೆ ಒಟ್ಟು ಬೆಲೆ 16.21 ರೂ.ಏರಿಕೆ ದಾಖಲಾಗಿತ್ತು.
ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications