LPG Price Cut: ಹೊಸವರ್ಷಕ್ಕೂ ಮುನ್ನ ಡಿಸೆಂಬರ್ 1ರಂದೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರ ಇಳಿಕೆ: ಇಲ್ಲಿದೆ ವಿವರ
LPG Price Cut: ಇಂಧನ ಕಂಪನಿಗಳು ಪ್ರತಿ ತಿಂಗಳ ಆರಂಭದಲ್ಲಿ ಎಲ್ಪಿಜಿ ಸಿಲಿಂಡರ್ ದರವನ್ನು ಪರಿಷ್ಕರಣೆ ಮಾಡುತ್ತಲಿರುತ್ತವೆ. ಇದೀಗ ಇಂದು (ಡಿಸೆಂಬರ್ 1) ದರವನ್ನು ಇಳಿಕೆ ಮಾಡಲಾಗಿದೆ. ಹಾಗಾದ್ರೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಣೆ ಮಾಡಲಾಗುತ್ತದೆ. ಇದೀಗ ಇಂದು (ಡಿಸೆಂಬರ್ 1) ಬೆಲೆಯನ್ನು ಭರ್ಜರಿ ಇಳಿಕೆ ಮಾಡಲಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅದೇ ಹಳೇ ದರ ಮುಂದುವರೆದಿದೆ.

ಡಿಸೆಂಬರ್ ತಿಂಗಳು ಆರಂಭದಲ್ಲೇ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಸಿಲಿಂಡರ್ ಹೊಸ ದರಗಳನ್ನು ಬಿಡುಗಡೆ ಮಾಡಿದದೆ. ಆದರೆ, ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿಲ್ಲ. ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ದರದಲ್ಲಿ 10 ರೂಪಾಯಿ ಇಳಿಕೆಯಾಗಿದೆ. ಹಾಗಾದ್ರೆ ಯಾವ್ಯಾವ ನಗರದಲ್ಲಿ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ವಾಣಿಜ್ಯ ಬಳಕೆಯ (19 ಕೆ.ಜಿ) ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 10 ರೂಪಾಯಿ ಇಳಿಕೆ ಮಾಡಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಈ ದರವು ದೇಶದಾದ್ಯಂತ ಇಂದಿನಿಂದ ಅನ್ವಯ ಆಗಿದೆ. ಇನ್ನೂ ನವೆಂಬರ್ನಲ್ಲಿ 5 ರೂಪಾಯಿ ಇಳಿಕೆಯಾದ್ರೆ, ಅಕ್ಟೋಬರ್ನಲ್ಲಿ 16 ರೂಪಾಯಿ ಹೆಚ್ಚಳ ಆಗಿತ್ತು. ಸೆಪ್ಟೆಂಬರ್ನಲ್ಲಿ 51 ರೂಪಾಯಿ ಇಳಿಕೆಯಾಗಿತ್ತಯ.
ಪ್ರಮುಖ ನಗರಗಳಲ್ಲಿ ವಾಣಿಜ್ಯ (19 ಕೆ.ಜಿ.) ಸಿಲಿಂಡರ್ ದರಗಳು
* ಬೆಂಗಳೂರು - 1,654 ರೂಪಾಯಿ (ಹಿಂದಿನ ದರ 1,664.50)
* ನವದೆಹಲಿ - 1,580.50 ರೂಪಾಯಿ (ಹಿಂದಿನ ದರ 1590.50 ರೂಪಾಯಿ)
* ಕೋಲ್ಕತ್ತಾ - 1,684 ರೂಪಾಯಿ (ಹಿಂದಿನ ದರ 1,694 ರೂಪಾಯಿ)
* ಮುಂಬೈ - 1,531 ರೂಪಾಯಿ (ಹಿಂದಿನ ದರ 1,541 ರೂಪಾಯಿ)
* ಚೆನ್ನೈ - 1,739.50 ರೂಪಾಯಿ (ಹಿಂದಿನ ದರ 1,749.50 ರೂಪಾಯಿ)
ಇನ್ನೂ ಜನಸಾಮಾನ್ಯರು ಜನರು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ಇಳಿಕೆಯಾಗುತ್ತದೆ ಎನ್ನುವ ಭರವಸೆ ಸುಳ್ಳದಂತಾಗಿದೆ. ಈ 14.2 ಕೆ.ಜಿ. ಗೃಹಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತೈಲ ಕಂಪನಿಗಳು ತಿಳಿಸಿವೆ. ಇದೇ ದರಗಳು ಮುಂದುವರೆದಿದ್ದು, ಯಾವುದೇ ಹೆಚ್ಚಳ ಅಥವಾ ಇಳಿಕೆಯಾಗಿಲ್ಲ. ಹಾಗಾದ್ರೆ ಯಾವ ನಗರಗಳಲ್ಲಿ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಪ್ರಮುಖ ನಗರಗಳಲ್ಲಿ (14.2 ಕೆ.ಜಿ.) ಗೃಹಬಳಕೆ ಎಲ್ಪಿಜಿ ದರಗಳು
* ಬೆಂಗಳೂರು - 855.50 ರೂಪಾಯಿ
* ದೆಹಲಿ - 853 ರೂಪಾಯಿ
* ಮುಂಬೈ - 852.50 ರೂಪಾಯಿ
* ಲಕ್ನೋ - 890.50 ರೂಪಾಯಿ
* ಹೈದರಾಬಾದ್ - 905 ರೂಪಾಯಿ
* ಪಾಟ್ನಾ - 951 ರೂಪಾಯಿ
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications