ಮಲ್ಟಿಪ್ಲೆಕ್ಸ್ ರೀ ಓಪನ್ ಆದ್ಮೇಲೆ ಟಿಕೆಟ್ ಬೆಲೆ ಶೇ 15ರಷ್ಟು ಕಡಿತ!
ಮುಂಬೈ, ಜುಲೈ 28: ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬಂದ್ ಆಗಿರುವ ಚಿತ್ರಮಂದಿರಗಳು ಆಗಸ್ಟ್ ತಿಂಗಳಿನಿಂದ ಮತ್ತೆ ಆರಂಭವಾಗುವ ಎಲ್ಲಾ ಲಕ್ಷಣಗಳು ತೋರುತ್ತಿದೆ. ಜುಲೈ 31ಕ್ಕೆ ಅನ್ ಲಾಕ್ 2.0 ಮುಗಿಯಲಿದ್ದು, ಆಗಸ್ಟ್ 1ರಿಂದ ಆರಂಭವಾಗಲಿರುವ ಅನ್ ಲಾಕ್ 3.0ರಲ್ಲಿ ಚಿತ್ರಮಂದಿರ ಹಾಗೂ ಜಿಮ್ ಆರಂಭಕ್ಕೆ ಅನುಮತಿ ಸಿಗುವ ಸಾಧ್ಯತೆ ಹೆಚ್ಚಿದೆ.
Recommended Video
ಚಿತ್ರಮಂದಿರಗಳು ರೀ ಓಪನ್ ಕುರಿತಂತೆ ಮಾರ್ಗಸೂಚಿ ಇನ್ನೂ ಪ್ರಕಟವಾಗಿಲ್ಲ, ಈ ನಡುವೆ ಮಲ್ಟಿಪ್ಲೆಕ್ಸ್ ಗಳ ಪೈಕಿ ಪಿವಿಆರ್ ಸಿನಿಮಾಸ್, ಐನಾಕ್ಸ್ ಲೀಷರ್ ಸಂಸ್ಥೆಗಳು ತಮ್ಮ ಚಿತ್ರಮಂದಿರ ಜಾಲಗಳಲ್ಲಿ ಟಿಕೆಟ್ ಬೆಲೆ ಶೇ 15ರಷ್ಟು ಕಡಿತಗೊಳಿಸುವುದಾಗಿ ತಿಳಿಸಿವೆ.
ಎಕಾನಾಮಿಕ್ಸ್ ಟೈಮ್ಸ್ ವರದಿಯಂತೆ ಪಿವಿಆರ್ ಹಾಗೂ ಐನಾಕ್ಸ್ ಸಂಸ್ಥೆಗಳು ಟಿಕೆಟ್ ದರ ಇಳಿಕೆಗೆ ಮುಂದಾಗಿವೆ. ಆದರೆ, ಎಷ್ಟು ಪ್ರಮಾಣ ಎಂಬುದು ಇನ್ನೂ ನಿರ್ಧಾರವಾಗಿಲ್ಲ, ಶೇ 10 ರಿಂದ 15ರಷ್ಟು ದರ ಇಳಿಕೆ ಮಾಡುವ ಸಾಧ್ಯತೆಯಿದೆ.

ಟಿಕೆಟ್ ದರದ ಮೇಲೆ ರಿಯಾಯಿತಿ, ದರ ಇಳಿಕೆ ಮಾಡುವ ಮೂಲಕ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಕರೆತರುವುದು ನಮ್ಮ ಉದ್ದೇಶ ಎಂದು ಪಿವಿಆರ್ ಸಿಇಒ ಗೌತಮ್ ದತ್ತಾ ಹೇಳಿದ್ದಾರೆ.
ಮೊದಲ ಎರಡು ವಾರ ಬೆಲೆ ಕಡಿತ ಅನಿವಾರ್ಯ, ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದು ಸುರಕ್ಷಿತವಾಗಿದೆ ಎಂಬ ಭಾವದಿಂದ ಸಿನಿಮಾ ನೋಡುವಂತಾಗಬೇಕು ಎಂದಿದ್ದಾರೆ.
ಚಿತ್ರಮಂದಿರಗಳನ್ನು ಪುನರ್ ಆರಂಭಿಸಲು ಮಾಹಿತಿ ಮತ್ತು ಪ್ರಸಾರ ಇಲಾಖೆ ಶಿಫಾರಸು ಮಾಡಿದ್ದು, ಗೃಹ ಇಲಾಖೆ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications