ಉತ್ಪಾದನಾ ವೆಚ್ಚ ಅಧಿಕ, ಮಾರುತಿ ಸುಜುಕಿ ವಾಹನ ಬೆಲೆ ಏರಿಕೆ
ನವದೆಹಲಿ, ಸೆಪ್ಟೆಂಬರ್ 06: ಕೊರೊನಾವೈರಸ್ನಿಂದಾಗಿ ಆರ್ಥಿಕ ಹಿಂಜರಿತಕ್ಕೆ ಒಳಗಾಗಿದ್ದ ದೇಶದ ಅಗ್ರಮಾನ್ಯ ಕಾರು ತಯಾರಕ ಮಾರುತಿ ಸುಜುಕಿ ಕಂಪನಿ (MSI) ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದರೆ, ಆರ್ಥಿಕ ಬಿಕ್ಕಟ್ಟು ಮುಂದುವರೆದಿರುವುದರಿಂದ ಬೆಲೆ ಏರಿಕೆ ಮಾರ್ಗ ಹಿಡಿದಿದೆ.
2020-21 ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಪ್ರಯಾಣಿಕ ವಾಹನ ರಫ್ತು ಶೇ. 75ರಷ್ಟು ಇಳಿಕೆಯಾಗಿತ್ತು. ಜೊತೆಗೆ ಬಿಎಸ್ 6 ಮಾನ್ಯತೆ ಸಿಗದ ಹಿನ್ನೆಲೆಯಲ್ಲಿ ಡೀಸೆಲ್ ಕಾರುಗಳನ್ನು ಮಾರುಕಟ್ಟೆಗೆ ಬಿಟ್ಟಿರಲಿಲ್ಲ. ಡೀಸೆಲ್ ಕಾರುಗಳನ್ನು ಮತ್ತೆ ಮಾರುಕಟ್ಟೆಗೆ ಪರಿಚಯಿಸಲು ಕೂಡಾ ಮುಂದಾಗಿದೆ. ಜೊತೆಗೆ, ಮಾರುತಿ ಸುಜುಕಿಯ ಆಯ್ದ ವಾಹನಗಳ ಎಕ್ಸ್ ಷೋರೂಂ ಬೆಲೆ ಶೇ 1.9ರಷ್ಟು ಏರಿಕೆ ಮಾಡಲಾಗಿದೆ ಎಂದು ಷೇರುಪೇಟೆಗೆ ಸಂಸ್ಥೆ ತಿಳಿಸಿದೆ.
ಸೆಲೆರಿಯೊ ಹೊರತುಪಡಿಸಿ ಎಲ್ಲಾ ಮಾದರಿ ವಾಹನಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಈ ವರ್ಷದಲ್ಲಿ ಮೂರನೇ ಬಾರಿಗೆ ಮಾರುತಿ ಸುಜುಕಿ ಬೆಲೆ ಏರಿಕೆ ಮಾಡಿದೆ. ಈ ಮೊದಲೇ ತಿಳಿಸಿದಂತೆ, ಸೆ.6ರಿಂದ ಆಯ್ದ ವಾಹನಗಳ ಬೆಲೆ ಏರಿಕೆಯಾಗಿದೆ.

ಇದಕ್ಕೂ ಮುನ್ನ ಜನವರಿ ತಿಂಗಳಲ್ಲಿ ಹಲವು ಮಾಡೆಲ್ ಮೇಲಿನ ಬೆಲೆ 34,000 ರುಪಾಯಿಯಷ್ಟು ಏರಿಕೆ ಮಾಡಲಾಗಿತ್ತು. ನಂತರ ಆಯ್ದ ವಾಹನಗಳ ಎಕ್ಸ್ ಶೋರೂಂ ಮೇಲಿನ ಬೆಲೆ ಶೇ 1.6ರಷ್ಟು ಹೆಚ್ಚಳ ಕಂಡಿತ್ತು.
ಬೆಲೆ ಏರಿಕೆ ಏಕೆ?: ಕಚ್ಚಾವಸ್ತು ಕೊರತೆ, ಸೆಮಿಕಂಡೆಕ್ಟರ್ ಚಿಪ್, ಬಿಡಿ ಭಾಗಗಳ ಕೊರತೆ, ಉತ್ಪದನಾ ವೆಚ್ಚ ಹೆಚ್ಚಳವಾಗಿದ್ದು, ಬೇಡಿಕೆಗೆ ತಕ್ಕ ಮಾರಾಟವಾಗದ ಕಾರಣ ಬೆಲೆ ಏರಿಕೆ ಮಾಡಲಾಗಿದೆ.
''ಉತ್ಪಾದನಾ ವೆಚ್ಚ ನಿರ್ವಹಣಾ ಹೊರೆ ಹೆಚ್ಚಾಗಿರುವುದರಿಂದ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಬೇಕಾಗಿದೆ'' ಎಂದು ಎಂಎಸ್ಐ( ಮಾರ್ಕೆಟಿಂಗ್) ಕಾರ್ಯಕಾರಿ ನಿರ್ದೇಶಕ ಶಶಾಂಕ್ ವಾಸ್ತವ ಪ್ರತಿಕ್ರಿಯಿಸಿದ್ದಾರೆ.
ಜನಪ್ರಿಯ ಹ್ಯಾಚ್ ಬ್ಯಾಕ್ಸ್ ಸರಣಿಯ ಸ್ವಿಫ್ಟ್ ಹಾಗೂ ಬಲೆನೋಗೆ ಬೇಕಾದ ಚಿಪ್ ಅಲಭ್ಯವಾಗಿರುವುದರಿಂದ ಉತ್ಪದನಾ ಸಾಮರ್ಥ್ಯವನ್ನು ಸೆಪ್ಟೆಂಬರ್ ತಿಂಗಳಲ್ಲಿ ತಗ್ಗಿಸಲು ಸಂಸ್ಥೆ ಮುಂದಾಗಿದೆ. ಕಳೆದ ವಾರ ಪೆಟ್ರೋಲ್ ಮಾದರಿಯ 1,81,754 ವಾಹನಗಳನ್ನು ಹಿಂದಕ್ಕೆ ಕರೆಸಿಕೊಳ್ಳಲಾಗಿತ್ತು. ಇದು ಮಾರುತಿ ಸುಜುಕಿ ಇತಿಹಾಸದಲ್ಲೇ ಅತಿ ದೊಡ್ಡ ರೀಕಾಲ್ ಎನಿಸಿಕೊಂಡಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications