ಗ್ರಾಹಕರೇ ಗಮನಿಸಿ: ಅಪರಂಜಿ ಖರೀದಿಗೆ ಹಾಲ್ಮಾರ್ಕ್ ಕಡ್ಡಾಯ
ನವದೆಹಲಿ, ಜೂನ್ 16: ಅಪರಂಜಿ(24 ಕ್ಯಾರೆಟ್) ಚಿನ್ನ ಖರೀದಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಹಾಲ್ಮಾರ್ಕ್ ಕಡ್ಡಾಯವಾಗಿದೆ. ಜೂನ್ 16ರಿಂದ ಈ ಯೋಜನೆ ಹಂತಹಂತವಾಗಿ ದೇಶದೆಲ್ಲೆಡೆ ಜಾರಿಗೆ ಬಂದಿದೆ.
ಗ್ರಾಹಕರ ಹಿತ ರಕ್ಷಿಸಲು ಚಿನ್ನಾಭರಣಗಳ ಮೇಲೆ ಹಾಲ್ಮಾರ್ಕ್ ಕಡ್ಡಾಯಗೊಳಿಸಬೇಕು ಎಂದು ಭಾರತದ ಮಹಾಲೇಖಪಾಲಕರು(CAG) ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿ, ಹಾಲ್ ಮಾರ್ಕ್ ಕಡ್ಡಾಯಗೊಳಿಸಿ ಹತ್ತು ವರ್ಷ ಕಳೆದರೂ ಇನ್ನೂ ಪೂರ್ಣಪ್ರಮಾಣದಲ್ಲಿ ಪರಿಶುದ್ಧ ಚಿನ್ನ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಈ ಬಾರಿ ಮೋದಿ ಸರ್ಕಾರ ಕಟ್ಟುನಿಟ್ಟಾಗಿ ಹಾಲ್ಮಾರ್ಕ್ ಕಡ್ಡಾಯಗೊಳಿಸಲು ಮುಂದಾಗಿದೆ.
''ಗ್ರಾಹಕ ವ್ಯವಹಾರಗಳ ಸಚಿವಾಲಯದ ವ್ಯಾಪ್ತಿಯಲ್ಲಿರುವ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದು, 256 ಜಿಲ್ಲಾ ಕೇಂದ್ರಗಳಲ್ಲಿ ಪ್ರಾಥಮಿಕ ಹಂತದಲ್ಲಿ ಜಾರಿಗೆ ಬರಲಿದೆ,'' ಎಂದು ಗ್ರಾಹಕ ವ್ಯವಹಾರ ಖಾತೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ.

ಚಿನ್ನಾಭರಣಗಳ ಮೇಲೆ ಹಾಲ್ಮಾರ್ಕ್ ಕಡ್ಡಾಯಗೊಳಿಸದಿರುವುದರಿಂದ ಆಭರಣ ತಯಾರಕರು ಸಮರ್ಪಕವಾಗಿ ಭಾರತೀಯ ಆಭರಣಗಳನ್ನು ನೀಡದಿರುವುದರಿಂದ ಗ್ರಾಹಕರು ಪರಿಶುದ್ಧವಲ್ಲದ ಆಭರಣಗಳನ್ನು ಖರೀದಿಸುತ್ತಿದ್ದಾರೆ ಎಂದು ಸಿಎಜಿ ತನ್ನ ವರದಿಯಲ್ಲಿ ತಿಳಿಸಿತ್ತು.
ಚಿನ್ನಾಭರಣವನ್ನು ಎಲ್ಲಿ ತಯಾರು ಮಾಡಲಾಗಿದೆ? ಯಾವ ವರ್ಷ ತಯಾರಿಸಲಾಗಿದೆ ಎಂಬುದನ್ನು ತಿಳಿಸುತ್ತದೆ. ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಲಾಗ್ ಇನ್(http://www.bis.org.in) ಆಗುವುದರ ಮುಖೇನ ಪಡೆದುಕೊಳ್ಳಬಹುದು
''ಬಿಐಎಸ್ನಲ್ಲಿ ಇಲ್ಲಿ ತನಕ 34,647 ಆಭರಣ ಸಂಸ್ಥೆಗಳು ನೋಂದಣಿ ಮಾಡಿಕೊಂಡಿವೆ. ಶೇ 40ರಷ್ಟು ಮಾತ್ರ ಹಾಲ್ ಮಾರ್ಕ್ ಪಡೆಯಲು ಸಾಧ್ಯವಾಗಿವೆ.ಇನ್ಮುಂದೆ ಬಿಐಎಸ್ ನೋಂದಣಿ, ಹಾಲ್ ಮಾರ್ಕ್ ಇಲ್ಲದ ಆಭರಣಗಳಿಗೆ ಮಾನ್ಯತೆ ಇರುವುದಿಲ್ಲ,ಜೂನ್ 16 ರಿಂದ ಆಭರಣಗಾರರು 14, 18 ಹಾಗೂ 22 ಕ್ಯಾರೆಟ್ ಚಿನ್ನಾಭರಣಗಳನ್ನು ಮಾತ್ರ ಮಾರಾಟ ಮಾಡಬಹುದಾಗಿದೆ. ಅಪರಂಜಿ ಚಿನ್ನ ಮಾರಾಟಕ್ಕೆ ನೋಂದಣಿ, ಪರಿಶುದ್ಧತೆಯ ಮುದ್ರೆ ಅಗತ್ಯ,'' ಎಂದು ಗ್ರಾಹಕ ವ್ಯವಹಾರ ಇಲಾಖೆ ಕಾರ್ಯದರ್ಶಿ ಲೀನಾ ನಂದನ್ ಪಿಟಿಐಗೆ ತಿಳಿಸಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications