ಮೈಕ್ರೋಸಾಫ್ಟ್ ನಿಂದ 18 ಸಾವಿರ ಉದ್ಯೋಗ ಕಡಿತ
ನೂಯಾರ್ಕ್, ಜು.18: ಸಾಫ್ಟ್ ವೇರ್ ಕ್ಷೇತ್ರದ ದಿಗ್ಗಜ 'ಮೈಕ್ರೊಸಾಫ್ಟ್' ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ತನ್ನ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ವಿತರಿಸಲು ಮುಂದಾಗಿದೆ. ಸರಿಸುಮಾರು 18 ಸಾವಿರಕ್ಕೂ ಅಧಿಕ ಪ್ರಮಾಣದ ಉದ್ಯೋಗ ಕಡಿತಕ್ಕೆ ಸಂಸ್ಥೆ ಮುಂದಾಗಿದೆ.
ಮೈಕ್ರೋಸಾಫ್ಟ್ ಕಂಪೆನಿ 39 ವರ್ಷಗಳ ದೀರ್ಘ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಭಾರತದಲ್ಲಿನ ಕಚೇರಿಗಳ ಮೇಲೆ ಈ ಉದ್ಯೋಗ ಕಡಿತದ ಪ್ರಮಾಣ ಬಹಳ ಕಡಿಮೆ ಇರಲಿದೆ ಎಂದು ಭಾರತೀಯ ಸಂಜಾತ (ಆಂಧ್ರಪ್ರದೇಶದಲ್ಲಿ ಜನನ) ಮೈಕ್ರೊಸಾಫ್ಟ್ನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಒ) ಸತ್ಯಾ ನಾದೆಲ್ಲಾ ಹೇಳಿದ್ದಾರೆ.
ಗುರುವಾರ ನಾಸ್ಡಾಕ್ ನಲ್ಲಿ ಮೈಕ್ರೋಸಾಫ್ಟ್ ಷೇರುಗಳು 44.88 ಯುಎಸ್ ಡಾಲರ್ ನಂತೆ ಶೇ 1.8ರಷ್ಟು ಏರಿಕೆಯಾಗಿದೆ. 2000ರ ನಂತರ ಇದೇ ಮೊದಲ ಬಾರಿಗೆ ಈ ರೀತಿ ಏರಿಕೆ ಕಂಡು ಬಂದಿರುವುದು ಷೇರುಪೇಟೆಯಲ್ಲಿ ಸಂತಸ ಮೂಡಿಸಿದೆ.

ಇತ್ತೀಚೆಗಷ್ಟೇ ಫಿನ್ಲೆಂಡ್ ಮೂಲದ ಮೊಬೈಲ್ ಫೋನ್ ಹ್ಯಾಂಡ್ಸೆಟ್ ತಯಾರಿಕಾ ಕಂಪೆನಿ ನೋಕಿಯಾ ಖರೀದಿಸಿರುವುದರಿಂದ ಎದುರಾದ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳಲು ಹಾಗೂ ವೆಚ್ಚ ಕಡಿತದ ಭಾಗವಾಗಿ ಈ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಉದ್ಯೋಗ ಕಳೆದುಕೊಳ್ಳುವ 18 ಸಾವಿರ ಮಂದಿಯಲ್ಲಿ 12,500 ಉದ್ಯೋಗಿಗಳಲ್ಲಿ ಕಚೇರಿ ಸಿಬ್ಬಂದಿ ಮತ್ತು ಫ್ಯಾಕ್ಟರಿ ಕೆಲಸಗಾರರೂ ಸೇರಿದ್ದಾರೆ. ಈ ಕ್ರಮ ಬಹಳ ನೋವು ತರುವಂತಹದ್ದು, ಕಠಿಣವಾದುದು. ಕಂಪೆನಿಯ ಹಿತದೃಷ್ಟಿಯಿಂದ ಅಷ್ಟೇ ಅನಿವಾರ್ಯವೂ ಆಗಿದೆ ಎಂದು ನಾದೆಲ್ಲಾ ಹೇಳಿದ್ದಾರೆ.
ಭಾರತದಲ್ಲಿನ ಮೈಕ್ರೊಸಾಫ್ಟ್ ಮತ್ತು ನೋಕಿಯಾ ಘಟಕಗಳಲ್ಲಿ 6,500 ನೌಕರರಿದ್ದು, ಕೆಲವರಷ್ಟೇ ನಿರ್ಗಮಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ವಿಶ್ವದ ವಿವಿಧ ದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಮೈಕ್ರೊಸಾಫ್ಟ್ ನಲ್ಲಿ 99,000 ಮಂದಿ ಪೂರ್ಣಾವಧಿ ನೌಕರರಿದ್ದಾರೆ. ಇವರಲ್ಲಿ 58 ಸಾವಿರ ಮಂದಿ ಅಮೆರಿಕದ ಕಚೇರಿಗಳಲ್ಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications