ಖಾದಿ ಪ್ರಾಕೃತಿಕ್ ಪೇಂಟ್ ಪ್ರಚಾರ ರಾಯಭಾರಿಯಾದ ಸಚಿವ
ನವದೆಹಲಿ, ಜುಲೈ 6: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಮ್ಮನ್ನು ʻಖಾದಿ ಪ್ರಾಕೃತಿಕ್ ಪೇಂಟ್ʼನ ʻಪ್ರಚಾರ ರಾಯಭಾರಿʼ ಆಗಿ ಘೋಷಿಸಿಕೊಂಡಿದ್ದಾರೆ.
ಸಗಣಿಯಿಂದ ತಯಾರಿಸುವ ಬಣ್ಣಗಳ ಉತ್ಪಾದನೆಗೆ ಯುವ ಉದ್ಯಮಿಗಳನ್ನು ಉತ್ತೇಜಿಸಲು ದೇಶಾದ್ಯಂತ ಪ್ರಚಾರ ಕೈಗೊಳ್ಳುವುದಾಗಿ ಸಚಿವ ನಿತಿನ್ ಹೇಳಿದರು. ಜೈಪುರದಲ್ಲಿ ಇಂದು ಭಾರತದ ಮೊದಲ ಮತ್ತು ಏಕೈಕ ಸಗಣಿಯಿಂದ ತಯಾರಿಸಿದ ಖಾದಿ ಪ್ರಕೃತಿಕ್ ಪೇಂಟ್ನ ಹೊಸ ಸ್ವಯಂಚಾಲಿತ ಉತ್ಪಾದನಾ ಘಟಕವನ್ನು ವರ್ಚ್ಯುಯಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ ಸಚಿವರು ತಂತ್ರಜ್ಞಾನದ ಹೊಸಶೋಧವನ್ನು ಶ್ಲಾಘಿಸಿದರು. ಇದು ದೇಶದ ಗ್ರಾಮೀಣ ಮತ್ತು ಕೃಷಿ ಆಧಾರಿತ ಆರ್ಥಿಕತೆಯನ್ನು ಸಶಕ್ತಗೊಳಿಸುವಲ್ಲಿ ದೀರ್ಘಕಾಲೀನ ಪರಿಣಾಮ ಹೊಂದಿರಲಿದೆ ಎಂದು ಹೇಳಿದರು.
ಲಕ್ಷಾಂತರ ಕೋಟಿ ರೂ.ಗಳ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರೂ ಸಹ ಈ ಉತ್ಪಾದನಾ ಘಟಕವನ್ನು ಉದ್ಘಾಟಿಸಿದಷ್ಟು ಸಂತೋಷ ಮತ್ತು ತೃಪ್ತಿ ದೊರೆತಿರಲಿಲ್ಲ ಎಂದು ಗಡ್ಕರಿ ಹೇಳಿದರು. ಯಶಸ್ವಿ ಸಂಶೋಧನೆಗಾಗಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಡು ಬಡವರ ಅನುಕೂಲಕ್ಕಾಗಿ ಸುಸ್ಥಿರ ಅಭಿವೃದ್ಧಿಯನ್ನು ಸೃಷ್ಟಿಸುವ ಅಪಾರ ಸಾಮರ್ಥ್ಯವನ್ನು ʻಖಾದಿ ಪ್ರಕೃತಿಕ್ ಪೇಂಟ್ʼ ಹೊಂದಿದೆ ಎಂದ ಅವರು, ಪ್ರತಿ ಹಳ್ಳಿಯಲ್ಲಿ ಇದರ ಘಟಕವನ್ನು ಸ್ಥಾಪಿಸುವ ಗುರಿಯನ್ನು ಹೊಂದಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಗಡ್ಕರಿ ನಾಗ್ಪುರದ ತಮ್ಮ ನಿವಾಸದಲ್ಲಿ ಬಳಸಲು 1,000 ಲೀಟರ್ (ಡಿಸ್ಟೆಂಪರ್ ಮತ್ತು ಎಮಲ್ಷನ್ನ ತಲಾ 500 ಲೀಟರ್) ʻಖಾದಿ ಪ್ರಕೃತಿಕ್ ಪೇಂಟ್ʼಗಾಗಿ ಬೇಡಿಕೆ ಸಲ್ಲಿಸಿದರು.
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಘಟಕವಾಗಿರುವ ಜೈಪುರದ ʻಕುಮಾರಪ್ಪ ರಾಷ್ಟ್ರೀಯ ಹಸ್ತ ತಯಾರಿಕಾ ಕಾಗದ ಸಂಸ್ಥೆʼಯ (ಕೆಎಮ್ಎಚ್ಪಿಐ) ಕ್ಯಾಂಪಸ್ನಲ್ಲಿ ಹೊಸ ಘಟಕವನ್ನು ಸ್ಥಾಪಿಸಲಾಗಿದೆ. ಈ ಹಿಂದೆ ʻಪ್ರಾಕೃತಿಕ್ ಪೇಂಟ್ʼ ಅನ್ನು ಮಾದರಿ ಯೋಜನೆ ಅಡಿಯಲ್ಲಿ ಕೈಯಿಂದಲೇ ತಯಾರಿಸಲಾಗುತ್ತಿತ್ತು. ಹೊಸ ಉತ್ಪಾದನಾ ಘಟಕವನ್ನು ಸ್ಥಾಪಿಸಿರುವುದರಿಂದ ʻಪ್ರಾಕೃತಿಕ್ ಪೇಂಟ್ʼನ ಉತ್ಪಾದನಾ ಸಾಮರ್ಥ್ಯ ದ್ವಿಗುಣಗೊಳ್ಳಲಿದೆ. ಪ್ರಸ್ತುತ ʻಪ್ರಾಕೃತಿಕ್ ಪೇಂಟ್ʼನ ದೈನಂದಿನ ಉತ್ಪಾದನೆಯು 500 ಲೀಟರ್ ಆಗಿದ್ದು, ಇದನ್ನು ದಿನಕ್ಕೆ 1000 ಲೀಟರ್ಗಳಿಗೆ ಹೆಚ್ಚಿಸಲಾಗುವುದು.

''ಹೊಸ ಘಟಕವು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳನ್ನು ಹೊಂದಿದ್ದು, ಗುಣಮಟ್ಟ ಹಾಗೂ ಏಕರೂಪತೆಯ ದೃಷ್ಟಿಯಿಂದ ಉತ್ಪನ್ನದ ಅತ್ಯುನ್ನತ ಮಾನದಂಡಗಳನ್ನು ಖಾತರಿಪಡಿಸುತ್ತದೆ,'' ಎಂದು ʻಕೆವಿಐಸಿʼ ಅಧ್ಯಕ್ಷ ವಿನಯ್ ಕುಮಾರ್ ಸಕ್ಸೇನಾ ಅವರು ಹೇಳಿದರು.

ಪರಿಸರ ಸ್ನೇಹಿ ಪೇಂಟ್:
ʻಖಾದಿ ಪ್ರಾಕೃತಿಕ್ ಪೇಂಟ್ʼ ಅನ್ನು ಗಡ್ಕರಿ 2021ರ ಜನವರಿ 12 ರಂದು ಉದ್ಘಾಟಿಸಿದ್ದರು. ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ದೇಶಾದ್ಯಂತ ಸ್ವಯಂ ಉದ್ಯೋಗವನ್ನು ಸೃಷ್ಟಿಸುವ ಅವಳಿ ಉದ್ದೇಶಗಳೊಂದಿಗೆ ಈ ಪೇಂಟ್ ಅನ್ನು ಪರಿಚಯಿಸಲಾಗಿದೆ. ಈ ಆವಿಷ್ಕಾರದಿಂದ ಗರಿಷ್ಠ ಜನರು ಪ್ರಯೋಜನ ಪಡೆಯಲು, ʻಕೆವಿಐಸಿʼಯು ಈ ಯೋಜನೆಯನ್ನು ಉದ್ಯೋಗ ಸೃಷ್ಟಿಗಾಗಿ ಕೇಂದ್ರ ಸರಕಾರದ ಪ್ರಮುಖ ಯೋಜನೆಯಾದ ʻಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮʼದ (ಪಿಎಂಇಜಿಪಿ) ಅಡಿಯಲ್ಲಿ ಸೇರಿಸಿದೆ. ʻಡಿಸ್ಟೆಂಪರ್ʼ ಮತ್ತು ʻಎಮಲ್ಷನ್ʼ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರುವ ಖಾದಿ ಪ್ರಾಕೃತಿಕ್ ಪೇಂಟ್ "ಅಷ್ಟಾಲಾಭ್" ಅನ್ನು ಒಳಗೊಂಡಿದೆ;
ಅಂದರೆ ಬ್ಯಾಕ್ಟೀರಿಯಾ ಪ್ರತಿರೋಧಕ, ಶಿಲೀಂಧ್ರ ಪ್ರತಿರೋಧಕ ಮತ್ತು ನೈಸರ್ಗಿಕ ಉಷ್ಣ ನಿರೋಧಕ ಗುಣಲಕ್ಷಣಗಳಂತಹ ಎಂಟು ಪ್ರಯೋಜನಗಳನ್ನು ಒಳಗೊಂಡಿದೆ. ಈ ಪೇಂಟ್ ಅಗ್ಗದ ದರದ, ಪರಿಸರ ಸ್ನೇಹಿ, ವಿಷಕಾರಿಯಲ್ಲದ ಹಾಗು ವಾಸನಾರಹಿತವಾದುದಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications