ಫೆ.10ರಂದು ತುಮಕೂರಿನಲ್ಲಿ ಮಶೀನ್ ಟೂಲ್ಸ್ ಪಾರ್ಕ್‌ಗೆ ಶಂಕುಸ್ಥಾಪನೆ

ಬೆಂಗಳೂರು, ಜನವರಿ 25 : ಇಡೀ ದೇಶದಲ್ಲಿ ಮಶೀನ್ ಟೂಲ್ಸ್ (ಯಂತ್ರೋಪಕರಣಗಳು) ಉತ್ಪಾದನೆಯಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದ್ದು, ಫೆ.10ರಂದು ತುಮಕೂರಿನಲ್ಲಿ ಮಶೀನ್ ಟೂಲ್ಸ್ ಪಾರ್ಕ್‌ಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಆರ್.ವಿ.ದೇಶಪಾಂಡೆ ಗುರುವಾರ ಇಲ್ಲಿ ಘೋಷಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಭಾರತೀಯ ಮಶೀನ್ ಟೂಲ್ಸ್ ಉತ್ಪಾದಕರ ಒಕ್ಕೂಟ ಏರ್ಪಡಿಸಿರುವ ಇಮ್ಟೆಕ್ಸ್ & ಟೂಲ್‌ಟೆಕ್-2018 ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದ ಯಂತ್ರೋಪಕರಣಗಳ ಒಟ್ಟು ಉತ್ಪಾದನೆಯಲ್ಲಿ ಶೇಕಡ 60ರಷ್ಟು ಬೆಂಗಳೂರು ನಗರವೊಂದರಲ್ಲೇ ತಯಾರಾಗುತ್ತಿವೆ. ವಿಶೇಷ ಉದ್ದೇಶದ ಯಂತ್ರೋಪಕರಣಗಳು (ಸ್ಪೆಷಲ್ ಪರ್ಪಸ್ ಮಶಿನರಿ) ಮತ್ತು ಭಾರೀ ವಿದ್ಯುತ್ ಯಂತ್ರೋಪಕರಣಗಳನ್ನು (ಹೆವಿ ಎಲೆಕ್ಟ್ರಿಕಲ್ ಮಶಿನರಿ) ಉತ್ಪಾದಿಸುವುದರಲ್ಲಿ ರಾಜ್ಯವು ಇಡೀ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ದೇಶಪಾಂಡೆ ಅವರು ಹೇಳಿದರು.

Machine Tool Park to come up in Tumakuru

ವಿಶೇಷ ಉದ್ದೇಶದ ಯಂತ್ರೋಪಕರಣಗಳ ತಯಾರಿಕೆಯಲ್ಲಿ ರಾಜ್ಯವು ಜಗತ್ತಿನ ಐದು ಮುಂಚೂಣಿ ತಾಣಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಯಂತ್ರೋಪಕರಣಗಳ ತಯಾರಿಕೆಯಲ್ಲಿ ಪರಿಣತಿ ಸಾಧಿಸಿರುವ 120 ಕಂಪನಿಗಳು ನೆಲೆ ಹೊಂದಿವೆ. ರಾಜ್ಯದ ಕೈಗಾರಿಕಾ ನೀತಿಯಡಿ ಈ ವಲಯದಲ್ಲಿ 500ರಿಂದ 1,000 ಕೋಟಿ ರೂ. ಮತ್ತು ಇದಕ್ಕಿಂತ ಹೆಚ್ಚಿನ ಬಂಡವಾಳ ಹೊಂದಿರುವ ಅಲ್ಟ್ರಾ ಮೆಗಾ ಮತ್ತು ಸೂಪರ್ ಮೆಗಾ ಕಂಪನಿಗಳಿಗೆ ವಿಶೇಷ ಪ್ರೋತ್ಸಾಹವನ್ನು ಕೊಡಲಾಗುತ್ತಿದೆ ಎಂದು ಸಚಿವರು ಒತ್ತಿ ಹೇಳಿದರು.

ಜಗತ್ತಿನ ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನು ಮುನ್ನಡೆಸುವ ಸಾಮರ್ಥ್ಯ ರಾಜ್ಯಕ್ಕಿದೆ. ಉದ್ಯಮರಂಗವನ್ನು ಡಿಜಿಟಲೀಕರಣಗೊಳಿಸಲು ಬಿಗ್‌ಡೇಡಾ, ಹೈ-ಕಂಪ್ಯೂಟಿಂಗ್, ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮತ್ತು ಅನಲೆಟಿಕ್ಸ್‌ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು. ಉದ್ಯಮಗಳಿಗೆ ಉತ್ತೇಜನ ನೀಡುವ ವಿಚಾರದಲ್ಲಿ ರಾಜ್ಯ ತೆಗೆದುಕೊಂಡಿರುವ ತೀರ್ಮಾನಗಳನ್ನು ಕೇಂದ್ರ ಸರಕಾರ ಕೂಡ ಅನುಸರಿಸುತ್ತಿದೆ, ಎಂದು ಅವರು ನುಡಿದರು.

Machine Tool Park to come up in Tumakuru

ಜಾಗತೀಕರಣದ ಯುಗದಲ್ಲಿ ಗುಣಮಟ್ಟ, ಮಿತವ್ಯಯ ಮತ್ತು ಕ್ಷಿಪ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಂಶಗಳು ಅತ್ಯಂತ ನಿರ್ಣಾಯಕವಾಗಿದೆ. ಇವೆಲ್ಲವೂ ಇದ್ದಾಗ ಮಾತ್ರ ಗ್ರಾಹಕನನ್ನು ಸಂತೃಪ್ತಿ ಪಡೆಸಲು ಸಾಧ್ಯ. ಇದರ ಜೊತೆಗೆ, ಉದ್ಯಮಿಗಳು ಸ್ಪರ್ಧಾತ್ಮಕ ವಾತಾವರಣವದಲ್ಲಿ ನಂಬಿಕೆ ಇಟ್ಟು ಮುನ್ನುಗ್ಗಬೇಕು, ಎಂದು ಆರ್.ವಿ.ದೇಶಪಾಂಡೆ ಅವರು ಸೂಚಿಸಿದರು.

ಪೂರೈಕೆಯ ಸರಪಳಿಯನ್ನು ನಾವು ಮತ್ತಷ್ಟು ಬಲಪಡಿಸಬೇಕಾಗಿದೆ. ಇನ್ನೊಂದೆಡೆ, ಐಟಿ-ಬಿಟಿ ವಲಯದಲ್ಲಿ ನಾವು ಕೇವಲ ಸೇವಾಪೂರೈಕೆದಾರರಾಗಿಯೇ ಮುಂದುವರಿಯುವುದರಲ್ಲಿ ಅರ್ಥವಿಲ್ಲ. ಯಂತ್ರೋಪಕರಣ ತಯಾರಿಕೆ ಸೇರಿದಂತೆ ಎಲ್ಲ ವಲಯಗಳೂ ಸಂಶೋಧನೆಯ ಕಡೆಗೆ ದಾಪುಗಾಲಿಡಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ಕರೆ ಕೊಟ್ಟರು.

Machine Tool Park to come up in Tumakuru

ಕೈಗಾರಿಕೆಗಳನ್ನು ಮತ್ತು ಬಂಡವಾಳ ಹೂಡಿಕೆಯನ್ನು ನಾವು ಸದಾ ಸ್ವಾಗತಿಸುತ್ತೇವೆ. ಆದರೆ, ಉದ್ಯಮಗಳು ಕೂಡ ತಮ್ಮ ಲಾಭಾಂಶದ ಸ್ವಲ್ಪ ಪಾಲನ್ನು ಸಮಾಜಕ್ಕೆ ಹಿಂದಿರುಗಿಸಬೇಕು. ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡು, ಯುವಜನರಿಗೆ ಉದ್ಯೋಗವನ್ನು ಕೊಡುವುದು ಅತ್ಯಗತ್ಯ, ಎಂದು ದೇಶಪಾಂಡೆಯವರು ಸೂಚಿಸಿದರು.

1990ರ ಆರಂಭದಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಮತ್ತು ಹಣಕಾಸು ಸಚಿವ ಮನಮೋಹನ್ ಸಿಂಗ್ ಅವರು ದೇಶದಲ್ಲಿ ಉದಾರ ಆರ್ಥಿಕ ನೀತಿಯನ್ನು ಜಾರಿಗೆ ತರುವ ಮೂಲಕ ಇತಿಹಾಸವನ್ನೇ ಸೃಷ್ಟಿಸಿದರು. ಭಾರತ ಇಂದು ಕಂಡಿರುವ ಅಗಾಧ ಬೆಳವಣಿಗೆಗೆ ಇವರಿಬ್ಬರೂ ಮೂಲಪುರುಷರು ಎನ್ನುವುದನ್ನು ನಾವು ಮರೆಯಬಾರದು. ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಈಗ ಹಿಮ್ಮುಖವಾಗಿ ಚಲಿಸುವುದು ಸಾಧ್ಯವಿಲ್ಲ, ಎಂದು ಅವರು ನೆನಪಿಸಿಕೊಂಡರು.

Machine Tool Park to come up in Tumakuru

ಸಮಾರಂಭದಲ್ಲಿ ಇಸ್ರೊದ ನಿವೃತ್ತ ಮುಖ್ಯಸ್ಥ ಡಾ.ಎ.ಎಸ್. ಕಿರಣ್‌ಕುಮಾರ್, ಐಎಂಟಿಎಂಎ ಪದಾಧಿಕಾರಿಗಳಾದ ಜಮ್‌ಷೆಡ್ ಗೋದ್ರೇಜ್, ಪಿ.ರಾಮದಾಸ್, ಎಸಿಎಂಎಐ ಅಧ್ಯಕ್ಷ ನಿರ್ಮಲ್ ಮಿಂದಾ, ಉಪಾಧ್ಯಕ್ಷ ಇಂದ್ರದೇವ್ ಬಾಬು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+