ಮುಂಬೈ ವಿಮಾನ ನಿಲ್ದಾಣದ ಶೇ 74ರಷ್ಟು ಶೇರು ಅದಾನಿ ಸಮೂಹದ ಪಾಲಿಗೆ
ಮುಂಬೈ, ಆಗಸ್ಟ್ 31: ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹವು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಎಂಐಎಎಲ್) ಶೇ 74ರಷ್ಟು ಶೇರುಗಳನ್ನು ಪಡೆದುಕೊಂಡಿದೆ.
ವ್ಯವಹಾರದ ಅಡಿಯಲ್ಲಿ ಅದಾನಿ ಸಮೂಹವು ಜಿವಿಕೆ ಸಮೂಹದ ಶೇ 50.5ರಷ್ಟು ಶೇರುಗಳನ್ನು ಪಡೆದುಕೊಳ್ಳಲಿದೆ. ಜತೆಗೆ ಅಲ್ಪ ಪ್ರಮಾಣದ ಪಾಲುದಾರರಾಗಿರುವ ದಕ್ಷಿಣಾ ಆಫ್ರಿಕಾ ಏರ್ ಪೋರ್ಟ್ ಕಂಪೆನಿ (ಎಸಿಎಸ್ಎ) ಮತ್ತು ಬಿಡ್ವೆಸ್ಟ್ಗಳಿಂದ ಶೇ 23.5ರಷ್ಟು ಶೇರುಗಳನ್ನು ಖರೀದಿ ಮಾಡಲಿದೆ. ದೇಶದ ಎರಡನೆಯ ಅತಿದೊಡ್ಡ ವಿಮಾನ ನಿಲ್ದಾಣ ಎಂಐಎಎಲ್ನಲ್ಲಿ ಎಸಿಎಸ್ಎ ಶೇ 10 ಮತ್ತು ಬಿಡ್ವೆಸ್ಟ್ ಶೇ 13.5 ಶೇರುಗಳನ್ನು ಹೊಂದಿದೆ.
ಮೊದಲ ನಿರಾಕರಣೆಯ ಹಕ್ಕು ತಮಗೆ ಇರುವುದರಿಂದ ಮಾರಾಟದ ಪ್ರಯತ್ನಗಳಿಗೆ ತಡೆ ನೀಡಬೇಕು ಎಂದು ಜಿವಿಕೆ ಈ ಹಿಂದೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ ಕಂಪೆನಿಗೆ ಸಾಕಷ್ಟು ಪ್ರಮಾಣದ ನಿಧಿ ಸಂಗ್ರಹಿಸಲು ಸಾಧ್ಯವಾಗಿರಲಿಲ್ಲ. ಒಟ್ಟು ಆರು ವಿಮಾನ ನಿಲ್ದಾಣಗಳಲ್ಲಿ ಪ್ರಮುಖ ಪಾಲುದಾರಿಕೆ ಹೊಂದುವ ಮೂಲಕ ಅಸಾನಿ ಸಮೂಹವು ಎರಡನೆಯ ಅತಿ ದೊಡ್ಡ ಖಾಸಗಿ ವಿಮಾನ ನಿಲ್ದಾಣ ನಿರ್ವಾಹಕ ಎನಿಸಿಕೊಂಡಿದೆ. ದೆಹಲಿ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳನ್ನು ನಿರ್ವಹಿಸುತ್ತಿರುವ ಜಿಎಂಆರ್ ಸಮೂಹ ದೊಡ್ಡ ಖಾಸಗಿ ಕಂಪೆನಿಯಾಗಿದೆ.

ಜಿವಿಕೆಗೆ ಈ ಪಾಲುದಾರಿಕೆಯನ್ನು ಉಳಿದುಕೊಳ್ಳಲು ಅವಕಾಶ ನೀಡುವಂತೆ ಜಿವಿಕೆ ಮತ್ತು ಅದಾನಿ ಸಮೂಹ ಒಪ್ಪಂದ ಮಾಡಿಕೊಂಡಿವೆ. ಪ್ರತಿಯಾಗಿ ಜಿವಿಕೆ ಪವರ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಪಡೆದುಕೊಂಡಿರುವ ಸಾಲಕ್ಕೆ ಅನುಗುಣವಾಗಿ ಅದು ಖಾತರಿಯನ್ನು ಬಿಡುಗಡೆ ಮಾಡಲಿದೆ.
-
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ











Click it and Unblock the Notifications