ಬೆಂಗಳೂರಿನಲ್ಲಿ ವೋಲ್ವೋ ಪರ್ಸನಲ್ ಸರ್ವೀಸ್ ಕೇಂದ್ರ ಆರಂಭ
ಬೆಂಗಳೂರು, 15 ನವೆಂಬರ್ 2019: ವಿಶ್ವದ ಖ್ಯಾತ ಕಾರು ತಯಾರಿಕಾ ಕಂಪನಿಯಾಗಿರುವ ವೋಲ್ವೋ ಕಾರ್ ಇಂಡಿಯಾ ಕರ್ನಾಟಕದ ತನ್ನ ಗ್ರಾಹಕರಿಗೆ ವಿಶ್ವ ದರ್ಜೆಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮುನ್ನಡಿ ಇಟ್ಟಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ ತನ್ನ ಅಧಿಕೃತ ಸೇವಾ ಸಂಸ್ಥೆ ಎಂದು ಮಾರ್ಷಲ್ ಮೋಟರ್ಸ್ ಗೆ ಅಧಿಕೃತ ಸೇವಾ ಕೇಂದ್ರದ ಮಾನ್ಯತೆ ನೀಡಿದೆ. ಇದು ವೋಲ್ವೋ ಪರ್ಸನಲ್ ಸರ್ವೀಸ್ (ವಿಪಿಎಸ್) ಡೀಲರ್ ಆಗಿದೆ.
ವಿಶ್ವದ ವಿವಿಧ ಮಾರುಕಟ್ಟೆಗಳಲ್ಲಿ ಮಾರಾಟವಾಗುವ ವೋಲ್ವೋ ಕಾರುಗಳಿಗೆ ಇಲ್ಲಿ ಸೇವೆಯನ್ನು ಒದಗಿಸಲಿದೆ. ಈ ವಿಪಿಎಸ್ ಗ್ರಾಹಕರ ಕಾಯುವ ಅವಧಿಯನ್ನು ಕನಿಷ್ಠ ಶೇ.50 ರಷ್ಟನ್ನು ಉಳಿತಾಯ ಮಾಡಲಿದೆ. ಇಲ್ಲಿನ ಟೆಕ್ನಿಶಿಯನ್ ಗಳು ನೇರವಾಗಿ ಗ್ರಾಹಕರೊಂದಿಗೆ ಸಂಪರ್ಕದಲ್ಲಿರಲಿದ್ದು, ಎರಡೂ ಬದಿಯಿಂದಲೂ ಸ್ಪಷ್ಟವಾದ ಮಾಹಿತಿಗಳು ವಿನಿಮಯವಾಗಿ ವಾಹನದ ಸರ್ವೀಸ್ ಉತ್ತಮ ಮಟ್ಟದಿಂದ ಕೂಡಿರಲಿದೆ.
ವೋಲ್ವೋ ಕಾರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಚಾರ್ಲ್ಸ್ ಫ್ರಂಪ್ ಸಮ್ಮುಖದಲ್ಲಿ ಮಾರ್ಷಲ್ ಮೋಟರ್ಸ್ ಗೆ ಈ ಅಧಿಕೃತ ಸೇವಾ ಕೇಂದ್ರದ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಚಾರ್ಲ್ಸ್ ಫ್ರಂಪ್ ಅವರು, ''ನಮ್ಮ ಶೋರೂಂನಲ್ಲಿ ಮಾರಾಟವಾದ ಕಾರುಗಳಿಗೆ ಸೂಕ್ತವಾದ ರೀತಿಯಲ್ಲಿ ಸರ್ವೀಸ್ ಸೌಲಭ್ಯವನ್ನು ಒದಗಿಸುತ್ತಿದ್ದೇವೆ. ನಮ್ಮ ವಿಪಿಎಸ್ ನೆಟ್ವರ್ಕ್ ಮೂಲಕ ಗ್ರಾಹಕರು ತಡೆರಹಿತವಾದ ಸೇವೆಗಳನ್ನು ಪಡೆಯಬಹುದಾಗಿದೆ. ನಮ್ಮ ಪಾಲುದಾರರಾಗಿರುವ ಮಾರ್ಷಲ್ ಮೋಟರ್ಸ್ ಇದೀಗ ಪ್ರಮಾಣೀಕೃತ ವಿಪಿಎಸ್ ಡೀಲರ್ ಎಂದು ಘೋಷಿಸಲು ನಮಗೆ ಸಂತಸವೆನಿಸುತ್ತದೆ'' ಎಂದರು.
ಮಾರ್ಷಲ್ ಮೋಟರ್ಸ್ ನ ಡೀಲರ್ ಪ್ರಿನ್ಸಿಪಾಲ್ ರಿತೇಶ್ ರೆಡ್ಡಿ ಮಾತನಾಡಿ, ''ವೋಲ್ವೋ ಕಾರು ಸಂಸ್ಥೆಯು ತನ್ನ ಗ್ರಾಹಕರಿಗೆ ಗುಣಮಟ್ಟದ ಸಮಯವನ್ನು ವಾಪಸ್ ನೀಡಲು ಬಯಸುತ್ತದೆ. ಈ ಮೂಲಕ ಗ್ರಾಹಕರು ತಮ್ಮ ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಬಹುದಾಗಿದೆ. ಈ ವಿಪಿಎಸ್ ಮಾದರಿಯ ಸೇವೆಯು ಗ್ರಾಹಕರಿಗೆ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಉಳಿತಾಯ ಮಾಡಲು ಸಾಧ್ಯವಾಗುತ್ತದೆ. ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯ ಅನುಭವವನ್ನು ನೀಡುತ್ತಿರುವ ವೋಲ್ವೋ ಕಾರು ಸಂಸ್ಥೆಯೊಂದಿಗೆ ಪಾಲುದಾರಿಕೆಯನ್ನು ಹೊಂದುತ್ತಿರುವುದಕ್ಕೆ ನಮಗೆ ಅತೀವ ಸಂತಸವೆನಿಸುತ್ತಿದೆ'' ಎಂದು ಹೇಳಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications