LPG Price Cut: ಎಲ್ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆ-ನಗರವಾರು ಅಂಕಿಅಂಶಗಳ ವಿವರ ತಿಳಿಯಿರಿ
LPG Price Cut: ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಜೂನ್ 1ರಿಂದ ಅಂದರೆ, ಇಂದಿನಿಂದಲೇ ಜಾರಿಗೆ ಬರುವಂತೆ ಕಡಿತಗೊಳಿದೆ. ಹಾಗಾದರೆ ದೇಶದ ಯಾವ್ಯಾವ ನಗರಗಳಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ತಿಳಿಯಿರಿ.
ದೇಶದ ರಾಜಧಾನಿ ನವದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಬೆಲೆ 69.50 ರೂಪಾಯಿ ಇಳಿಕೆಯಾಗಿದ್ದು, 19 ಕೆ.ಜಿ. ಎಲ್ಪಿಜಿ ಸಿಲಿಂಡರ್ ದರ 1,676 ರೂಪಾಯಿ ಇದೆ. ನಿಗದಿಪಡಿಸಿದೆ. ಇನ್ನು ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ದರಗಳು ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯಲ್ಲಿ ಇರುತ್ತವೆ. ಹಾಗಾದರೆ ಇನ್ನುಳಿದ ಪ್ರಮುಖ ನಗರಗಳಲ್ಲಿ ದರ ಎಷ್ಟಿದೆ ಎಂದು ಇಲ್ಲಿ ಮಾಹಿತಿ ನೀಡಲಾಗಿದೆ ಗಮನಿಸಿ.

ಈ ಹಿಂದೆ, ಮೇ 1, 2024ರಂದು 19 ರೂಪಾಯಿ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 1745.50 ರೂಪಾಯಿ, ಏಪ್ರಿಲ್ನಲ್ಲಿ 30.50 ರೂಪಾಯಿ ಇಳಿಕೆಯಾಗಿ 19 ಕೆ.ಜಿ ವಾಣಿಜ್ಯ ಸಿಲಿಂಡರ್ಗೆ 1764.50 ರೂಪಾಯಿ ಆಗಿತ್ತು.
ಪ್ರಮುಖ ನಗರಗಳಲ್ಲಿ ಎಲ್ಪಿಜಿ ದರ ವಿವರ (19 ಕೆ.ಜಿ)
1. ನವದೆಹಲಿ- 1,676 ರೂಪಾಯಿ
2. ಕೋಲ್ಕತ್ತಾ - 1,787 ರೂಪಾಯಿ
3. ಮುಂಬೈ - 1,629 ರೂಪಾಯಿ
4. ಚೆನ್ನೈ - 1,840 ರೂಪಾಯಿ
5. ಬೆಂಗಳೂರು - 1,755 ರೂಪಾಯಿ
6. ಹೈದರಾಬಾದ್ - 1,903 ರೂಪಾಯಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ, ಅರ್ಹ ಕುಟುಂಬಗಳಿಗೆ ಸಬ್ಸಿಡಿಗಳನ್ನು ಒದಗಿಸಲಾಗುತ್ತಿದೆ. ಈ ಮೂಲಕ ಮನೆಯಲ್ಲಿ ಅಡುಗೆ ಮಾಡಲು ಎಲ್ಪಿಜಿ ಸಿಲಿಂಡರ್ಗಳ ಬಳಕೆಯನ್ನು ಉತ್ತೇಜಿಸಲು ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ.
ಗೃಹ ಬಳಕೆ ಸಿಲಿಂಡರ್ ಬೆಯಲ್ಲಿ ಬದಲಾವಣೆ ಇಲ್ಲ: ತೈಲ ಕಂಪನಿಗಳು ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಪ್ರಸ್ತುತ ನವದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 803 ರೂಪಾಯಿ, ಆದರೆ, ಉಜ್ವಲ ಫಲಾನುಭವಿಗಳಿಗೆ 603 ರೂಪಾಯಿಗೆ ಮಾತ್ರ ಸಿಗಲಿದೆ. ಮುಂಬೈನಲ್ಲಿ ಈ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 802.50, ಬೆಂಗಳೂರಿನಲ್ಲಿ 805.50 ರೂಪಾಯಿ, ಚೆನ್ನೈನಲ್ಲಿ 818.50 ರೂಪಾಯಿ, ಹೈದರಾಬಾದ್ನಲ್ಲಿ 855 ರೂಪಾಯಿ, ವಿಶಾಖಪಟ್ಟಣಂನಲ್ಲಿ 812 ರೂಪಾಯಿ ಇದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications