Maruti Suzuki : ತನ್ನ 17,362 ವಾಹನಗಳನ್ನು ಹಿಂಪಡೆಯಲಿದೆ, ಕಾರಣವೇನು ಗೊತ್ತೇ?
ನವದೆಹಲಿ, ಜನವರಿ 18: ಭಾರತದಲ್ಲಿನ ಅತಿ ದೊಡ್ಡ ಕಾರು ಉತ್ಪಾದಕ ಕಂಪನಿ ಮಾರುತಿ ಸುಜುಕಿಯು ತನ್ನ ಎಲ್ಲ ಮಾದರಿಯ ವಾಹನಗಳ ಬೆಲೆಯನ್ನು ಸುಮಾರು 1.1 ಪ್ರತಿಶತ ಹೆಚ್ಚಿಸಿದ ಬೆನ್ನಲ್ಲೆ ತಾನು ತಯಾರಿಸಿದ 17,362 ಕಾರುಗಳನ್ನು ಹಿಂಪಡೆಯುವುದಾಗಿ ಪ್ರಕಟನೆಯಲ್ಲಿ ತಿಳಿಸಿದೆ.
ಮಾರುತಿ ಸುಜುಕಿ ಕಂಪನಿಯು ತನ್ನ ಏಳು ಮಾದರಿಯ ಕಾರ್ಗಳನ್ನು ಹಿಂಪಡೆಯುವುದಾಗಿ ತಿಳಿಸಿದೆ. ಆಲ್ಟೊ ಕೆ10, ಎಸ್-ಪ್ರೆಸ್ಸೊ,ಬ್ರೆಜ್ಜಾ,ಬಲೆನೋ, ಗ್ರ್ಯಾಂಡ್ ವಿಟಾರಾ ಮತ್ತು ಇಕೋ ಮಾದರಿಯ ಕಾರ್ಗಳನ್ನು ಹಿಂಪಡೆಯಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ. ಕಾರ್ ಉತ್ಪಾದಕ ಸಂಸ್ಥೆಯ ಈ ತುರ್ತು ನಿರ್ಧಾರ ಗ್ರಾಹಕರಲ್ಲಿ ಪ್ರಶ್ನಾರ್ಥಕವಾಗಿ ಉಳಿದುಕೊಂಡಿದೆ.
ಡಿಸೆಂಬರ್ 8ರ 2022 ರಿಂದ ಜನವರಿ 12ರ 2023ರ ನಡುವಿನ ಅವಧಿಯಲ್ಲಿ ಉತ್ಪಾದಿಸಲಾಗಿರುವ ಒಟ್ಟು 17,362 ಕಾರ್ಗಳನ್ನು ಹಿಂಪಡೆಯುವುದಾಗಿ ಮಾರುತಿ ಸುಜುಕಿ ಕಂಪನಿ ಪ್ರಕಟನೆಯಲ್ಲಿ ತಿಳಿಸಿದೆ.

ಕಾರ್ ಹಿಂಪಡೆಯಲು ಕಾರಣವೇನು ?
8 ಡಿಸೆಂಬರ್ 2022 ರಿಂದ 12 ಜನವರಿ 2023ರ ನಡುವಿನ ಅವಧಿಯಲ್ಲಿ ಉತ್ಪಾದಿಸಲಾಗಿರುವ ಕಾರ್ನಲ್ಲಿ ಏರ್ಬ್ಯಾಗ್ ನಿಯಂತ್ರಣದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಗಳನ್ನು ಹಿಂಪಡೆಯುವಂತೆ ಸಂಸ್ಥೆ ತಿಳಿಸಿದೆ. ಈಗಾಗಲೇ ಮಾರುತಿ ಸುಜುಕಿ ಕಂಪನಿಯು ಈ ಅವಧಿಯಲ್ಲಿ ಸಿದ್ಧಪಡಿಸಲಾಗಿರುವ ಕಾರ್ಗಳನ್ನು ಹಿಂಪಡೆದು ಏರ್ಬ್ಯಾಗ್ಗಳನ್ನು ಬದಲಾಯಿಸುವ ಕೆಲಸ ಕೈಗೊಂಡಿದೆ.
ಈಗಾಗಲೇ ಮಾರುತಿ ಸುಜುಕಿ ಸಂಸ್ಥೆಯ ವತಿಯಿಂದ ಗ್ರಾಹಕರ ಸುರಕ್ಷತೆಯ ಹಿತ ದೃಷ್ಠಿಯಿಂದ ಕಾರ್ ಖರೀದಿಸಿದ ಗ್ರಾಹಕರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಈ ಅವಧಿಯಲ್ಲಿ ಉತ್ಪಾದಿಸಲಾಗಿರುವ ಕಾರ್ಗಳನ್ನು ಬಳಕೆ ಮಾಡದಂತೆ ಸೂಚಿಸಲಾಗಿದೆ. ಯಾವುದೇ ತರಹದ ಅಪಘಾತ ಸಂಭವಿಸುವ ಮುನ್ನವೇ ಕಾರ್ಗಳನ್ನು ಹಿಂತಿರುಗಿಸುವಂತೆ ಸೂಚಿಸಲಾಗಿದ್ದು, ದೋಷಪೂರಿತ ಏರ್ಬ್ಯಾಗ್ ಬದಲಾಯಿಸುವ ವರೆಗೆ ಗ್ರಾಹಕರು ಸಹಕರಿಸಬೇಕು ಎಂದು ಸಂಸ್ಥೆ ತಿಳಿಸಿದೆ.

ಬೆಲೆ ಏರಿಕೆಯ ಬಿಸಿ !
ಈ ಹಿಂದೆ ಏಪ್ರಿಲ್ 2022ರಲ್ಲಿ ಮಾರುತಿ ಸುಜುಕಿಯು ತನ್ನ ಎಲ್ಲ ಮಾದರಿಯ ವಾಹನಗಳ ಬೆಲೆಯನ್ನು ಹೆಚ್ಚಿಸಿತ್ತು. ಈಗ ಮತ್ತೇ 1.1 ಪ್ರತಿಶತ ಹೆಚ್ಚಿಸುವ ಮೂಲಕ ಆರ್ಥಿಕ ವರ್ಷದಲ್ಲಿ ಎರಡನೇ ಬಾರಿ ಬೆಲೆ ಏರಿಕೆ ಮಾಡಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ, ಹೆಚ್ಚುತ್ತಿರುವ ಇನ್ಪುಟ್ ವೆಚ್ಚಗಳನ್ನು ಸರಿದೂಗಿಸಲು ತನ್ನ ವಾಹನಗಳ ಬೆಲೆಗಳನ್ನು ಹೆಚ್ಚಿಸುವುದಾಗಿ ಕಂಪನಿಯು ಹೇಳಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications