ಏಪ್ರಿಲ್20ರಿಂದ ಟಿವಿ, ಫ್ರಿಜ್, ಫೋನ್ ಆನ್ಲೈನ್ ಖರೀದಿ ಶುರು
ನವದೆಹಲಿ, ಏಪ್ರಿಲ್ 16: ಕೊರೊನಾವೈರಸ್ ನಿಂದಾಗಿ ಲಾಕ್ಡೌನ್ ಎರಡನೇ ಅವಧಿಯಲ್ಲಿ ಏಪ್ರಿಲ್ 20ರ ನಂತರ ಇ ಕಾಮರ್ಸ್ ಸಂಸ್ಥೆಗಳಿಗೆ ವಿನಾಯತಿ ನೀಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯವು ಮಾರ್ಗಸೂಚಿಯಲ್ಲಿ ಹೇಳಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ನಂಥ ಆನ್ ಲೈನ್ ಸೇವಾ ಸಂಸ್ಥೆಗಳು ಪೂರ್ಣಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಹೇಳಿದ್ದಾರೆ.
ಏಪ್ರಿಲ್ 20ರ ನಂತರ ಇ ಕಾಮರ್ಸ್ ವೆಬ್ ತಾಣಗಳ ಸೇವೆ ರೆಡ್ ಅಲರ್ಟ್ ಇರುವ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಆನ್ ಲೈನ್ ಶಾಪಿಂಗ್ ತಾಣಗಳದ ಅಮೆಜಾನ್, ಫ್ಲಿಪ್ ಕಾರ್ಟ್ ಮುಂತಾದ ತಾಣಗಳ ಸೇವೆ ಲಭ್ಯವಿರುವುದಿಲ್ಲ.
ಎಲೆಕ್ಟ್ರಾನಿಕ್ ಸಾಮಾಗ್ರಿಗಳಾದ ಮೊಬೈಲ್ ಫೋನ್, ಟಿವಿ, ರೆಫ್ರಿಜರೇಟರ್, ಲ್ಯಾಪ್ ಟಾಪ್ ಮುಂತಾದವು ಏಪ್ರಿಲ್ 20ರ ನಂತರ ಆನ್ ಲೈನ್ ನಲ್ಲಿ ಮಾರಾಟಕ್ಕೆ ಲಭ್ಯವಿರಲಿದೆ.

ಕರ್ನಾಟಕದಲ್ಲಿ ಸ್ವಿಗ್ಗಿ, ಜೊಮ್ಯಾಟೊ, ಫ್ಲಿಪ್ ಕಾರ್ಟ್, ಬಿಗ್ ಬಜಾರ್, ಸ್ನಾಪ್ ಡೀಲ್, ಮೆಡ್ ಲೈಫ್, ಬಿಗ್ ಬ್ಯಾಸ್ಕೆಟ್, ಅಮೇಜಾನ್, ಎಮ್ ಟಿ ಆರ್ ಫುಡ್, ಅಪೊಲೊ ಫಾರ್ಮಸಿ, ಒಲಾ ಇಟ್ಸ್, ಮಿಲ್ಕ್ ಬ್ಯಾಸ್ಕೆಟ್ ಹೀಗೆ 25ಕ್ಕೂ ಹೆಚ್ಚು ಕಂಪನಿಗಳು ತಮ್ಮ ವ್ಯವಹಾರವನ್ನು ಮುಂದುವರೆಸಬಹುದಾಗಿದೆ.
ಆದರೆ, ಆದೇಶದಲ್ಲಿ ಸೂಚಿಸಿದಂತೆ, ದಿನಸಿ, ಡೆಲವರಿ ಬಾಯ್ಸ್, ಟೆಲಿಕಾಂ, ವೈದ್ಯಕೀಯ, ಡೇಟಾ ಸೆಂಟರ್, ಬ್ಯಾಂಕ್, ವಿಮೆ, ಕೆಲವು ಸೆಕ್ಯುರಿಟಿ ಏಜೆನ್ಸಿ ಕಾರ್ಯ ನಿರ್ವಹಿಸಲು ಅನುಮತಿ ಇದ್ದು ,ಎಲ್ಲರಿಗೂ ಪಾಸ್ ಅಗತ್ಯವಿದೆ. ಈಗ ಆನ್ ಲೈನ್ ನಲ್ಲಿ ಇ ಪಾಸ್ ವಿತರಣೆ ಆರಂಭವಾಗಿದೆ. ಇದಲ್ಲದೆ ಎಮರ್ಜೆನ್ಸಿ ಪಾಸ್ ಪಡೆದುಕೊಳ್ಳಬಹುದು. ಸಾಮಾಗ್ರಿ ವಿತರಣೆ ಮಾಡುವ ವಾಹನದಲ್ಲಿ ಮೂವರಿಗೆ ಒಮ್ಮೆಗೆ ತೆರಳಲು ಅನುಮತಿ ಇದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications