'ಮೋಸ್ಟ್ ವಾಂಟೆಡ್' ಮೆಹುಲ್ ಚೋಕ್ಸಿ ಬಳಿಯೀಗ ಆಂಟಿಗುವಾ ಪಾಸ್ ಪೋರ್ಟ್!
ನವದೆಹಲಿ, ಜುಲೈ 24 : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರುಪಾಯಿ ವಂಚನೆ ಪ್ರಕರಣದಲ್ಲಿ ನೀರವ್ ಮೋದಿ ಜತೆಗೆ ಬೇಕಾಗಿರುವ ಆತನ ಸಂಬಂಧಿ, ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ಇರುವ ಬಗ್ಗೆ ಹಾಗೂ ಅಲ್ಲಿನ ಸ್ಥಳೀಯ ಪಾಸ್ ಪೋರ್ಟ್ ಪಡೆದಿರುವ ಮೂಲಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಈ ವರ್ಷದ ಜನವರಿಯಲ್ಲಿ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ಮತ್ತು ಕುಟುಂಬದವರು ದೇಶ ಬಿಟ್ಟು ಹೋಗಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನಡೆದ ಸಾವಿರಾರು ಕೋಟಿ ರುಪಾಯಿ ವಂಚನೆ ಪ್ರಕರಣ ಬೆಳಕಿಗೆ ಬರುವ ಹದಿನೈದು ದಿನಕ್ಕೆ ಮುಂಚೆ ಇವರಿಬ್ಬರು ದೇಶ ಬಿಟ್ಟಿದ್ದರು.
ಆಗಿನಿಂದ ತನಿಖಾ ಸಂಸ್ಥೆಗಳು ಇವರಿಬ್ಬರ ಸಲುವಾಗಿ ಶೋಧ ನಡೆಸುತ್ತಿವೆ. ಆ ಪೈಕಿ ನೀರವ್ ಮೋದಿ ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್ ನಲ್ಲಿ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ಇಬ್ಬರ ಮೇಲೂ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೋಟಿಸ್ ಕೂಡ ಹೊರಡಿಸಲಾಗಿದೆ.

ಇಂಟರ್ ಪೋಲ್ ನಿಂದ ಮತ್ತೊಂದು ನೋಟಿಸ್ ಹೊರಡಿಸಿದ ಮೇಲೆ, ಮೆಹುಲ್ ಚೋಕ್ಸಿ ಕಳೆದ ತಿಂಗಳು ಇಲ್ಲಿಗೆ ಬಂದಿದ್ದಾರೆ. ಈ ದೇಶದ ಪಾಸ್ ಪೋರ್ಟ್ ಪಡೆದಿದ್ದಾರೆ ಎಂದು ಆಂಟಿಗುವಾ ಅಧಿಕಾರಿಗಳು ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಕಳೆದ ತಿಂಗಳು, ಜಾರಿ ನಿರ್ದೇಶನಾಲಯವು ಮುಂಬೈ ಕೋರ್ಟ್ ನಲ್ಲಿ, ಇಬ್ಬರನ್ನೂ "ದೇಶಭ್ರಷ್ಟ ಆರ್ಥಿಕ ಅಪರಾಧಿ" ಎಂದು ಘೋಷಿಸುವಂತೆ ಕೇಳಿತ್ತು. ಭಾರತ, ಯುಕೆ ಮತ್ತು ಯುಎಇಯಲ್ಲಿ ಇರುವ ಅವರ ಮೂರು ಸಾವಿರದ ಐನೂರು ಕೋಟಿ ರುಪಾಯಿ ಆಸ್ತಿಯನ್ನು ವಶಪಡಿಸಿಕೊಳ್ಳಲು ಅನುಮತಿ ಕೋರಿತ್ತು.
ಭಾರತಕ್ಕೆ ಹಿಂತಿರುಗಿದರೆ ಸಾರ್ವಜನಿಕರು ನನ್ನನ್ನು ಕೊಂದು ಬಿಡಬಹುದು. ಆದ್ದರಿಂದ ವಾಪಸ್ ಬರುವುದಿಲ್ಲ ಎಂದು ದೇಶಕ್ಕೆ ವಾಪಸ್ ಬರಲು ಮೆಹುಲ್ ಚೋಕ್ಸಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. ತನ್ನ ಮಾಜಿ ಉದ್ಯೋಗಿಗಳು, ಸಾಲಗಾರರಿಂದ ಅಪಾಯವಿದೆ ಎಂಬರ್ಥದಲ್ಲಿ ಚೋಕ್ಸಿ ಹಾಗೆ ಹೇಳಿದ್ದ ಬಗ್ಗೆ ವರದಿಯಾಗಿತ್ತು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಉದ್ಯೋಗಿಗಳ ಸಹಾಯದಿಂದ ಏಳು ವರ್ಷದಿಂದ ವಂಚಿಸುತ್ತಿರುವ ಬಗ್ಗೆ ಇವರಿಬ್ಬರ ಮೇಲೆ ಆರೋಪವಿದೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications