ಮಲ್ಯ ಅವರ ಪಾಸ್ ಪೋರ್ಟ್ ರದ್ದು : ವಿದೇಶಾಂಗ ಸಚಿವಾಲಯ
ನವದೆಹಲಿ, ಏಪ್ರಿಲ್ 24: ಮನಿ ಲಾಂಡ್ರಿಂಗ್ ಹಾಗೂ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್ ಗೆ ಮಲ್ಯ ಅವರು ಸಮರ್ಪಕ ಉತ್ತರ ನೀಡದ ಕಾರಣ, ಅವರ ಪಾಸ್ ಪೋರ್ಟ್ ರದ್ದುಗೊಳಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಅವರ ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವಂತೆ ವಿದೇಶಾಂಗ ಸಚಿವಾಲಯಕ್ಕೆ ಜಾರಿ ನಿರ್ದೇಶನಾಲಯ ಏಪ್ರಿಲ್ 15ರಂದು ಮನವಿ ಸಲ್ಲಿಸಿತ್ತು.[ಮಲ್ಯ ಒಡೆತನದಲ್ಲಿದ್ದ 6 ಕಂಪನಿಗಳ ಸ್ಥಿತಿ ಗತಿ ಏನಾಗಿದೆ?]

ಈ ಹಿಂದೆ ಅನೇಕ ಬಾರಿ ರೆಡ್ ಕಾರ್ನರ್, ಜಾಮೀನು ರಹಿತ ವಾರೆಂಟ್, ನೋಟಿಸುಗಳು ಜಾರಿಯಾದರೂ ಮಲ್ಯ ಅವರ ಪಾಸ್ ಪೋರ್ಟ್ ಜಪ್ತಿ ಮಾಡಲು ಆಗಿರಲಿಲ್ಲ. ಸದ್ಯ ವಿದೇಶದಲ್ಲಿರುವ ಮಲ್ಯ ಅವರ ಸಂಪರ್ಕ ಕೂಡಾ ಸಾಧ್ಯವಾಗಿರಲಿಲ್ಲ. [ಸಾಲ ಮಾಡಿ ತುಪ್ಪ ತಿಂದವ್ರು ಮಲ್ಯ ಒಬ್ರೇ ಅಲ್ಲ ಸ್ವಾಮೀ!]
ಪಾಸ್ ಪೋರ್ಟ್ ಕಾಯ್ದೆ 1967ರಂತೆ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿಗೆ ಸೂಚನೆ ನೀಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು. [ಉದ್ಯಮಿ ವಿಜಯ್ ಮಲ್ಯ ಮುಂದಿರುವ ನಾಲ್ಕು ಆಯ್ಕೆಗಳು?]
ಹೀಗಾಗಿ, ಮಲ್ಯ ಅವರನ್ನು ವಿಚಾರಣೆಗಾಗಿ ಭಾರತಕ್ಕೆ ಕರೆ ತರುವ ಪ್ರಯತ್ನಗಳು ಅಧಿಕೃತವಾಗಿ ಚಾಲನೆಗೊಂಡಿದೆ ಎನ್ನಬಹುದು. ಆದರೆ, ಕಾನೂನು ಸಮರ ಮುಂದುವರೆಸಲು ನಿರ್ಧರಿಸಿರುವ ಮಲ್ಯ ಅವರು ಉದ್ದೇಶಪೂರ್ವಕ ಸುಸ್ತಿದಾರನೇ ಹೊರತೂ ನಾನು ಪಲಾಯನವಾದಿಯಲ್ಲ ಎಂದು ಘೋಷಿಸಿದ್ದಾರೆ.
ಪಾಸ್ ಪೋರ್ಟ್ ಕಾಯ್ದೆ 1967ರ ಸೆಕ್ಷನ್ 10 (3) ಸಿ ಹಾಗೂ ಎಚ್ ಅನ್ವಯ ಪ್ರಯಾಣಿಕರೊಬ್ಬರ ಮೇಲೆ ಕ್ರಿಮಿನಲ್ ಮೊಕದ್ದಮೆ ನಡೆಯುತ್ತಿದ್ದು, ಅವರ ವಿರುದ್ಧ ಅರೆಸ್ಟ್ ವಾರೆಂಟ್ ಗಾಗಿ ಅರ್ಜಿ ಸಲ್ಲಿಕೆಯಾಗಿದ್ದರೆ(ಈ ಪ್ರಕರಣದಲ್ಲಿ ಬಾಂಬೆ ಹೈಕೋರ್ಟಿನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ), ಅವರ ಪಾಸ್ ಪೋರ್ಟ್ ಹಾಗೂ ಪ್ರಯಾಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಏರ್ ಪೋರ್ಟ್ ನ ಅಧಿಕಾರಿಗಳು ವಶಪಡಿಸಿಕೊಳ್ಳಬಹುದು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications