ನಾರಾಯಣ ಮೂರ್ತಿ ಕಿರಿಕಿರಿಯಿಂದಲೇ ಸಿಕ್ಕಾ ರಾಜಿನಾಮೆ: ಇನ್ಫೋಸಿಸ್
ಇನ್ಫೋಸಿಸ್ ಮುಖ್ಯಸ್ಥ ಸ್ಥಾನದಿಂದ ವಿಶಾಲ್ ಸಿಕ್ಕಾ ರಾಜಿನಾಮೆಗೆ ನಾರಾಯಣ ಮೂರ್ತಿ ಕಾರಣ. ಕಂಪನಿಯ ಸಹ ಸಂಸ್ಥಾಪಕ ಮೂರ್ತಿ ಅವರು, ಸಿಕ್ಕಾ ವಿರುದ್ಧ ಪತ್ರ ವ್ಯವಹಾರ ನಡೆಸಿದ್ದೇ ಕಾರಣ. ಬಿಎಸ್ ಇ ಗೆ ಪತ್ರ ಬರೆದ ಇನ್ಫೋಸಿಸ್ ಆಡಳಿತ ಮಂಡಳಿ.
ಬೆಂಗಳೂರು, ಆಗಸ್ಟ್ 18: ಇನ್ಫೋಸಿಸ್ ಮುಖ್ಯಸ್ಥರಾಗಿದ್ದ ವಿಶಾಲ್ ಸಿಕ್ಕಾ ಅವರ ರಾಜಿನಾಮೆಗೆ, ಇನ್ಫೋಸಿಸ್ ನ ಸಹ ಸಂಸ್ಥಾಪಕ ಹಾಗೂ ಮಾಜಿ ಮುಖ್ಯಸ್ಥ ನಾರಾಯಣ ಮೂರ್ತಿಯವರ ನಿರಂತರ ಕಿರಿಕಿರಿಯೇ ಕಾರಣ ಎಂದು ಇನ್ಫೋಸಿಸ್ ಸಂಸ್ಥೆಯ ಆಡಳಿತ ಮಂಡಳಿಯೇ ದೂರಿದೆ.
ಸಿಕ್ಕಾ ರಾಜಿನಾಮೆ ಹಿನ್ನೆಲೆಯಲ್ಲಿ, ದೇಶೀಯ ಷೇರು ಮಾರುಕಟ್ಟೆಯಾದ ಬಿಎಸ್ ಇ ಗೆ ಪತ್ರ ಬರೆದಿರುವ ಇನ್ಫೋಸಿಸ್, ಸಿಕ್ಕಾ ರಾಜಿನಾಮೆಯ ಹಿಂದಿನ ಕಾರಣಗಳನ್ನು ಉಲ್ಲೇಖಿಸಿದೆ.

ಅದರಲ್ಲಿ, ಸಿಕ್ಕಾ ಅವರು, ಇನ್ಫೋಸಿಸ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಆಡಳಿತಾಧಿಕಾರಿಯಾಗಿ ನೇಮಕಗೊಂಡ ನಂತರ, ಹಲವಾರು ಬದಲಾವಣೆಗಳನ್ನು ತಂದಿದ್ದರು. ಇದರ ವಿರುದ್ಧ ಕಿಡಿ ಕಾರಿದ ನಾರಾಯಣ ಮೂರ್ತಿ, ಸಿಕ್ಕಾ ವಿರುದ್ಧ ಪತ್ರ ಚಳುವಳಿಯನ್ನೇ ಆರಂಭಿಸಿದರು. ಇಂಥದ್ದೊಂದು 'ಹಾದಿ ತಪ್ಪಿದ' ಅಭಿಯಾನದ ಕಾರಣದಿಂದಲೇ ಸಿಕ್ಕಾ ಅವರು ರಾಜಿನಾಮೆ ಸಲ್ಲಿಸಬೇಕಾಯಿತು ಎಂದು ಆಡಳಿತ ಮಂಡಳಿ ಹೇಳಿದೆ.
ಇದರ ಜತೆಗೆ, ಸಿಕ್ಕಾ ಅವರ ರಾಜಿನಾಮೆಯು ಈಗಾಗಲೇ ಅಂಗೀಕಾರವಾಗಿದ್ದು ಯು.ಬಿ. ಪ್ರವೀಣ್ ರಾವ್ ಅವರನ್ನು ಆಯ್ಕೆ ಮಾಡಲಾಗಿದ್ದು, ಅಂತಾರಾಷ್ಟ್ರೀಯ ಕಾರ್ಪೊರೇಟ್ ದರ್ಜೆಗನುಗುಣವಾಗಿಯೇ ಇನ್ಫೋಸಿಸ್ ತನ್ನ ಕಾಯಕ ಮುಂದುವರಿಸಲಿದೆ ಎಂದು ಅದು ಹೇಳಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications